<p><strong>ದಾಬಸ್ ಪೇಟೆ:</strong> ಸೋಂಪುರ ಹೋಬಳಿಯ ನರಸೀಪುರ ತೋಪಿನಲ್ಲಿ ಇರುವ ಶ್ರೀ ಆತ್ಮರಾಮ ದೇವಾಲಯದ ಬ್ರಹ್ಮರಥೋತ್ಸವ ಕಾರ್ಯಕ್ರಮ ಶನಿವಾರ ಸಡಗರದಿಂದ ಜರುಗಿತು.</p>.<p>ಸೀತಾ ಲಕ್ಷ್ಮಣ ಆಂಜನೇಯ ಸಮೇತ ಶ್ರೀರಾಮನ ಉತ್ಸವಮೂರ್ತಿಯನ್ನು ಅಲಂಕೃತ ಗೊಳಿಸಿ,ಅರವಟ್ಟಿಗೆ ಗಳಿಗೆ ಕರೆದುಕೊಂಡು ಹೋಗಿ ಪೂಜೆ ನೆರವೇರಿಸಿ ದೇವಾಲಯವನ್ನು ಮೂರು ಸುತ್ತು ಹಾಕಿಸಿ ರಥದಲ್ಲಿ ಕೂರಿಸಿ ನಂತರ ದಾಸಪ್ಪ ಹಾಗೂ ಪುರೋಹಿತರ ಸಮ್ಮುಖದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ನೆರವೇರಿಸಲಾಯಿತು.</p>.<p>ಶನಿವಾರ ಮಧ್ಯಾಹ್ನ ಪೂಜಾ ಕಾರ್ಯಕ್ರಮಗಳ ನಂತರ ಸಾವಿರಾರು ಭಕ್ತರ ಹರ್ಷೋದ್ಗಾರದಲ್ಲಿ ಬಣ್ಣ ಬಣ್ಣದ ಹೂಗಳಿಂದ ಅಲಂಕೃತ ತೇರನ್ನು ಎಳೆಯಲಾಯಿತು. ಬಂದಂತಹ ಭಕ್ತರು ದವನ ಸಮೇತ ಬಾಳೆಹಣ್ಣನ್ನು ತೇರಿನ ಮೇಲೆ ಎಸೆದು ಕೃತಾರ್ಥರಾದರು.</p>.<p>ದೇವಾಲಯವನ್ನು ವಿದ್ಯುತ್ ದೀಪಗಳಿಂದ ಹಾಗೂ ಹೂವುಗಳಿಂದ ಸಿಂಗಾರ ಮಾಡಲಾಗಿತ್ತು. ಬೆಳಿಗ್ಗೆಯೇ ನೆಲೆ ದೇವರಿಗೆ ವಿವಿಧ ಅಭಿಷೇಕಗಳನ್ನು ಮಾಡಿ, ಭಕ್ತರಿಗೆ ಮಹಾಮಂಗಳಾರತಿ ನೀಡಿ ದೇವರ ದರ್ಶನಕ್ಕೆ ಅನುವು ಮಾಡಿಕೊಡಲಾಗಿತ್ತು.</p>.<p>ಭಕ್ತರಿಗೆ ಹೆಸರುಬೇಳೆ, ಪಾನಕ, ನೀರು ಮಜ್ಜಿಗೆ ಹಾಗೂ ಪ್ರಸಾದ ಹಂಚಿದರು. ಊಟದ ವ್ಯವಸ್ಥೆಯನ್ನು ಮಾಡಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾಬಸ್ ಪೇಟೆ:</strong> ಸೋಂಪುರ ಹೋಬಳಿಯ ನರಸೀಪುರ ತೋಪಿನಲ್ಲಿ ಇರುವ ಶ್ರೀ ಆತ್ಮರಾಮ ದೇವಾಲಯದ ಬ್ರಹ್ಮರಥೋತ್ಸವ ಕಾರ್ಯಕ್ರಮ ಶನಿವಾರ ಸಡಗರದಿಂದ ಜರುಗಿತು.</p>.<p>ಸೀತಾ ಲಕ್ಷ್ಮಣ ಆಂಜನೇಯ ಸಮೇತ ಶ್ರೀರಾಮನ ಉತ್ಸವಮೂರ್ತಿಯನ್ನು ಅಲಂಕೃತ ಗೊಳಿಸಿ,ಅರವಟ್ಟಿಗೆ ಗಳಿಗೆ ಕರೆದುಕೊಂಡು ಹೋಗಿ ಪೂಜೆ ನೆರವೇರಿಸಿ ದೇವಾಲಯವನ್ನು ಮೂರು ಸುತ್ತು ಹಾಕಿಸಿ ರಥದಲ್ಲಿ ಕೂರಿಸಿ ನಂತರ ದಾಸಪ್ಪ ಹಾಗೂ ಪುರೋಹಿತರ ಸಮ್ಮುಖದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ನೆರವೇರಿಸಲಾಯಿತು.</p>.<p>ಶನಿವಾರ ಮಧ್ಯಾಹ್ನ ಪೂಜಾ ಕಾರ್ಯಕ್ರಮಗಳ ನಂತರ ಸಾವಿರಾರು ಭಕ್ತರ ಹರ್ಷೋದ್ಗಾರದಲ್ಲಿ ಬಣ್ಣ ಬಣ್ಣದ ಹೂಗಳಿಂದ ಅಲಂಕೃತ ತೇರನ್ನು ಎಳೆಯಲಾಯಿತು. ಬಂದಂತಹ ಭಕ್ತರು ದವನ ಸಮೇತ ಬಾಳೆಹಣ್ಣನ್ನು ತೇರಿನ ಮೇಲೆ ಎಸೆದು ಕೃತಾರ್ಥರಾದರು.</p>.<p>ದೇವಾಲಯವನ್ನು ವಿದ್ಯುತ್ ದೀಪಗಳಿಂದ ಹಾಗೂ ಹೂವುಗಳಿಂದ ಸಿಂಗಾರ ಮಾಡಲಾಗಿತ್ತು. ಬೆಳಿಗ್ಗೆಯೇ ನೆಲೆ ದೇವರಿಗೆ ವಿವಿಧ ಅಭಿಷೇಕಗಳನ್ನು ಮಾಡಿ, ಭಕ್ತರಿಗೆ ಮಹಾಮಂಗಳಾರತಿ ನೀಡಿ ದೇವರ ದರ್ಶನಕ್ಕೆ ಅನುವು ಮಾಡಿಕೊಡಲಾಗಿತ್ತು.</p>.<p>ಭಕ್ತರಿಗೆ ಹೆಸರುಬೇಳೆ, ಪಾನಕ, ನೀರು ಮಜ್ಜಿಗೆ ಹಾಗೂ ಪ್ರಸಾದ ಹಂಚಿದರು. ಊಟದ ವ್ಯವಸ್ಥೆಯನ್ನು ಮಾಡಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>