<p><strong>ದಾಬಸ್ ಪೇಟೆ: </strong>‘ಜಾತಿವಾರು ಸ್ಮಶಾನ ನಿರ್ಮಿಸುವ ಬದಲು, ಊರಿಗೊಂದೇ ಇರಲಿ. ಸಾವಿನಲ್ಲಿ ಭೇದ ಮಾಡುವುದು ಬೇಡ’ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಶ್ರೀನಿವಾಸ್ ಹೇಳಿದರು.</p>.<p>ನೆಲಮಂಗಲ ತಾಲ್ಲೂಕು ಸೋಂಪುರ ಹೋಬಳಿಯ ದೇವರಹೊಸಹಳ್ಳಿ ಗ್ರಾಮಕ್ಕೆ ಭಾನುವಾರ ಭೇಟಿ ನೀಡಿದ್ದ ಅವರಿಗೆ, ಎಸ್ಸಿ ಸಮುದಾಯಕ್ಕಾಗಿ ಒಂದು ಸ್ಮಶಾನ ನಿರ್ಮಿಸಲು ಜಾಗ ಗುರುತಿಸಿಕೊಡಿ ಎಂದು ಗ್ರಾಮಸ್ಥರು ಮನವಿ ಮಾಡಿದಾಗ, ಈ ರೀತಿ ಪ್ರತಿಕ್ರಿಯಿಸಿದರು.</p>.<p>ಶ್ರೀನಿವಾಸ್ ಅವರೊಂದಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವಿ ಡಿ. ಚನ್ನಣ್ಣನವರ ಗ್ರಾಮಸ್ಥರ ಕುಂದು–ಕೊರತೆ ಆಲಿಸಿದರು.</p>.<p>ಇದೇ ವೇಳೆ ಅರ್ಹ ಫಲಾನುಭವಿಗಳಿಗೆ ಪಿಂಚಣಿ ಹಾಗೂ ಇತರ ಸೌಲಭ್ಯಗಳನ್ನು ವಿತರಿಸಲಾಯಿತು.<br />ಉಪ ತಹಶೀಲ್ದಾರ್ ಕುಮಾರಸ್ವಾಮಿ, ಕಂದಾಯ ಅಧಿಕಾರಿ ಪಂಚಾಕ್ಷರಿ, ಗ್ರಾಮ ಲೆಕ್ಕಿಗ ರೋಹಿತ್ ಹಾಗೂ ಬಾಲಕೃಷ್ಣ ಇದ್ದರು.</p>.<p>ನೆಲಮಂಗಲ ತಹಶೀಲ್ದಾರ್ ಮಂಜುನಾಥ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾಬಸ್ ಪೇಟೆ: </strong>‘ಜಾತಿವಾರು ಸ್ಮಶಾನ ನಿರ್ಮಿಸುವ ಬದಲು, ಊರಿಗೊಂದೇ ಇರಲಿ. ಸಾವಿನಲ್ಲಿ ಭೇದ ಮಾಡುವುದು ಬೇಡ’ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಶ್ರೀನಿವಾಸ್ ಹೇಳಿದರು.</p>.<p>ನೆಲಮಂಗಲ ತಾಲ್ಲೂಕು ಸೋಂಪುರ ಹೋಬಳಿಯ ದೇವರಹೊಸಹಳ್ಳಿ ಗ್ರಾಮಕ್ಕೆ ಭಾನುವಾರ ಭೇಟಿ ನೀಡಿದ್ದ ಅವರಿಗೆ, ಎಸ್ಸಿ ಸಮುದಾಯಕ್ಕಾಗಿ ಒಂದು ಸ್ಮಶಾನ ನಿರ್ಮಿಸಲು ಜಾಗ ಗುರುತಿಸಿಕೊಡಿ ಎಂದು ಗ್ರಾಮಸ್ಥರು ಮನವಿ ಮಾಡಿದಾಗ, ಈ ರೀತಿ ಪ್ರತಿಕ್ರಿಯಿಸಿದರು.</p>.<p>ಶ್ರೀನಿವಾಸ್ ಅವರೊಂದಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವಿ ಡಿ. ಚನ್ನಣ್ಣನವರ ಗ್ರಾಮಸ್ಥರ ಕುಂದು–ಕೊರತೆ ಆಲಿಸಿದರು.</p>.<p>ಇದೇ ವೇಳೆ ಅರ್ಹ ಫಲಾನುಭವಿಗಳಿಗೆ ಪಿಂಚಣಿ ಹಾಗೂ ಇತರ ಸೌಲಭ್ಯಗಳನ್ನು ವಿತರಿಸಲಾಯಿತು.<br />ಉಪ ತಹಶೀಲ್ದಾರ್ ಕುಮಾರಸ್ವಾಮಿ, ಕಂದಾಯ ಅಧಿಕಾರಿ ಪಂಚಾಕ್ಷರಿ, ಗ್ರಾಮ ಲೆಕ್ಕಿಗ ರೋಹಿತ್ ಹಾಗೂ ಬಾಲಕೃಷ್ಣ ಇದ್ದರು.</p>.<p>ನೆಲಮಂಗಲ ತಹಶೀಲ್ದಾರ್ ಮಂಜುನಾಥ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>