<p><strong>ಕೆ.ಆರ್.ಪುರ:</strong> ಹೂಡಿ ಸ್ಪೋರ್ಟ್ ಕ್ಲಬ್ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ರಾಜ್ಯಮಟ್ಟದ ಮಹಿಳೆಯರ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ, ಹಾವೇರಿ ಜಿಲ್ಲೆ ದ್ವೀತಿಯ, ಮಂಡ್ಯ ಮತ್ತು ಬೆಂಗಳೂರು ನಗರ ಜಿಲ್ಲೆಯ ತಂಡದವರು ತೃತೀಯ ಸ್ಥಾನ ಪಡೆದುಕೊಂಡರು.</p>.<p>ಕರ್ನಾಟಕ ರಾಜ್ಯ ಅಮೆಚೂರ್ ಸಂಸ್ಥೆಯ ಸಹಯೋಗದಲ್ಲಿ ಮೂರು ದಿನಗಳು ನಡೆದ ಹೊನಲು ಬೆಳಕಿನ ಮಹಿಳಾ ಪಂದ್ಯಾವಳಿಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ 16 ತಂಡಗಳು ಭಾಗವಹಿಸಿದ್ದವು.</p>.<p>ಕ್ಷೀಣಿಸುತ್ತಿರುವ ಗ್ರಾಮೀಣ ಕ್ರೀಡೆಯಾದ ಕಬಡ್ಡಿಯನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಮಹಿಳೆಯರ ಹೊನಲು ಬೆಳಕಿನ ಪಂದ್ಯಾವಳಿ ಆಯೋಜನೆ ಮಾಡಲಾಗಿದೆ ಎಂದು ಆಯೋಜಕ ಹೂಡಿ ಪಿಳ್ಳಪ್ಪ ಹೇಳಿದರು.</p>.<p>ಕಬಡ್ಡಿ ಹೆಮ್ಮೆಯ ರಾಷ್ಟ್ರೀಯ ಕ್ರೀಡೆಯಾಗಿದ್ದು ಗ್ರಾಮೀಣ ಪ್ರದೇಶದ ಮಕ್ಕಳು ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಸ್ಪರ್ಧಿಸಬೇಕು. ಹಲವಾರು ವರ್ಷಗಳಿಂದ ಕಬಡ್ಡಿ ಆಯೋಜಿಸಿಕೊಂಡು ಬರಲಾಗುತ್ತಿದೆ ಎಂದರು.</p>.<p>ಈ ಸಂಧರ್ಭದಲ್ಲಿ ಮಾಜಿ ಶಾಸಕ ಅರವಿಂದ ಲಿಂಬಾವಳಿ, ಮಹದೇವಪುರ ಬಿಜೆಪಿ ನಗರ ಮಂಡಲ ಅಧ್ಯಕ್ಷ ಶ್ರೀಧರ್ ರೆಡ್ಡಿ, ಮುಖಂಡರಾದ ಮನೋಹರ್ ರೆಡ್ಡಿ, ನಟರಾಜ್, ಕೆ.ವಿ.ನಾಗರಾಜ್, ಅಶೋಕ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆ.ಆರ್.ಪುರ:</strong> ಹೂಡಿ ಸ್ಪೋರ್ಟ್ ಕ್ಲಬ್ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ರಾಜ್ಯಮಟ್ಟದ ಮಹಿಳೆಯರ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ, ಹಾವೇರಿ ಜಿಲ್ಲೆ ದ್ವೀತಿಯ, ಮಂಡ್ಯ ಮತ್ತು ಬೆಂಗಳೂರು ನಗರ ಜಿಲ್ಲೆಯ ತಂಡದವರು ತೃತೀಯ ಸ್ಥಾನ ಪಡೆದುಕೊಂಡರು.</p>.<p>ಕರ್ನಾಟಕ ರಾಜ್ಯ ಅಮೆಚೂರ್ ಸಂಸ್ಥೆಯ ಸಹಯೋಗದಲ್ಲಿ ಮೂರು ದಿನಗಳು ನಡೆದ ಹೊನಲು ಬೆಳಕಿನ ಮಹಿಳಾ ಪಂದ್ಯಾವಳಿಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ 16 ತಂಡಗಳು ಭಾಗವಹಿಸಿದ್ದವು.</p>.<p>ಕ್ಷೀಣಿಸುತ್ತಿರುವ ಗ್ರಾಮೀಣ ಕ್ರೀಡೆಯಾದ ಕಬಡ್ಡಿಯನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಮಹಿಳೆಯರ ಹೊನಲು ಬೆಳಕಿನ ಪಂದ್ಯಾವಳಿ ಆಯೋಜನೆ ಮಾಡಲಾಗಿದೆ ಎಂದು ಆಯೋಜಕ ಹೂಡಿ ಪಿಳ್ಳಪ್ಪ ಹೇಳಿದರು.</p>.<p>ಕಬಡ್ಡಿ ಹೆಮ್ಮೆಯ ರಾಷ್ಟ್ರೀಯ ಕ್ರೀಡೆಯಾಗಿದ್ದು ಗ್ರಾಮೀಣ ಪ್ರದೇಶದ ಮಕ್ಕಳು ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಸ್ಪರ್ಧಿಸಬೇಕು. ಹಲವಾರು ವರ್ಷಗಳಿಂದ ಕಬಡ್ಡಿ ಆಯೋಜಿಸಿಕೊಂಡು ಬರಲಾಗುತ್ತಿದೆ ಎಂದರು.</p>.<p>ಈ ಸಂಧರ್ಭದಲ್ಲಿ ಮಾಜಿ ಶಾಸಕ ಅರವಿಂದ ಲಿಂಬಾವಳಿ, ಮಹದೇವಪುರ ಬಿಜೆಪಿ ನಗರ ಮಂಡಲ ಅಧ್ಯಕ್ಷ ಶ್ರೀಧರ್ ರೆಡ್ಡಿ, ಮುಖಂಡರಾದ ಮನೋಹರ್ ರೆಡ್ಡಿ, ನಟರಾಜ್, ಕೆ.ವಿ.ನಾಗರಾಜ್, ಅಶೋಕ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>