‘ನೇಮಕಾತಿ ಆದೇಶ ನೀಡುವಂತೆ ಆಗ್ರಹಿಸಿ ಪದವಿಪೂರ್ವ ಶಿಕ್ಷಣ ಮಂಡಳಿಯ ಎದುರು ಆಯ್ಕೆಯಾದವರು ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ಹುದ್ದೆ ಭರ್ತಿಗೆ 2014ರ ಮೇ 15ರಂದು ಹೊರಡಿಸಿದ್ದ ಅಧಿಸೂಚನೆಯಲ್ಲಿ ಆಯ್ಕೆಯಾದವರಿಗೆ ಆರು ವರ್ಷ ಕಳೆದರೂ ನೇಮಕಾತಿ ಆದೇಶ ನೀಡಿಲ್ಲ. ಆಯ್ಕೆಯಾದವರಿಗೆ ಇದರಿಂದ ದೊಡ್ಡ ಪ್ರಮಾಣದ ನಷ್ಟ, ಅನ್ಯಾಯ ಆಗಿದೆ’ ಎಂದೂ ಪತ್ರದಲ್ಲಿ ಅವರು ಉಲ್ಲೇಖಿಸಿದ್ದಾರೆ.