ಕಸಾಪ ಅಧ್ಯಕ್ಷ ಮಹೇಶ ಜೋಶಿ ನೇತೃತ್ವದ ಸಮಿತಿಯು ಈ ಆಯ್ಕೆ ಮಾಡಿದೆ. ಪ್ರಶಸ್ತಿಯು ₹ 10 ಸಾವಿರ ನಗದು ಒಳಗೊಂಡಿದೆ. ಚಿಕ್ಕಕೊಮಾರಿ ಗೌಡ ಅವರು ಈ ಪ್ರಶಸ್ತಿಯನ್ನು ಪರಿಷತ್ತಿನಲ್ಲಿ ಸ್ಥಾಪಿಸಿದ್ದಾರೆ. ಪ್ರಗತಿಪರ ರೈತರು, ಕರ್ನಾಟಕ ಪಂಚಾಯತ್ ರಾಜ್ ಪರಿಷತ್ ವ್ಯವಸ್ಥೆಯ ಬಗ್ಗೆ ಉತ್ತಮ ಕೆಲಸ ಮಾಡಿದ ಸಂಸ್ಥೆಗಳು, ಜನ ಪ್ರತಿನಿಧಿಗಳು ಮತ್ತು ತಜ್ಞರಿಗೆ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ ಎಂದು ಪರಿಷತ್ತು ತಿಳಿಸಿದೆ.