‘ಕೆರೆ ಜಾಗದಲ್ಲಿ ಪಾರ್ಕ್ ನಿರ್ಮಾಣದ ವಿಚಾರವಾಗಿ ಅಧಿಕಾರಿಗಳು ಪ್ರಸ್ತಾವ ಸಲ್ಲಿಸಿದ್ದಾರೆ. ಈ ಹಿಂದೆ ಮಂಜೂರಾಗಿದ್ದ ಕಾಮಗಾರಿಗಳನ್ನು ಕಳೆದ ಸರ್ಕಾರ ರದ್ದು ಮಾಡಿತ್ತು. ಈಗ ಮತ್ತೆ ಸರ್ಕಾರಿ ಆಸ್ತಿ ಉಳಿಸಿ, ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಲು ಮನವಿ ಮಾಡಿದ್ದಾರೆ. ಈ ಬಗ್ಗೆ ತೀರ್ಮಾನ ಮಾಡುವ ಮುನ್ನ ನಾನು ಹಾಗೂ ಸಚಿವ ಕೆ.ಜೆ. ಜಾರ್ಜ್ ಅವರು ಖುದ್ದಾಗಿ ಬಂದು ಪರಿಶೀಲನೆ ಮಾಡಿದ್ದೇವೆ. ಬಿಡಿಎ, ಬಿಬಿಎಂಪಿ, ಕೆರೆ ಅಭಿವೃದ್ಧಿ ಪ್ರಾಧಿಕಾರದ ದಾಖಲೆ ಪರಿಶೀಲನೆ ಮಾಡಲಾಗಿದೆ’ ಎಂದು ಮಾಹಿತಿ ನೀಡಿದರು.