<p><strong>ಬೆಂಗಳೂರು</strong>: ಕರ್ನಾಟಕ ಸಾಹಿತ್ಯ ಅಕಾಡೆಮಿಯು ಬೆಂಗಳೂರು ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಕೇಂದ್ರದ ಸಹಯೋಗದಲ್ಲಿ ಜ.2ರಿಂದ ಜ.4ರವರೆಗೆ ‘ದಲಿತ ಸಾಹಿತ್ಯ ಮತ್ತು ಚಳವಳಿ–50’ ಶೀರ್ಷಿಕೆಯಡಿ ಅಧ್ಯಯನ ಶಿಬಿರ ಹಮ್ಮಿಕೊಂಡಿದೆ. </p>.<p>ಸುದ್ದಿಗೋಷ್ಠಿಯಲ್ಲಿ ಬುಧವಾರ ಮಾತನಾಡಿದ ಅಕಾಡೆಮಿ ಅಧ್ಯಕ್ಷ ಎಲ್.ಎನ್. ಮುಕುಂದರಾಜ್ ಈ ಬಗ್ಗೆ ಮಾಹಿತಿ ನೀಡಿದರು.</p>.<p>‘ಈ ಶಿಬಿರವು ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಆವರಣದಲ್ಲಿರುವ ವೆಂಕಟಗಿರಿಗೌಡ ಸಭಾಂಗಣದಲ್ಲಿ ನಡೆಯಲಿದೆ. ಈ ಶಿಬಿರದಲ್ಲಿ ಪಾಲ್ಗೊಳ್ಳಲು 250 ಮಂದಿ ಅರ್ಜಿ ಸಲ್ಲಿಸಿದ್ದರು. ಅವರಲ್ಲಿ 60 ಮಂದಿಯನ್ನು ಆಯ್ಕೆ ಮಾಡಲಾಗಿದೆ. ರಾಜ್ಯದಲ್ಲಿ ನಡೆದ ದಲಿತ ಚಳವಳಿಯ ಪರಿಣಾಮ ಮತ್ತು ಅದರ ಪ್ರಭಾವವನ್ನು ಪರಿಚಯಿಸಲಾಗುತ್ತದೆ’ ಎಂದು ಹೇಳಿದರು.</p>.<p>‘ಜ.2ರಂದು ಬೆಳಿಗ್ಗೆ 10.30ಕ್ಕೆ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಕವಿ ಹಾಗೂ ಹೋರಾಟಗಾರ ಎಚ್. ಗೋವಿಂದಯ್ಯ ಅವರು ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಜಯಕರ ಎಸ್.ಎಂ. ಅಧ್ಯಕ್ಷತೆ ವಹಿಸುತ್ತಾರೆ. ಸಾಹಿತಿ ಕೋಟಿಗಾನಹಳ್ಳಿ ರಾಮಯ್ಯ ಅವರು ಈ ಶಿಬಿರದ ನಿರ್ದೇಶಕರಾಗಿದ್ದಾರೆ’ ಎಂದು ಮಾಹಿತಿ ನೀಡಿದರು.</p>.<p>‘ದಲಿತ ಚಳವಳಿಯ ಹುಟ್ಟು, ಬೂಸಾ ಚಳವಳಿ, ದಲಿತ ಆತ್ಮಕತೆಗಳು, ದಲಿತ ಕಾವ್ಯ, ದಲಿತ ಸಾಹಿತ್ಯ ಸೇರಿ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಒಟ್ಟು 14 ಗೋಷ್ಠಿಗಳನ್ನು ಹಮ್ಮಿಕೊಳ್ಳಲಾಗಿದೆ. ವಿಷಯ ತಜ್ಞರು ವಿಚಾರ ಮಂಡಿಸುತ್ತಾರೆ. ಶಿಬಿರಾರ್ಥಿಗಳ ಜತೆಗೆ ಸಾರ್ವಜನಿಕರೂ ಪಾಲ್ಗೊಳ್ಳಬಹುದು’ ಎಂದು ಹೇಳಿದರು. </p>.<p>ಅಕಾಡೆಮಿ ರಿಜಿಸ್ಟ್ರಾರ್ ಕರಿಯಪ್ಪ ಎನ್., ಬೆಂಗಳೂರು ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ವಿಭಾಗದ ನಿರ್ದೇಶಕ ಡಿ. ಡೊಮಿನಿಕ್ ಹಾಗೂ ಅಕಾಡೆಮಿ ಸದಸ್ಯರೂ ಆಗಿರುವ ಶಿಬಿರದ ಸಂಚಾಲಕ ರವಿಕುಮಾರ್ ಬಾಗಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಕರ್ನಾಟಕ ಸಾಹಿತ್ಯ ಅಕಾಡೆಮಿಯು ಬೆಂಗಳೂರು ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಕೇಂದ್ರದ ಸಹಯೋಗದಲ್ಲಿ ಜ.2ರಿಂದ ಜ.4ರವರೆಗೆ ‘ದಲಿತ ಸಾಹಿತ್ಯ ಮತ್ತು ಚಳವಳಿ–50’ ಶೀರ್ಷಿಕೆಯಡಿ ಅಧ್ಯಯನ ಶಿಬಿರ ಹಮ್ಮಿಕೊಂಡಿದೆ. </p>.<p>ಸುದ್ದಿಗೋಷ್ಠಿಯಲ್ಲಿ ಬುಧವಾರ ಮಾತನಾಡಿದ ಅಕಾಡೆಮಿ ಅಧ್ಯಕ್ಷ ಎಲ್.ಎನ್. ಮುಕುಂದರಾಜ್ ಈ ಬಗ್ಗೆ ಮಾಹಿತಿ ನೀಡಿದರು.</p>.<p>‘ಈ ಶಿಬಿರವು ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಆವರಣದಲ್ಲಿರುವ ವೆಂಕಟಗಿರಿಗೌಡ ಸಭಾಂಗಣದಲ್ಲಿ ನಡೆಯಲಿದೆ. ಈ ಶಿಬಿರದಲ್ಲಿ ಪಾಲ್ಗೊಳ್ಳಲು 250 ಮಂದಿ ಅರ್ಜಿ ಸಲ್ಲಿಸಿದ್ದರು. ಅವರಲ್ಲಿ 60 ಮಂದಿಯನ್ನು ಆಯ್ಕೆ ಮಾಡಲಾಗಿದೆ. ರಾಜ್ಯದಲ್ಲಿ ನಡೆದ ದಲಿತ ಚಳವಳಿಯ ಪರಿಣಾಮ ಮತ್ತು ಅದರ ಪ್ರಭಾವವನ್ನು ಪರಿಚಯಿಸಲಾಗುತ್ತದೆ’ ಎಂದು ಹೇಳಿದರು.</p>.<p>‘ಜ.2ರಂದು ಬೆಳಿಗ್ಗೆ 10.30ಕ್ಕೆ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಕವಿ ಹಾಗೂ ಹೋರಾಟಗಾರ ಎಚ್. ಗೋವಿಂದಯ್ಯ ಅವರು ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಜಯಕರ ಎಸ್.ಎಂ. ಅಧ್ಯಕ್ಷತೆ ವಹಿಸುತ್ತಾರೆ. ಸಾಹಿತಿ ಕೋಟಿಗಾನಹಳ್ಳಿ ರಾಮಯ್ಯ ಅವರು ಈ ಶಿಬಿರದ ನಿರ್ದೇಶಕರಾಗಿದ್ದಾರೆ’ ಎಂದು ಮಾಹಿತಿ ನೀಡಿದರು.</p>.<p>‘ದಲಿತ ಚಳವಳಿಯ ಹುಟ್ಟು, ಬೂಸಾ ಚಳವಳಿ, ದಲಿತ ಆತ್ಮಕತೆಗಳು, ದಲಿತ ಕಾವ್ಯ, ದಲಿತ ಸಾಹಿತ್ಯ ಸೇರಿ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಒಟ್ಟು 14 ಗೋಷ್ಠಿಗಳನ್ನು ಹಮ್ಮಿಕೊಳ್ಳಲಾಗಿದೆ. ವಿಷಯ ತಜ್ಞರು ವಿಚಾರ ಮಂಡಿಸುತ್ತಾರೆ. ಶಿಬಿರಾರ್ಥಿಗಳ ಜತೆಗೆ ಸಾರ್ವಜನಿಕರೂ ಪಾಲ್ಗೊಳ್ಳಬಹುದು’ ಎಂದು ಹೇಳಿದರು. </p>.<p>ಅಕಾಡೆಮಿ ರಿಜಿಸ್ಟ್ರಾರ್ ಕರಿಯಪ್ಪ ಎನ್., ಬೆಂಗಳೂರು ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ವಿಭಾಗದ ನಿರ್ದೇಶಕ ಡಿ. ಡೊಮಿನಿಕ್ ಹಾಗೂ ಅಕಾಡೆಮಿ ಸದಸ್ಯರೂ ಆಗಿರುವ ಶಿಬಿರದ ಸಂಚಾಲಕ ರವಿಕುಮಾರ್ ಬಾಗಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>