ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಿಕೆಶಿ ಬಂಧನ: ರಾಮನಗರದಲ್ಲಿ ಬಂದ್, ಪ್ರತಿಭಟನೆಗಳ ನಷ್ಟ ಲೆಕ್ಕಾಚಾರಕ್ಕೆ ನೇಮಕ

Last Updated 3 ಫೆಬ್ರುವರಿ 2020, 8:48 IST
ಅಕ್ಷರ ಗಾತ್ರ

ಬೆಂಗಳೂರು: "ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಕನಕಪುರ ಶಾಸಕ ಡಿ.ಕೆ.ಶಿವಕುಮಾರ್ ಅವರನ್ನು ಬಂಧಿಸಿದ ವೇಳೆ ರಾಮನಗರ ಜಿಲ್ಲೆಯಲ್ಲಿ ನಡೆದ ಬಂದ್ ಮತ್ತು ಪ್ರತಿಭಟನೆಗಳಿಂದ ಸಾರ್ವಜನಿಕ ಆಸ್ತಿ-ಪಾಸ್ತಿಗೆ ಉಂಟಾದ ನಷ್ಟದ ಪ್ರಮಾಣ ನಿರ್ಧರಿಸಲು ಎಕ್ಸಿಕ್ಯುಟಿವ್ ಎಂಜಿನಿಯರ್ ನೇಮಕ ಮಾಡಲಾಗಿದೆ" ಎಂದು ಸರ್ಕಾರ ಹೈಕೋರ್ಟ್ ವಿಭಾಗೀಯ ನ್ಯಾಯಪೀಠಕ್ಕೆ ಮಾಹಿತಿ ನೀಡಿದೆ.

ಈ ಸಂಬಂಧ ಕನಕಪುರ ತಾಲ್ಲೂಕಿನ ರವಿಕುಮಾರ್ ಕೆಂಚನಹಳ್ಳಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್‌ ಎಸ್‌.ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು ನೀಡಿದ ಈ ಮಾಹಿತಿಗೆ ನ್ಯಾಯಪೀಠ, "ಎಕ್ಸಿಕ್ಯುಟಿವ್ ಎಂಜಿನಿಯರ್ ಅವರ ನೇಮಕವನ್ನು ಒಪ್ಪಲು ಸಾಧ್ಯವಿಲ್ಲ. ಹಾಗೆಯೇ ಅವರನ್ನು ತಜ್ಞರು ಎಂದೂ ಪರಿಗಣಿಸಲು ಆಗುವುದಿಲ್ಲ" ಎಂದು ತಿಳಿಸಿದೆ.

"ಉನ್ನತ ಮಟ್ಟದ ಜ್ಞಾನ ಹೊಂದಿರುವ ತಜ್ಞರನ್ನು ನೇಮಕ ಮಾಡಿ ಆ ಕುರಿತು ವರದಿ ನೀಡಿ" ಎಂದು ಸೂಚಿಸಿ ವಿಚಾರಣೆ ಮುಂದೂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT