‘ಠಾಣೆ ವ್ಯಾಪ್ತಿಯ ಗಣಪತಿ ವೃತ್ತದ ಬಳಿ ‘ಸಂತೃಪ್ತಿ ಉತ್ತರ ಕರ್ನಾಟಕ ಜವಾರಿ ಊಟದ ಮನೆ’ ಎಂಬ ಹೋಟೆಲ್ ಇದೆ. ಭಾನುವಾರ ರಾತ್ರಿ ಕೆಲಸಗಾರರೆಲ್ಲಾ ಕೆಲಸ ಮುಗಿಸಿ ಹೋಟೆಲ್ಗೆ ಬೀಗ ಹಾಕಿ ಮನೆಗೆ ಹೋಗಿದ್ದಾರೆ. ಬಳಿಕ ಅಡುಗೆ ಕೋಣೆಯಲ್ಲಿದ್ದ ಸಿಲಿಂಡರ್ನಿಂದ ಅನಿಲ ಸೋರಿಕೆಯಾಗಿರಬಹುದು. ಬೆಳಿಗ್ಗೆ 7 ಗಂಟೆ ಸುಮಾರಿಗೆ ಹೋಟೆಲ್ ಬಾಗಿಲು ತೆಗೆದಿದ್ದ ಮಹೇಶ್, ಅಡುಗೆ ಮಾಡಲು ಒಳಗೆ ಹೋಗಿದ್ದಾರೆ. ಅನಿಲ ಸೋರಿಕೆಯಾಗಿರುವುದು ಅವರ ಗಮನಕ್ಕೆ ಬಂದಿಲ್ಲ. ಅವರು ಸ್ಟೌ ಹಚ್ಚಲು ಮುಂದಾದಾಗ ಬೆಂಕಿ ಹೊತ್ತಿಕೊಂಡಿದೆ’ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.