<p><strong>ದಾಬಸ್ಪೇಟೆ: </strong>ಸೋಂಪುರ ಹೋಬಳಿ ಯಾದ್ಯಂತ ಬೀಳುತ್ತಿರುವ ಉತ್ತಮ ಮಳೆಯಿಂದ ಇಲ್ಲಿನ ಕೆರೆ ಕುಂಟೆ,<br />ಹೊಂಡಗಳಲ್ಲಿ ನೀರು ಸಂಗ್ರಹಗೊಳ್ಳು ತ್ತಿದೆ. ಇದು ರೈತರ ಮೊಗದಲ್ಲಿ ಮಂದ ಹಾಸ ಮೂಡಿಸಿದೆ. ಜಾನುವಾರುಗಳಿಗೆ ನೀರಿನ ಕೊರತೆ ನಿವಾರಣೆಯಾಗಿದೆ. ಅಂತರ್ಜಲ ವೃದ್ಧಿಯಾಗಿ ಕೊಳವೆಬಾವಿಗಳಲ್ಲಿ ಹೆಚ್ಚಿನ ನೀರು ತುಂಬಿಕೊಳ್ಳುವ ಆಶಾಭಾವನೆ ಮೂಡಿಸಿದೆ.</p>.<p>ದೇವರಹೊಸಹಳ್ಳಿ, ಹಳೇನಿಜಗಲ್ಲು ಕೆರೆಗಳು ಕೊಡಿಯಾಗಿವೆ. ಚನ್ನೋಹಳ್ಳಿ, ರಾಯರ ಪಾಳ್ಯ, ಬಿಲ್ಲಿನ ಕೋಟೆ, ಕಂಬಾಳು, ನಿಡವಂದ, ಲಕ್ಕೂರು, ಹೊನ್ನೆನಹಳ್ಳಿ ಕೆರೆಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ನೀರು ಸಂಗ್ರಹವಾಗಿದೆ. ಮುಂಗಾರು ಮಳೆ ಬಿರುಸುಗೊಂಡಿರುವುದರಿಂದ ಇನ್ನಷ್ಟು ನೀರು ಸಂಗ್ರಹವಾಗುವ ಮುನ್ಸೂಚನೆ ಇದೆ.</p>.<p>ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯವರು ಅಭಿವೃದ್ಧಿಪಡಿಸಿರುವ ಬುಗಡಿಹಳ್ಳಿ ಹಾಗೂ ಮಾದೇನಹಳ್ಳಿ ಕೆರೆಗಳಲ್ಲಿಯೂ ಸಮೃದ್ಧವಾದ ನೀರು ನಿಂತಿದೆ. ಈ ಬಾರಿಯ ಮಳೆಯಿಂದ ಜಲಮೂಲಕ್ಕೆ ನೀರು ಬಂದಿದೆ. ಅಂತರ್ಜಲ ಮಟ್ಟ ವೃದ್ಧಿಸುವ ಮೂಲಕ ಬತ್ತಿರುವ ಕೊಳವೆಬಾವಿಗಳಿಗೆ ಮರುಜೀವ ಸಿಕ್ಕಿದೆ. ನೂರಾರು ಎಕರೆಗೆ ನೀರು ಒದಗಿಸಬಹುದು ಎನ್ನುತ್ತಾರೆ ಗ್ರಾಮ ಪಂಚಾಯಿತಿ ಸದಸ್ಯ ಎಂ.ಜಿ.ಗಂಗಾಧರ್.</p>.<p>ಜಾನುವಾರಗಳಿಗೆ ಕುಡಿಯುವುದಕ್ಕೆ ನೀರು ಸಿಗದೇ ಅಂತರ್ಜಲ ಮಟ್ಟವು ಸಾವಿರ ಅಡಿಗಳಿಗೂ ಆಳಕ್ಕೆ ಕುಸಿದಿದೆ. ನೀರು ಬಂದಿರುವುದರಿಂದ ಸ್ವಲ್ಪ ನೆಮ್ಮದಿ ತಂದಿದೆ ಎಂದು ಹೊನ್ನೇನಹಳ್ಳಿ ರುದ್ರೇಶ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾಬಸ್ಪೇಟೆ: </strong>ಸೋಂಪುರ ಹೋಬಳಿ ಯಾದ್ಯಂತ ಬೀಳುತ್ತಿರುವ ಉತ್ತಮ ಮಳೆಯಿಂದ ಇಲ್ಲಿನ ಕೆರೆ ಕುಂಟೆ,<br />ಹೊಂಡಗಳಲ್ಲಿ ನೀರು ಸಂಗ್ರಹಗೊಳ್ಳು ತ್ತಿದೆ. ಇದು ರೈತರ ಮೊಗದಲ್ಲಿ ಮಂದ ಹಾಸ ಮೂಡಿಸಿದೆ. ಜಾನುವಾರುಗಳಿಗೆ ನೀರಿನ ಕೊರತೆ ನಿವಾರಣೆಯಾಗಿದೆ. ಅಂತರ್ಜಲ ವೃದ್ಧಿಯಾಗಿ ಕೊಳವೆಬಾವಿಗಳಲ್ಲಿ ಹೆಚ್ಚಿನ ನೀರು ತುಂಬಿಕೊಳ್ಳುವ ಆಶಾಭಾವನೆ ಮೂಡಿಸಿದೆ.</p>.<p>ದೇವರಹೊಸಹಳ್ಳಿ, ಹಳೇನಿಜಗಲ್ಲು ಕೆರೆಗಳು ಕೊಡಿಯಾಗಿವೆ. ಚನ್ನೋಹಳ್ಳಿ, ರಾಯರ ಪಾಳ್ಯ, ಬಿಲ್ಲಿನ ಕೋಟೆ, ಕಂಬಾಳು, ನಿಡವಂದ, ಲಕ್ಕೂರು, ಹೊನ್ನೆನಹಳ್ಳಿ ಕೆರೆಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ನೀರು ಸಂಗ್ರಹವಾಗಿದೆ. ಮುಂಗಾರು ಮಳೆ ಬಿರುಸುಗೊಂಡಿರುವುದರಿಂದ ಇನ್ನಷ್ಟು ನೀರು ಸಂಗ್ರಹವಾಗುವ ಮುನ್ಸೂಚನೆ ಇದೆ.</p>.<p>ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯವರು ಅಭಿವೃದ್ಧಿಪಡಿಸಿರುವ ಬುಗಡಿಹಳ್ಳಿ ಹಾಗೂ ಮಾದೇನಹಳ್ಳಿ ಕೆರೆಗಳಲ್ಲಿಯೂ ಸಮೃದ್ಧವಾದ ನೀರು ನಿಂತಿದೆ. ಈ ಬಾರಿಯ ಮಳೆಯಿಂದ ಜಲಮೂಲಕ್ಕೆ ನೀರು ಬಂದಿದೆ. ಅಂತರ್ಜಲ ಮಟ್ಟ ವೃದ್ಧಿಸುವ ಮೂಲಕ ಬತ್ತಿರುವ ಕೊಳವೆಬಾವಿಗಳಿಗೆ ಮರುಜೀವ ಸಿಕ್ಕಿದೆ. ನೂರಾರು ಎಕರೆಗೆ ನೀರು ಒದಗಿಸಬಹುದು ಎನ್ನುತ್ತಾರೆ ಗ್ರಾಮ ಪಂಚಾಯಿತಿ ಸದಸ್ಯ ಎಂ.ಜಿ.ಗಂಗಾಧರ್.</p>.<p>ಜಾನುವಾರಗಳಿಗೆ ಕುಡಿಯುವುದಕ್ಕೆ ನೀರು ಸಿಗದೇ ಅಂತರ್ಜಲ ಮಟ್ಟವು ಸಾವಿರ ಅಡಿಗಳಿಗೂ ಆಳಕ್ಕೆ ಕುಸಿದಿದೆ. ನೀರು ಬಂದಿರುವುದರಿಂದ ಸ್ವಲ್ಪ ನೆಮ್ಮದಿ ತಂದಿದೆ ಎಂದು ಹೊನ್ನೇನಹಳ್ಳಿ ರುದ್ರೇಶ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>