ಇದರ ವಿಚಾರಣೆ ನಡೆಸಿದ ಹೈಕೋರ್ಟ್ ಒತ್ತುವರಿ ತೆರವುಗೊಳಿಸುವಂತೆ ಜೂನ್ 14ರಂದು ಆದೇಶ ಹೊರಡಿಸಿತ್ತು. ಇದೀಗ ನೆಲಮಂಗಲ ತಹಶೀಲ್ದಾರ್ ಕೆ.ಅರುಂಧತಿ, ತಾಲ್ಲೂಕು ಪಂಚಾಯಿತಿ ಇಒ ಎಸ್. ಮಧು, ಸರ್ವೆ ಇಲಾಖೆಯ ಎಡಿಎಲ್ಆರ್ ನಯನಾ, ಲೋಕೋಪಯೋಗಿ ಇಲಾಖೆಯ ನಟರಾಜು, ಉಪ ತಹಶೀಲ್ದಾರ್ ಬಿ.ಸಿ. ಶಶಿಧರ್, ದಾಬಸ್ ಪೇಟೆ ಠಾಣೆ ಪೊಲೀಸ್ ಇನ್ಸ್ಪೆಕ್ಟರ್ ಬಿ.ರಾಜು, ಪಿಡಿಒ ರವಿಶಂಕರ್, ರಾಜಸ್ವ ನೀರಿಕ್ಷಕ ಎಚ್.ಎಂ.ಕುಮಾರಸ್ವಾಮಿ ನೇತೃತ್ವದಲ್ಲಿ ಸರ್ವೆ ನಡೆಸಲಾಯಿತು.