<p><strong>ದಾಬಸ್ ಪೇಟೆ:</strong> ವೃಷಭಾವತಿ ನೀರಿನ ಪೈಪ್ಲೈನ್ ಕಾಮಗಾರಿ ವಿರೋಧಿಸಿ ರಾಯರಪಾಳ್ಯ ಹಾಗೂ ಚನ್ನೋಹಳ್ಳಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದು, ಪೊಲೀಸರು ಕೆಲವರನ್ನು ವಶಕ್ಕೆ ಪಡೆದು ನಂತರ ಬಿಡುಗಡೆ ಮಾಡಿದ್ದಾರೆ.</p>.<p>ಗುರುವಾರ ಬೆಳಿಗ್ಗೆ ಚನ್ನೋಹಳ್ಳಿ ಮಾರ್ಗವಾಗಿ ರಾಯರಪಾಳ್ಯ ಸಂಪರ್ಕಿಸುವ ರಸ್ತೆಬದಿಯಲ್ಲಿ ಕಾಮಗಾರಿ ನಡೆಸಲು ಬಂದವರನ್ನು ಸ್ಥಳೀಯರು ತಡೆದರು. ಪರಿಸ್ಥಿತಿ ವಿಕೋಪಕ್ಕೆ ಹೋದಾಗ ಕೆಲವರನ್ನು ವಶಕ್ಕೆ ಪಡೆದರು.</p>.<p>20 ದಿನಗಳ ಹಿಂದೆ ಕಾಮಗಾರಿ ನಡೆಸಲು ಹೋದ ವೇಳೆಯಲ್ಲಿ ಕೆಲವರು ವಿರೋಧಿಸಿದ್ದರಿಂದ ಕೆಲಸ ನಿಲ್ಲಿಸಲಾಗಿತ್ತು. ಮತ್ತೆ ಕಾಮಗಾರಿ ಆರಂಭಿಸಲು ಹೋದಾಗ ಗ್ರಾಮಸ್ಥರು ಮತ್ತೆ ಪ್ರತಿಭಟನೆ ಮಾಡಿದ್ದಾರೆ.</p>.<p>‘ವೃಷಭಾವತಿ ನೀರು ಬಿಡಲು ರಾಯರಪಾಳ್ಯ, ಚನ್ನೋಹಳ್ಳಿ ಕೆರೆಗಳನ್ನು ಗುರುತಿಸಿದ್ದಾರೆ. ಈ ನೀರು ಕೆರೆಗೆ ಹರಿಸುವುದರಿಂದ ನೀರು ವಿಷಯುಕ್ತವಾಗಿ ದನಕರುಗಳಿಗೆ ಕುಡಿಯಲು, ಕೃಷಿ ಚಟುವಟಿಕೆಗೆ ಬಳಸಲು ಸಾಧ್ಯ ಆಗುವುದಿಲ್ಲ. ರಾಮದೇವರ ಬೆಟ್ಟ, ಸಿದ್ದರಬೆಟ್ಟದ ತಪ್ಪಲು ಇದ್ದು, ಇಲ್ಲಿನ ಪರಿಸರಕ್ಕೆ ಮಾರಕವಾಗುತ್ತದೆ’ ಎಂದು ಪ್ರತಿಭಟನಾಕಾರರು ಆರೋಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾಬಸ್ ಪೇಟೆ:</strong> ವೃಷಭಾವತಿ ನೀರಿನ ಪೈಪ್ಲೈನ್ ಕಾಮಗಾರಿ ವಿರೋಧಿಸಿ ರಾಯರಪಾಳ್ಯ ಹಾಗೂ ಚನ್ನೋಹಳ್ಳಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದು, ಪೊಲೀಸರು ಕೆಲವರನ್ನು ವಶಕ್ಕೆ ಪಡೆದು ನಂತರ ಬಿಡುಗಡೆ ಮಾಡಿದ್ದಾರೆ.</p>.<p>ಗುರುವಾರ ಬೆಳಿಗ್ಗೆ ಚನ್ನೋಹಳ್ಳಿ ಮಾರ್ಗವಾಗಿ ರಾಯರಪಾಳ್ಯ ಸಂಪರ್ಕಿಸುವ ರಸ್ತೆಬದಿಯಲ್ಲಿ ಕಾಮಗಾರಿ ನಡೆಸಲು ಬಂದವರನ್ನು ಸ್ಥಳೀಯರು ತಡೆದರು. ಪರಿಸ್ಥಿತಿ ವಿಕೋಪಕ್ಕೆ ಹೋದಾಗ ಕೆಲವರನ್ನು ವಶಕ್ಕೆ ಪಡೆದರು.</p>.<p>20 ದಿನಗಳ ಹಿಂದೆ ಕಾಮಗಾರಿ ನಡೆಸಲು ಹೋದ ವೇಳೆಯಲ್ಲಿ ಕೆಲವರು ವಿರೋಧಿಸಿದ್ದರಿಂದ ಕೆಲಸ ನಿಲ್ಲಿಸಲಾಗಿತ್ತು. ಮತ್ತೆ ಕಾಮಗಾರಿ ಆರಂಭಿಸಲು ಹೋದಾಗ ಗ್ರಾಮಸ್ಥರು ಮತ್ತೆ ಪ್ರತಿಭಟನೆ ಮಾಡಿದ್ದಾರೆ.</p>.<p>‘ವೃಷಭಾವತಿ ನೀರು ಬಿಡಲು ರಾಯರಪಾಳ್ಯ, ಚನ್ನೋಹಳ್ಳಿ ಕೆರೆಗಳನ್ನು ಗುರುತಿಸಿದ್ದಾರೆ. ಈ ನೀರು ಕೆರೆಗೆ ಹರಿಸುವುದರಿಂದ ನೀರು ವಿಷಯುಕ್ತವಾಗಿ ದನಕರುಗಳಿಗೆ ಕುಡಿಯಲು, ಕೃಷಿ ಚಟುವಟಿಕೆಗೆ ಬಳಸಲು ಸಾಧ್ಯ ಆಗುವುದಿಲ್ಲ. ರಾಮದೇವರ ಬೆಟ್ಟ, ಸಿದ್ದರಬೆಟ್ಟದ ತಪ್ಪಲು ಇದ್ದು, ಇಲ್ಲಿನ ಪರಿಸರಕ್ಕೆ ಮಾರಕವಾಗುತ್ತದೆ’ ಎಂದು ಪ್ರತಿಭಟನಾಕಾರರು ಆರೋಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>