<p><strong>ಬೆಂಗಳೂರು:</strong> "ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಕನಕಪುರ ಶಾಸಕ ಡಿ.ಕೆ.ಶಿವಕುಮಾರ್ ಅವರನ್ನು ಬಂಧಿಸಿದ ವೇಳೆ ರಾಮನಗರ ಜಿಲ್ಲೆಯಲ್ಲಿ ನಡೆದ ಬಂದ್ ಮತ್ತು ಪ್ರತಿಭಟನೆಗಳಿಂದ ಸಾರ್ವಜನಿಕ ಆಸ್ತಿ-ಪಾಸ್ತಿಗೆ ಉಂಟಾದ ನಷ್ಟದ ಪ್ರಮಾಣ ನಿರ್ಧರಿಸಲು ಎಕ್ಸಿಕ್ಯುಟಿವ್ ಎಂಜಿನಿಯರ್ ನೇಮಕ ಮಾಡಲಾಗಿದೆ" ಎಂದು ಸರ್ಕಾರ ಹೈಕೋರ್ಟ್ ವಿಭಾಗೀಯ ನ್ಯಾಯಪೀಠಕ್ಕೆ ಮಾಹಿತಿ ನೀಡಿದೆ.</p>.<p>ಈ ಸಂಬಂಧ ಕನಕಪುರ ತಾಲ್ಲೂಕಿನ ರವಿಕುಮಾರ್ ಕೆಂಚನಹಳ್ಳಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್ ಎಸ್.ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.</p>.<p>ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು ನೀಡಿದ ಈ ಮಾಹಿತಿಗೆ ನ್ಯಾಯಪೀಠ, "ಎಕ್ಸಿಕ್ಯುಟಿವ್ ಎಂಜಿನಿಯರ್ ಅವರ ನೇಮಕವನ್ನು ಒಪ್ಪಲು ಸಾಧ್ಯವಿಲ್ಲ. ಹಾಗೆಯೇ ಅವರನ್ನು ತಜ್ಞರು ಎಂದೂ ಪರಿಗಣಿಸಲು ಆಗುವುದಿಲ್ಲ" ಎಂದು ತಿಳಿಸಿದೆ.</p>.<p>"ಉನ್ನತ ಮಟ್ಟದ ಜ್ಞಾನ ಹೊಂದಿರುವ ತಜ್ಞರನ್ನು ನೇಮಕ ಮಾಡಿ ಆ ಕುರಿತು ವರದಿ ನೀಡಿ" ಎಂದು ಸೂಚಿಸಿ ವಿಚಾರಣೆ ಮುಂದೂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> "ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಕನಕಪುರ ಶಾಸಕ ಡಿ.ಕೆ.ಶಿವಕುಮಾರ್ ಅವರನ್ನು ಬಂಧಿಸಿದ ವೇಳೆ ರಾಮನಗರ ಜಿಲ್ಲೆಯಲ್ಲಿ ನಡೆದ ಬಂದ್ ಮತ್ತು ಪ್ರತಿಭಟನೆಗಳಿಂದ ಸಾರ್ವಜನಿಕ ಆಸ್ತಿ-ಪಾಸ್ತಿಗೆ ಉಂಟಾದ ನಷ್ಟದ ಪ್ರಮಾಣ ನಿರ್ಧರಿಸಲು ಎಕ್ಸಿಕ್ಯುಟಿವ್ ಎಂಜಿನಿಯರ್ ನೇಮಕ ಮಾಡಲಾಗಿದೆ" ಎಂದು ಸರ್ಕಾರ ಹೈಕೋರ್ಟ್ ವಿಭಾಗೀಯ ನ್ಯಾಯಪೀಠಕ್ಕೆ ಮಾಹಿತಿ ನೀಡಿದೆ.</p>.<p>ಈ ಸಂಬಂಧ ಕನಕಪುರ ತಾಲ್ಲೂಕಿನ ರವಿಕುಮಾರ್ ಕೆಂಚನಹಳ್ಳಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್ ಎಸ್.ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.</p>.<p>ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು ನೀಡಿದ ಈ ಮಾಹಿತಿಗೆ ನ್ಯಾಯಪೀಠ, "ಎಕ್ಸಿಕ್ಯುಟಿವ್ ಎಂಜಿನಿಯರ್ ಅವರ ನೇಮಕವನ್ನು ಒಪ್ಪಲು ಸಾಧ್ಯವಿಲ್ಲ. ಹಾಗೆಯೇ ಅವರನ್ನು ತಜ್ಞರು ಎಂದೂ ಪರಿಗಣಿಸಲು ಆಗುವುದಿಲ್ಲ" ಎಂದು ತಿಳಿಸಿದೆ.</p>.<p>"ಉನ್ನತ ಮಟ್ಟದ ಜ್ಞಾನ ಹೊಂದಿರುವ ತಜ್ಞರನ್ನು ನೇಮಕ ಮಾಡಿ ಆ ಕುರಿತು ವರದಿ ನೀಡಿ" ಎಂದು ಸೂಚಿಸಿ ವಿಚಾರಣೆ ಮುಂದೂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>