<p><strong>ದಾಬಸ್ ಪೇಟೆ:</strong> ರಾಮನಗರ–ಪಾವಗಡ ರಾಜ್ಯ ಹೆದ್ದಾರಿಯಲ್ಲಿ ಶಿವಗಂಗೆ ಶಾರದಾ ಕ್ರಾಸ್ನಿಂದ ಕಂಬಾಳು ಗ್ರಾಮದವರೆಗಿನ ಸುಮಾರು 3 ಕಿ.ಮೀ ಉದ್ದಕ್ಕೂ ಡಾಂಬರು ಹಲವೆಡೆ ಕಿತ್ತು ಹೋಗಿದೆ. ವಾಹನ ಚಲಾಯಿಸುವುದೇ ಸವಾಲಾಗಿದೆ.</p>.<p>ಮಳೆಗಾಲದಲ್ಲಿ ಮತ್ತು ರಾತ್ರಿ ಸಮಯದಲ್ಲಿ ರಸ್ತೆ ಕಿತ್ತುಹೋಗಿರುವುದು ಗೊತ್ತಾಗದೇ ಹಲವು ಬಾರಿ ದ್ವಿಚಕ್ರ ವಾಹನಗಳು ಜಾರಿ ಬಿದ್ದು ಸವಾರರು ಗಾಯಗೊಂಡಿದ್ದಾರೆ.</p>.<p>ಡಾಂಬರು ರಸ್ತೆ ಹಾಳಾಗಿ ಹಲವು ತಿಂಗಳುಗಳೇ ಕಳೆದಿವೆ. ಈ ಸಂಬಂಧ ನೆಲಮಂಗಲ ತಾಲ್ಲೂಕು ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸ್ಥಳೀಯರು ದೂರಿದ್ದಾರೆ.</p>.<p>ಶಿವಗಂಗೆಯಿಂದ ನೆಲಮಂಗಲ ತಾಲೂಕಿನ ಗಡಿಭಾಗ ಮಾಕೇನಹಳ್ಳಿಯವರೆಗೆ ಈಗಿರುವ ದ್ವಿಪಥ ರಸ್ತೆಯನ್ನು ಚತುಷ್ಪಥ ರಸ್ತೆಯಾಗಿ ಮಾಡಲಾಗುತ್ತದೆ ಎಂದು ಅಧಿಕಾರಿಗಳು ಉತ್ತರಿಸುತ್ತಿದ್ದಾರೆ. ರಸ್ತೆ ಅಭಿವೃದ್ಧಿಯಾಗಲಿ. ಅಲ್ಲಿವರೆಗೆ ವಾಹನಗಳು ಅಪಘಾತ ಆಗುವುದನ್ನು ತಡೆಯಲು ರಸ್ತೆ ದುರಸ್ತಿ ಮಾಡಬೇಕು ಎಂದು ಸ್ಥಳೀಯ ನಿವಾಸಿ ಸಿದ್ದರಾಜು ಆಗ್ರಹಿಸಿದರು.</p>.<p>ಶಿವಗಂಗೆ ಧಾರ್ಮಿಕ ಹಾಗೂ ಪ್ರವಾಸೋದ್ಯಮ ಸ್ಥಳವಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಬರುತ್ತಾರೆ. ಅವರಿಗೆ ತೊಂದರೆಯಾಗುವುದನ್ನು ತಪ್ಪಿಸಲು ರಸ್ತೆ ಸರಿಪಡಿಸಬೇಕು ಎಂದು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾಬಸ್ ಪೇಟೆ:</strong> ರಾಮನಗರ–ಪಾವಗಡ ರಾಜ್ಯ ಹೆದ್ದಾರಿಯಲ್ಲಿ ಶಿವಗಂಗೆ ಶಾರದಾ ಕ್ರಾಸ್ನಿಂದ ಕಂಬಾಳು ಗ್ರಾಮದವರೆಗಿನ ಸುಮಾರು 3 ಕಿ.ಮೀ ಉದ್ದಕ್ಕೂ ಡಾಂಬರು ಹಲವೆಡೆ ಕಿತ್ತು ಹೋಗಿದೆ. ವಾಹನ ಚಲಾಯಿಸುವುದೇ ಸವಾಲಾಗಿದೆ.</p>.<p>ಮಳೆಗಾಲದಲ್ಲಿ ಮತ್ತು ರಾತ್ರಿ ಸಮಯದಲ್ಲಿ ರಸ್ತೆ ಕಿತ್ತುಹೋಗಿರುವುದು ಗೊತ್ತಾಗದೇ ಹಲವು ಬಾರಿ ದ್ವಿಚಕ್ರ ವಾಹನಗಳು ಜಾರಿ ಬಿದ್ದು ಸವಾರರು ಗಾಯಗೊಂಡಿದ್ದಾರೆ.</p>.<p>ಡಾಂಬರು ರಸ್ತೆ ಹಾಳಾಗಿ ಹಲವು ತಿಂಗಳುಗಳೇ ಕಳೆದಿವೆ. ಈ ಸಂಬಂಧ ನೆಲಮಂಗಲ ತಾಲ್ಲೂಕು ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸ್ಥಳೀಯರು ದೂರಿದ್ದಾರೆ.</p>.<p>ಶಿವಗಂಗೆಯಿಂದ ನೆಲಮಂಗಲ ತಾಲೂಕಿನ ಗಡಿಭಾಗ ಮಾಕೇನಹಳ್ಳಿಯವರೆಗೆ ಈಗಿರುವ ದ್ವಿಪಥ ರಸ್ತೆಯನ್ನು ಚತುಷ್ಪಥ ರಸ್ತೆಯಾಗಿ ಮಾಡಲಾಗುತ್ತದೆ ಎಂದು ಅಧಿಕಾರಿಗಳು ಉತ್ತರಿಸುತ್ತಿದ್ದಾರೆ. ರಸ್ತೆ ಅಭಿವೃದ್ಧಿಯಾಗಲಿ. ಅಲ್ಲಿವರೆಗೆ ವಾಹನಗಳು ಅಪಘಾತ ಆಗುವುದನ್ನು ತಡೆಯಲು ರಸ್ತೆ ದುರಸ್ತಿ ಮಾಡಬೇಕು ಎಂದು ಸ್ಥಳೀಯ ನಿವಾಸಿ ಸಿದ್ದರಾಜು ಆಗ್ರಹಿಸಿದರು.</p>.<p>ಶಿವಗಂಗೆ ಧಾರ್ಮಿಕ ಹಾಗೂ ಪ್ರವಾಸೋದ್ಯಮ ಸ್ಥಳವಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಬರುತ್ತಾರೆ. ಅವರಿಗೆ ತೊಂದರೆಯಾಗುವುದನ್ನು ತಪ್ಪಿಸಲು ರಸ್ತೆ ಸರಿಪಡಿಸಬೇಕು ಎಂದು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>