<p><strong>ಬೆಂಗಳೂರು</strong>: ದಲಿತರು ಉದ್ಯಮಿಗಳಾಗಲು ಇರುವ ದಾರಿಗಳನ್ನು ಶೋಧಿಸಬೇಕು ಎಂದು ದಲಿತ್ ಇಂಡಿಯನ್ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿ (ಡಿಐಸಿಸಿಐ) ಬುಡಕಟ್ಟು ವಿಭಾಗದ ರಾಷ್ಟ್ರೀಯ ಉಪಾಧ್ಯಕ್ಷ ರಾಜಾನಾಯಕ್ ಹೇಳಿದರು.</p>.<p>ಡಿಐಸಿಸಿಐ ಮತ್ತು ಅದರ ಕರ್ನಾಟಕ ಘಟಕದ ನೇತೃತ್ವದಲ್ಲಿ ಭಾನುವಾರ ನಡೆದ ಉದ್ಯಮ ಜಾಗೃತಿ ಮತ್ತು ಮಹಿಳಾ ದಿನಾಚರಣೆಯ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ದಲಿತರು ಉದ್ಯಮಿಗಳಾಗಲು ಶ್ರಮವಹಿಸಿ ಕೆಲಸ ಮಾಡಬೇಕು. ನಾವು ತಯಾರಿಸುವ ವಸ್ತುಗಳು ಹೆಚ್ಚು ಗುಣಮಟ್ಟ ಹೊಂದಿದ್ದಾಗ ಮಾತ್ರ ನಮ್ಮ ಬೆಳವಣಿಗೆ ಸಾಧ್ಯ. ಉದ್ಯಮಿಗಳಾಗಲು ಮುಂದೆ ಬಂದರೆ ಉತ್ತಮ ಮಾರ್ಗದರ್ಶನವನ್ನು ಡಿಐಸಿಸಿಐ ನೀಡಲಿದೆ. ಈ ಅವಕಾಶವನ್ನು ಬಳಸಿಕೊಳ್ಳಬೇಕು’ ಎಂದರು.</p>.<p>ಉದ್ಯಮಿಗಳಾಗುವ ಕನಸು ಕಾಣುವವರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಅಡಿಯಲ್ಲಿ ಸಾಕಷ್ಟು ಅವಕಾಶಗಳಿವೆ. ಅವುಗಳನ್ನು ಸಕಾರಾತ್ಮಕವಾಗಿ ಬಳಸಿಕೊಳ್ಳಬೇಕು ಎಂದು ಸಲಹೆ ನೀಡಿದರು.</p>.<p>ಕರ್ನಾಟಕ ಘಟಕದ ಅಧ್ಯಕ್ಷ ಸಿ.ನರಸಿಂಹಮೂರ್ತಿ, ಮಾಜಿ ಅಧ್ಯಕ್ಷ ಬೆಳ್ಳಿ ಗಂಗಾಧರ್, ದಾವಣಗೆರೆ ಜಿಲ್ಲಾ ಘಟಕದ ಅಧ್ಯಕ್ಷ ಮಂಜುನಾಥ್ ಕಬ್ಬೂರು, ಬೆಂಗಳೂರು ನಗರ ಅಧ್ಯಕ್ಷ ಪ್ರಕಾಶ್, ಉದ್ಯಮಿ ರವಿ , ಶ್ರೀಕಾಂತ್ ಕೆ. ಪದಾಧಿಕಾರಿಗಳು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ದಲಿತರು ಉದ್ಯಮಿಗಳಾಗಲು ಇರುವ ದಾರಿಗಳನ್ನು ಶೋಧಿಸಬೇಕು ಎಂದು ದಲಿತ್ ಇಂಡಿಯನ್ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿ (ಡಿಐಸಿಸಿಐ) ಬುಡಕಟ್ಟು ವಿಭಾಗದ ರಾಷ್ಟ್ರೀಯ ಉಪಾಧ್ಯಕ್ಷ ರಾಜಾನಾಯಕ್ ಹೇಳಿದರು.</p>.<p>ಡಿಐಸಿಸಿಐ ಮತ್ತು ಅದರ ಕರ್ನಾಟಕ ಘಟಕದ ನೇತೃತ್ವದಲ್ಲಿ ಭಾನುವಾರ ನಡೆದ ಉದ್ಯಮ ಜಾಗೃತಿ ಮತ್ತು ಮಹಿಳಾ ದಿನಾಚರಣೆಯ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ದಲಿತರು ಉದ್ಯಮಿಗಳಾಗಲು ಶ್ರಮವಹಿಸಿ ಕೆಲಸ ಮಾಡಬೇಕು. ನಾವು ತಯಾರಿಸುವ ವಸ್ತುಗಳು ಹೆಚ್ಚು ಗುಣಮಟ್ಟ ಹೊಂದಿದ್ದಾಗ ಮಾತ್ರ ನಮ್ಮ ಬೆಳವಣಿಗೆ ಸಾಧ್ಯ. ಉದ್ಯಮಿಗಳಾಗಲು ಮುಂದೆ ಬಂದರೆ ಉತ್ತಮ ಮಾರ್ಗದರ್ಶನವನ್ನು ಡಿಐಸಿಸಿಐ ನೀಡಲಿದೆ. ಈ ಅವಕಾಶವನ್ನು ಬಳಸಿಕೊಳ್ಳಬೇಕು’ ಎಂದರು.</p>.<p>ಉದ್ಯಮಿಗಳಾಗುವ ಕನಸು ಕಾಣುವವರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಅಡಿಯಲ್ಲಿ ಸಾಕಷ್ಟು ಅವಕಾಶಗಳಿವೆ. ಅವುಗಳನ್ನು ಸಕಾರಾತ್ಮಕವಾಗಿ ಬಳಸಿಕೊಳ್ಳಬೇಕು ಎಂದು ಸಲಹೆ ನೀಡಿದರು.</p>.<p>ಕರ್ನಾಟಕ ಘಟಕದ ಅಧ್ಯಕ್ಷ ಸಿ.ನರಸಿಂಹಮೂರ್ತಿ, ಮಾಜಿ ಅಧ್ಯಕ್ಷ ಬೆಳ್ಳಿ ಗಂಗಾಧರ್, ದಾವಣಗೆರೆ ಜಿಲ್ಲಾ ಘಟಕದ ಅಧ್ಯಕ್ಷ ಮಂಜುನಾಥ್ ಕಬ್ಬೂರು, ಬೆಂಗಳೂರು ನಗರ ಅಧ್ಯಕ್ಷ ಪ್ರಕಾಶ್, ಉದ್ಯಮಿ ರವಿ , ಶ್ರೀಕಾಂತ್ ಕೆ. ಪದಾಧಿಕಾರಿಗಳು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>