‘ಮೂಡಲಪಾಳ್ಯದ ಅನ್ನಪೂರ್ಣೇಶ್ವರಿ ನಗರದಲ್ಲಿ ವಾಸವಿದ್ದ ಬೆಟ್ಟಯ್ಯ ಎಂಬುವರು ಭಾರತ್ ಭವಾನಿ ಗ್ಯಾಸ್ ಹೆಸರಿನ ಏಜೆನ್ಸಿ ನಡೆಸುತ್ತಿದ್ದರು. ಮೂಡಲಪಾಳ್ಯ ವೃತ್ತದ ಬಳಿಯ ತಮ್ಮ ಮನೆಯ ಎದುರು ಸಣ್ಣ ಸಿಲಿಂಡರ್ಗಳಿಗೆ ಅಕ್ರಮವಾಗಿ ಅಡುಗೆ ಅನಿಲ ಮರುಪೂರಣ (ಫಿಲ್ಲಿಂಗ್) ಮಾಡುತ್ತಿದ್ದರು. ಈ ವೇಳೆ ಅನಿಲ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡಿದೆ. ಕೂಡಲೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದರಿಂದ ಅವರು ಸ್ಥಳಕ್ಕೆ ಬಂದು ಬೆಂಕಿ ನಂದಿಸಿದ್ದಾರೆ. ಹೀಗಾಗಿ ದೊಡ್ಡ ಅನಾಹುತವೊಂದು ತಪ್ಪಿದೆ’ ಎಂದು ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ್ ಪಾಟೀಲ ತಿಳಿಸಿದರು.