<p><strong>ದಾಬಸ್ಪೇಟೆ</strong>: ಕೊಟ್ಟಿಗೆಗೆ ಹಾಕಿದ್ದ ಬೀಗ ಮುರಿದು ಮೂರು ಮೇಕೆ ಹಾಗೂ ಟ್ರ್ಯಾಕ್ಟರ್ ಶೆಡ್ನಲ್ಲಿ ಇಟ್ಟಿದ್ದ ಸುಮಾರು 50 ಲೀಟರ್ ಡೀಸೆಲ್ ಕದ್ದೊಯ್ದಿರುವ ಘಟನೆ ನೆಲಮಂಗಲ ತಾಲ್ಲೂಕು ನರಸೀಪುರದಲ್ಲಿ ಬುಧವಾರ ರಾತ್ರಿ ನಡೆದಿದೆ.</p>.<p>ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಎನ್.ಜಿ.ರಮೇಶ್ ಅವರ ಕೊಟ್ಟಿಗೆಯಲ್ಲಿ ಕಳ್ಳತನವಾಗಿದೆ.</p>.<p>ದೇವರ ಕಾರ್ಯ ಮಾಡಲು 4 ಮೇಕೆ ಸಾಕಿದ್ದೆವು. ಎಂದಿನಂತೆ ಕೊಟ್ಟಿಗೆಯಲ್ಲಿ ಎರಡು ಮೇಕೆಗಳನ್ನು ಕಟ್ಟಿ, ಎರಡು ಬಿಟ್ಟು ಬೀಗ ಹಾಕಿಕೊಂಡು ಬಂದಿದ್ದೆವು. ಗುರುವಾರ ಬೆಳಿಗ್ಗೆ ಸುಮಾರು 4 ಗಂಟೆ ಸಮಯಕ್ಕೆ ಎಚ್ಚರಿಕೆ ಆಗಿ ಬಂದು ನೋಡಿದಾಗ ಕೊಟ್ಟಿಗೆ ಬಾಗಿಲು ತೆರೆದಿತ್ತು. ಒಳಗೆ ನೋಡಿದಾಗ ಮೂರು ಮೇಕೆಗಳು ಇರಲಿಲ್ಲ ಎಂದು ರಮೇಶ್ ತಿಳಿಸಿದ್ದಾರೆ.</p>.<p>‘ಟ್ರ್ಯಾಕ್ಟರ್ ಮತ್ತು ಜೆಸಿಬಿ ಯಂತ್ರಗಳಿಗೆ ತುಂಬಿಸಲು 50 ಲೀಟರ್ ಡೀಸೆಲ್ ತಂದು ಇಟ್ಟುಕೊಂಡಿದ್ದೆವು. ಅದನ್ನು ಹೊತ್ತೊಯ್ದಿದ್ದಾರೆ’ ಎಂದು ಅವರು ಹೇಳಿದರು.</p>.<p>ದಾಬಸ್ ಪೇಟೆ ಠಾಣೆಯಲ್ಲಿ ಈ ಸಂಬಂಧ ದೂರು ದಾಖಲಾಗಿದೆ.</p>.<p><strong>ರಾಗಿ ಚೀಲ ಕಳವು:</strong> ಇಮಚೇನಹಳ್ಳಿ ಗ್ರಾಮದ ವೀರಭದ್ರ ಎಂಬುವವರ ಮನೆಯ ಮುಂದೆ ಇಡಲಾಗಿದ್ದ 6 ಚೀಲ ರಾಗಿಯನ್ನು ಕಳ್ಳರು ಕಳವು ಮಾಡಿದ್ದಾರೆ.</p>.<p>50 ಕೆ.ಜಿ ಪ್ಲಾಸ್ಟಿಕ್ ಚೀಲಗಳಲ್ಲಿ ತೂಕ ಮಾಡದೆ ರಾಗಿಯನ್ನು ತುಂಬಿ ಮನೆಯ ಮುಂದೆ ಇಟ್ಟಿದ್ದೆವು. ಅದರಲ್ಲಿ 6 ರಾಗಿ ಚೀಲಗಳನ್ನು ತೆಗೆದುಕೊಂಡು ಹೋಗಿದ್ದಾರೆ ಎಂದು ಮನೆ ಮಾಲೀಕರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾಬಸ್ಪೇಟೆ</strong>: ಕೊಟ್ಟಿಗೆಗೆ ಹಾಕಿದ್ದ ಬೀಗ ಮುರಿದು ಮೂರು ಮೇಕೆ ಹಾಗೂ ಟ್ರ್ಯಾಕ್ಟರ್ ಶೆಡ್ನಲ್ಲಿ ಇಟ್ಟಿದ್ದ ಸುಮಾರು 50 ಲೀಟರ್ ಡೀಸೆಲ್ ಕದ್ದೊಯ್ದಿರುವ ಘಟನೆ ನೆಲಮಂಗಲ ತಾಲ್ಲೂಕು ನರಸೀಪುರದಲ್ಲಿ ಬುಧವಾರ ರಾತ್ರಿ ನಡೆದಿದೆ.</p>.<p>ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಎನ್.ಜಿ.ರಮೇಶ್ ಅವರ ಕೊಟ್ಟಿಗೆಯಲ್ಲಿ ಕಳ್ಳತನವಾಗಿದೆ.</p>.<p>ದೇವರ ಕಾರ್ಯ ಮಾಡಲು 4 ಮೇಕೆ ಸಾಕಿದ್ದೆವು. ಎಂದಿನಂತೆ ಕೊಟ್ಟಿಗೆಯಲ್ಲಿ ಎರಡು ಮೇಕೆಗಳನ್ನು ಕಟ್ಟಿ, ಎರಡು ಬಿಟ್ಟು ಬೀಗ ಹಾಕಿಕೊಂಡು ಬಂದಿದ್ದೆವು. ಗುರುವಾರ ಬೆಳಿಗ್ಗೆ ಸುಮಾರು 4 ಗಂಟೆ ಸಮಯಕ್ಕೆ ಎಚ್ಚರಿಕೆ ಆಗಿ ಬಂದು ನೋಡಿದಾಗ ಕೊಟ್ಟಿಗೆ ಬಾಗಿಲು ತೆರೆದಿತ್ತು. ಒಳಗೆ ನೋಡಿದಾಗ ಮೂರು ಮೇಕೆಗಳು ಇರಲಿಲ್ಲ ಎಂದು ರಮೇಶ್ ತಿಳಿಸಿದ್ದಾರೆ.</p>.<p>‘ಟ್ರ್ಯಾಕ್ಟರ್ ಮತ್ತು ಜೆಸಿಬಿ ಯಂತ್ರಗಳಿಗೆ ತುಂಬಿಸಲು 50 ಲೀಟರ್ ಡೀಸೆಲ್ ತಂದು ಇಟ್ಟುಕೊಂಡಿದ್ದೆವು. ಅದನ್ನು ಹೊತ್ತೊಯ್ದಿದ್ದಾರೆ’ ಎಂದು ಅವರು ಹೇಳಿದರು.</p>.<p>ದಾಬಸ್ ಪೇಟೆ ಠಾಣೆಯಲ್ಲಿ ಈ ಸಂಬಂಧ ದೂರು ದಾಖಲಾಗಿದೆ.</p>.<p><strong>ರಾಗಿ ಚೀಲ ಕಳವು:</strong> ಇಮಚೇನಹಳ್ಳಿ ಗ್ರಾಮದ ವೀರಭದ್ರ ಎಂಬುವವರ ಮನೆಯ ಮುಂದೆ ಇಡಲಾಗಿದ್ದ 6 ಚೀಲ ರಾಗಿಯನ್ನು ಕಳ್ಳರು ಕಳವು ಮಾಡಿದ್ದಾರೆ.</p>.<p>50 ಕೆ.ಜಿ ಪ್ಲಾಸ್ಟಿಕ್ ಚೀಲಗಳಲ್ಲಿ ತೂಕ ಮಾಡದೆ ರಾಗಿಯನ್ನು ತುಂಬಿ ಮನೆಯ ಮುಂದೆ ಇಟ್ಟಿದ್ದೆವು. ಅದರಲ್ಲಿ 6 ರಾಗಿ ಚೀಲಗಳನ್ನು ತೆಗೆದುಕೊಂಡು ಹೋಗಿದ್ದಾರೆ ಎಂದು ಮನೆ ಮಾಲೀಕರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>