<p><strong>ದಾಬಸ್ ಪೇಟೆ:</strong> ಸೋಂಪುರ ಕೈಗಾರಿಕಾ ಪ್ರದೇಶಕ್ಕೆ ಹೊಂದಿಕೊಂಡಿರುವ ಹೊಸಹಳ್ಳಿ ಗ್ರಾಮದಿಂದ ಚನ್ನ ತಿಮ್ಮಯ್ಯನ ಪಾಳ್ಯಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯು ಮಳೆಯಿಂದ ಕೆಸರು ಗದ್ದೆಯಂತಾಗಿದ್ದು, ಸಂಚಾರಕ್ಕೆ ಅಡಚಣೆ ಆಗಿದೆ.</p>.<p>ರಸ್ತೆಯು ಸಂಪೂರ್ಣ ಹಾಳಾಗಿದ್ದು, ದ್ವಿಚಕ್ರ ವಾಹನಗಳ ಸಂಚಾರ ಪ್ರಯಾಸವಾಗಿದೆ. ಅಲ್ಲಲ್ಲಿ ಗುಂಡಿ ಬಿದ್ದಿದ್ದು, ನಿಯಂತ್ರಣ ಕಳೆದುಕೊಂಡು ಸವಾರರು ಕೆಳಗೆ ಬಿದ್ದಿರುವ ಉದಾಹರಣೆಯೂ ಉಂಟು. ಮಳೆಗಾಲದಲ್ಲಿ ಈ ರಸ್ತೆಯಲ್ಲಿ ನಡೆದುಕೊಂಡು ಹೋಗಲು ಹರಸಾಹಸ ಪಡಬೇಕು. ಕಾಲುಗಳಿಗೆ ಕೆಸರು ಮೆತ್ತಿಕೊಂಡು, ಸಾಕಷ್ಟು ತೊಂದರೆ ಆಗಲಿದೆ. </p>.<p>ಈ ರಸ್ತೆಯಲ್ಲಿ ನಿತ್ಯ ಕಾರ್ಖಾನೆಗಳಿಗೆ ಹೋಗುವ ಕಾರ್ಮಿಕರು, ಶಾಲಾ ಮಕ್ಕಳು, ರೈತರು ಓಡಾಡುತ್ತಾರೆ.</p>.<p>‘ಎರಡು ಗ್ರಾಮಗಳ ಸಾರ್ವಜನಿಕರಿಗೆ ಸಂಪರ್ಕ ಸೇತುವೆಯಾಗಿ ಇದೊಂದೇ ರಸ್ತೆ ಇದೆ. ಹಾಗಾಗಿ ಅನಿವಾರ್ಯವಾಗಿ ಈ ರಸ್ತೆಯಲ್ಲಿ ಸಂಚರಿಸಬೇಕಿದೆ’ ಎಂದು ಹೊಸಹಳ್ಳಿ ಗ್ರಾಮದ ಹೇಮಂತ್ ಬೇಸರ ವ್ಯಕ್ತಪಡಿಸಿದರು. </p>.<p>‘ರಸ್ತೆಯ ಎರಡು ಕಡೆ ಚರಂಡಿ ವ್ಯವಸ್ಥೆ ಇಲ್ಲದಿರುವುದೇ ರಸ್ತೆ ಹಾಳಾಗಲು ಕಾರಣ. ನೂರಾರು ಜನರು ಸಂಚರಿಸುವ ರಸ್ತೆಯನ್ನುಕೂಡಲೇ ದುರಸ್ತಿ ಮಾಡಿಕೊಡಬೇಕು. ಪಂಚಾಯತಿ ಆಡಳಿತ, ಶಾಸಕರು ಹಾಗೂ ಸಂಬಂಧ ಪಟ್ಟ ಇಲಾಖೆಯವರು ಗಮನ ಹರಿಸಬೇಕು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾಬಸ್ ಪೇಟೆ:</strong> ಸೋಂಪುರ ಕೈಗಾರಿಕಾ ಪ್ರದೇಶಕ್ಕೆ ಹೊಂದಿಕೊಂಡಿರುವ ಹೊಸಹಳ್ಳಿ ಗ್ರಾಮದಿಂದ ಚನ್ನ ತಿಮ್ಮಯ್ಯನ ಪಾಳ್ಯಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯು ಮಳೆಯಿಂದ ಕೆಸರು ಗದ್ದೆಯಂತಾಗಿದ್ದು, ಸಂಚಾರಕ್ಕೆ ಅಡಚಣೆ ಆಗಿದೆ.</p>.<p>ರಸ್ತೆಯು ಸಂಪೂರ್ಣ ಹಾಳಾಗಿದ್ದು, ದ್ವಿಚಕ್ರ ವಾಹನಗಳ ಸಂಚಾರ ಪ್ರಯಾಸವಾಗಿದೆ. ಅಲ್ಲಲ್ಲಿ ಗುಂಡಿ ಬಿದ್ದಿದ್ದು, ನಿಯಂತ್ರಣ ಕಳೆದುಕೊಂಡು ಸವಾರರು ಕೆಳಗೆ ಬಿದ್ದಿರುವ ಉದಾಹರಣೆಯೂ ಉಂಟು. ಮಳೆಗಾಲದಲ್ಲಿ ಈ ರಸ್ತೆಯಲ್ಲಿ ನಡೆದುಕೊಂಡು ಹೋಗಲು ಹರಸಾಹಸ ಪಡಬೇಕು. ಕಾಲುಗಳಿಗೆ ಕೆಸರು ಮೆತ್ತಿಕೊಂಡು, ಸಾಕಷ್ಟು ತೊಂದರೆ ಆಗಲಿದೆ. </p>.<p>ಈ ರಸ್ತೆಯಲ್ಲಿ ನಿತ್ಯ ಕಾರ್ಖಾನೆಗಳಿಗೆ ಹೋಗುವ ಕಾರ್ಮಿಕರು, ಶಾಲಾ ಮಕ್ಕಳು, ರೈತರು ಓಡಾಡುತ್ತಾರೆ.</p>.<p>‘ಎರಡು ಗ್ರಾಮಗಳ ಸಾರ್ವಜನಿಕರಿಗೆ ಸಂಪರ್ಕ ಸೇತುವೆಯಾಗಿ ಇದೊಂದೇ ರಸ್ತೆ ಇದೆ. ಹಾಗಾಗಿ ಅನಿವಾರ್ಯವಾಗಿ ಈ ರಸ್ತೆಯಲ್ಲಿ ಸಂಚರಿಸಬೇಕಿದೆ’ ಎಂದು ಹೊಸಹಳ್ಳಿ ಗ್ರಾಮದ ಹೇಮಂತ್ ಬೇಸರ ವ್ಯಕ್ತಪಡಿಸಿದರು. </p>.<p>‘ರಸ್ತೆಯ ಎರಡು ಕಡೆ ಚರಂಡಿ ವ್ಯವಸ್ಥೆ ಇಲ್ಲದಿರುವುದೇ ರಸ್ತೆ ಹಾಳಾಗಲು ಕಾರಣ. ನೂರಾರು ಜನರು ಸಂಚರಿಸುವ ರಸ್ತೆಯನ್ನುಕೂಡಲೇ ದುರಸ್ತಿ ಮಾಡಿಕೊಡಬೇಕು. ಪಂಚಾಯತಿ ಆಡಳಿತ, ಶಾಸಕರು ಹಾಗೂ ಸಂಬಂಧ ಪಟ್ಟ ಇಲಾಖೆಯವರು ಗಮನ ಹರಿಸಬೇಕು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>