<p><strong>ಹೆಸರಘಟ್ಟ: </strong>ಹೈನುಗಾರಿಕೆಯು ಗ್ರಾಮೀಣ ಪ್ರದೇಶದ ಆರ್ಥಿಕ ವ್ಯವಸ್ಥೆಯನ್ನು ಗಟ್ಟಿ ಮಾಡುವುದಲ್ಲದೆ, ಇದರಿಂದ ಮಹಿಳೆಯರು ಸಬಲರಾಗಬಹುದು ಎಂದು ಚಿಕ್ಕಬಳ್ಳಾಪುರ ಲೋಕಸಭಾ ಸದಸ್ಯ ಕೆ.ಸುಧಾಕರ್ ಹೇಳಿದರು.</p>.<p>ಹೊಸಹಳ್ಳಿಪಾಳ್ಯ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಮೊದಲನೇ ಮಹಡಿಯ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಇಂದು ಲಕ್ಷಾಂತರ ಕುಟುಂಬಗಳು ಹೈನುಗಾರಿಕೆಯಲ್ಲಿ ತೊಡಗಿಸಿಕೊಂಡಿದ್ದು ಬದುಕನ್ನು ಕಟ್ಟಿಕೊಂಡಿವೆ. ಹೈನುಗಾರಿಕೆಯಿಂದ ಪ್ರತಿನಿತ್ಯ ಹಣದ ವಹಿವಾಟು ನಡೆಯುವುದರಿಂದ ಮಹಿಳೆಯರು ಸ್ವಾವಲಂಬಿಯಾಗಿ ಜೀವನ ನಡೆಸಬಹುದಾಗಿದೆ’ ಎಂದು ತಿಳಿಸಿದರು.</p>.<p>ಬಮೂಲ್ ನಿರ್ದೇಶಕ ಕಡತನಮಲೆ ಸತೀಶ್, ‘ಏಪ್ರಿಲ್ 1ರಂದು ಹಾಲು ಉತ್ಪಾದಕರ ಖಾತೆಗಳಿಗೆ ನೇರವಾಗಿ ಲೀಟರ್ಗೆ ಹೆಚ್ಚುವರಿ ₹1 ಅನ್ನು ವರ್ಗಾಯಿಸಲಾಗುತ್ತದೆ. ಲಾಭಾಂಶದ ಹಣದಲ್ಲಿ ಪ್ರತಿ ಸಹಕಾರ ಸಂಘಕ್ಕೆ ₹15 ಸಾವಿರ ಹಂಚಿಕೆ ಮಾಡಲಾಗುತ್ತದೆ’ ಎಂದರು.</p>.<p>ಗುಣಮಟ್ಟದ ಹಾಲು ಉತ್ಪಾದನೆಗಾಗಿ 15 ಅಡಿ ಎತ್ತರ ಬೆಳೆಯುವ ಜೋಳವನ್ನು ಪ್ರತಿ ಹಾಲು ಉತ್ಪಾದಕರಿಗೆ 5 ಕೆ.ಜಿ. ಉಚಿತವಾಗಿ ವಿತರಣೆ ಮಾಡಲಾಗುತ್ತದೆ. ರೈತರು ಹಾಲು ಉತ್ಪಾದನೆಯಲ್ಲಿ ತೊಡಗಲು ಪ್ರೋತ್ಸಾಹಿಸುವ ಸಲುವಾಗಿ ಹಲವಾರು ಕಾರ್ಯಕ್ರಮಗಳನ್ನು ಜಾರಿಗೆ ತರಲಾಗಿದೆ ಎಂದರು.</p>.<p>ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಚ್ ಸೀನಪ್ಪ, ಬಿಜೆಪಿ ಮುಖಂಡರಾದ ಹನುಮಯ್ಯ, ಬಾಬು, ಅಜಯ್, ವಿಜಯಕುಮಾರ್, ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ನವಾನಂದ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೆಸರಘಟ್ಟ: </strong>ಹೈನುಗಾರಿಕೆಯು ಗ್ರಾಮೀಣ ಪ್ರದೇಶದ ಆರ್ಥಿಕ ವ್ಯವಸ್ಥೆಯನ್ನು ಗಟ್ಟಿ ಮಾಡುವುದಲ್ಲದೆ, ಇದರಿಂದ ಮಹಿಳೆಯರು ಸಬಲರಾಗಬಹುದು ಎಂದು ಚಿಕ್ಕಬಳ್ಳಾಪುರ ಲೋಕಸಭಾ ಸದಸ್ಯ ಕೆ.ಸುಧಾಕರ್ ಹೇಳಿದರು.</p>.<p>ಹೊಸಹಳ್ಳಿಪಾಳ್ಯ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಮೊದಲನೇ ಮಹಡಿಯ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಇಂದು ಲಕ್ಷಾಂತರ ಕುಟುಂಬಗಳು ಹೈನುಗಾರಿಕೆಯಲ್ಲಿ ತೊಡಗಿಸಿಕೊಂಡಿದ್ದು ಬದುಕನ್ನು ಕಟ್ಟಿಕೊಂಡಿವೆ. ಹೈನುಗಾರಿಕೆಯಿಂದ ಪ್ರತಿನಿತ್ಯ ಹಣದ ವಹಿವಾಟು ನಡೆಯುವುದರಿಂದ ಮಹಿಳೆಯರು ಸ್ವಾವಲಂಬಿಯಾಗಿ ಜೀವನ ನಡೆಸಬಹುದಾಗಿದೆ’ ಎಂದು ತಿಳಿಸಿದರು.</p>.<p>ಬಮೂಲ್ ನಿರ್ದೇಶಕ ಕಡತನಮಲೆ ಸತೀಶ್, ‘ಏಪ್ರಿಲ್ 1ರಂದು ಹಾಲು ಉತ್ಪಾದಕರ ಖಾತೆಗಳಿಗೆ ನೇರವಾಗಿ ಲೀಟರ್ಗೆ ಹೆಚ್ಚುವರಿ ₹1 ಅನ್ನು ವರ್ಗಾಯಿಸಲಾಗುತ್ತದೆ. ಲಾಭಾಂಶದ ಹಣದಲ್ಲಿ ಪ್ರತಿ ಸಹಕಾರ ಸಂಘಕ್ಕೆ ₹15 ಸಾವಿರ ಹಂಚಿಕೆ ಮಾಡಲಾಗುತ್ತದೆ’ ಎಂದರು.</p>.<p>ಗುಣಮಟ್ಟದ ಹಾಲು ಉತ್ಪಾದನೆಗಾಗಿ 15 ಅಡಿ ಎತ್ತರ ಬೆಳೆಯುವ ಜೋಳವನ್ನು ಪ್ರತಿ ಹಾಲು ಉತ್ಪಾದಕರಿಗೆ 5 ಕೆ.ಜಿ. ಉಚಿತವಾಗಿ ವಿತರಣೆ ಮಾಡಲಾಗುತ್ತದೆ. ರೈತರು ಹಾಲು ಉತ್ಪಾದನೆಯಲ್ಲಿ ತೊಡಗಲು ಪ್ರೋತ್ಸಾಹಿಸುವ ಸಲುವಾಗಿ ಹಲವಾರು ಕಾರ್ಯಕ್ರಮಗಳನ್ನು ಜಾರಿಗೆ ತರಲಾಗಿದೆ ಎಂದರು.</p>.<p>ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಚ್ ಸೀನಪ್ಪ, ಬಿಜೆಪಿ ಮುಖಂಡರಾದ ಹನುಮಯ್ಯ, ಬಾಬು, ಅಜಯ್, ವಿಜಯಕುಮಾರ್, ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ನವಾನಂದ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>