<p><strong>ಬೆಂಗಳೂರು</strong>: ‘ದಲಿತರು, ಅಲ್ಪಸಂಖ್ಯಾತರು ಒಗ್ಗಟ್ಟಾಗದಿದ್ದರೆ ರಾಜಕೀಯ ಶಕ್ತಿ ಪಡೆಯಲು ಸಾಧ್ಯವಿಲ್ಲ. ರಾಜ್ಯದಲ್ಲಿ ದಲಿತರು, ಅಲ್ಪಸಂಖ್ಯಾತ ಸಮುದಾಯದವರು ಮುಖ್ಯಮಂತ್ರಿಯಾಗಿ ಆರು ತಿಂಗಳು ಆಡಳಿತ ನಡೆಸಿದರೂ ನಾಡಿನಲ್ಲಿರುವ ಬಸವ ತತ್ವ ಸಾರ್ಥಕವಾಗಲಿದೆ’ ಎಂದು ಕೇಂದ್ರದ ಮಾಜಿ ಸಚಿವ ಸಿ.ಎಂ. ಇಬ್ರಾಹಿಂ ಹೇಳಿದರು.</p>.<p>ಛತ್ರಪತಿ ಶಾಹು ಮಹಾರಾಜರ 151ನೇ ಜನ್ಮದಿನದ ಪ್ರಯುಕ್ತ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ, ಕರ್ನಾಟಕ ದಲಿತ ಸಂಘರ್ಷ ಸಮಿತಿ–ಭೀಮವಾದ ಶನಿವಾರ ಏರ್ಪಡಿಸಿದ್ದ ‘ಪ್ರಸ್ತುತ ಮೀಸಲಾತಿ ಮತ್ತು ಇಂದಿನ ಸವಾಲುಗಳು’ ಕುರಿತ ಚರ್ಚೆ ಹಾಗೂ ಜಾಗೃತಿ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಸಿದ್ದರಾಮಯ್ಯ ಜಾತಿ ಸಮೀಕ್ಷೆಯನ್ನು ತಿರಸ್ಕರಿಸುವ ಮೂಲಕ ನಿರಾಸೆ ಮೂಡಿಸಿದ್ದಾರೆ. ಅವರು ತಮ್ಮ ಸ್ಥಾನ ಉಳಿಸಿಕೊಳ್ಳಲು ತನ್ನನ್ನು ನಂಬಿದ ಸಮುದಾಯದ ಮಾನ ಕಳೆದಿದ್ದಾರೆ. ಸಿದ್ದರಾಮಯ್ಯರಿಗೆ ಸ್ಥಾನ ಮುಖ್ಯವೇ ಹೊರತು ಮಾನವಲ್ಲ’ ಎಂದು ಟೀಕಿಸಿದರು.</p>.<p>‘ಬಿಜೆಪಿ, ಕಾಂಗ್ರೆಸ್ನವರಿಗೆ ಓಟ್ ಬ್ಯಾಂಕ್ ಆಗಿ ನಾವು ಬೇಕಾಗಿದೆಯೇ ಹೊರತು ರಾಜಕೀಯ ಶಕ್ತಿಯಾಗಿ ಅಲ್ಲ. ಇದನ್ನು ಅರ್ಥ ಮಾಡಿಕೊಂಡು ಪರ್ಯಾಯ ರಾಜಕಾರಣ ಮಾಡಬೇಕು. ಸಂವಿಧಾನದ ಮೂಲಕ ಅಂಬೇಡ್ಕರ್ ನೀಡಿದ ಮತದಾನದ ಹಕ್ಕನ್ನು ಬಳಸಿಕೊಂಡು ವಿಧಾನಸೌಧ ಪ್ರವೇಶಿಸಬೇಕು’ ಎಂದು ಪ್ರತಿಪಾದಿಸಿದರು.</p>.<p>ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್, ಬಹುಜನ ಸಮಾಜ ಪಾರ್ಟಿ ರಾಜ್ಯ ಸಂಯೋಜಕ ಮಾರಸಂದ್ರ ಮುನಿಯಪ್ಪ ಮಾತನಾಡಿದರು. ಮುಖಂಡರಾದ ಎಂ. ಗೋಪಿನಾಥ್, ಆರ್. ಮೋಹನ್ ರಾಜ್, ಆರ್.ಎಂ.ಎನ್. ರಮೇಶ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ದಲಿತರು, ಅಲ್ಪಸಂಖ್ಯಾತರು ಒಗ್ಗಟ್ಟಾಗದಿದ್ದರೆ ರಾಜಕೀಯ ಶಕ್ತಿ ಪಡೆಯಲು ಸಾಧ್ಯವಿಲ್ಲ. ರಾಜ್ಯದಲ್ಲಿ ದಲಿತರು, ಅಲ್ಪಸಂಖ್ಯಾತ ಸಮುದಾಯದವರು ಮುಖ್ಯಮಂತ್ರಿಯಾಗಿ ಆರು ತಿಂಗಳು ಆಡಳಿತ ನಡೆಸಿದರೂ ನಾಡಿನಲ್ಲಿರುವ ಬಸವ ತತ್ವ ಸಾರ್ಥಕವಾಗಲಿದೆ’ ಎಂದು ಕೇಂದ್ರದ ಮಾಜಿ ಸಚಿವ ಸಿ.ಎಂ. ಇಬ್ರಾಹಿಂ ಹೇಳಿದರು.</p>.<p>ಛತ್ರಪತಿ ಶಾಹು ಮಹಾರಾಜರ 151ನೇ ಜನ್ಮದಿನದ ಪ್ರಯುಕ್ತ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ, ಕರ್ನಾಟಕ ದಲಿತ ಸಂಘರ್ಷ ಸಮಿತಿ–ಭೀಮವಾದ ಶನಿವಾರ ಏರ್ಪಡಿಸಿದ್ದ ‘ಪ್ರಸ್ತುತ ಮೀಸಲಾತಿ ಮತ್ತು ಇಂದಿನ ಸವಾಲುಗಳು’ ಕುರಿತ ಚರ್ಚೆ ಹಾಗೂ ಜಾಗೃತಿ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಸಿದ್ದರಾಮಯ್ಯ ಜಾತಿ ಸಮೀಕ್ಷೆಯನ್ನು ತಿರಸ್ಕರಿಸುವ ಮೂಲಕ ನಿರಾಸೆ ಮೂಡಿಸಿದ್ದಾರೆ. ಅವರು ತಮ್ಮ ಸ್ಥಾನ ಉಳಿಸಿಕೊಳ್ಳಲು ತನ್ನನ್ನು ನಂಬಿದ ಸಮುದಾಯದ ಮಾನ ಕಳೆದಿದ್ದಾರೆ. ಸಿದ್ದರಾಮಯ್ಯರಿಗೆ ಸ್ಥಾನ ಮುಖ್ಯವೇ ಹೊರತು ಮಾನವಲ್ಲ’ ಎಂದು ಟೀಕಿಸಿದರು.</p>.<p>‘ಬಿಜೆಪಿ, ಕಾಂಗ್ರೆಸ್ನವರಿಗೆ ಓಟ್ ಬ್ಯಾಂಕ್ ಆಗಿ ನಾವು ಬೇಕಾಗಿದೆಯೇ ಹೊರತು ರಾಜಕೀಯ ಶಕ್ತಿಯಾಗಿ ಅಲ್ಲ. ಇದನ್ನು ಅರ್ಥ ಮಾಡಿಕೊಂಡು ಪರ್ಯಾಯ ರಾಜಕಾರಣ ಮಾಡಬೇಕು. ಸಂವಿಧಾನದ ಮೂಲಕ ಅಂಬೇಡ್ಕರ್ ನೀಡಿದ ಮತದಾನದ ಹಕ್ಕನ್ನು ಬಳಸಿಕೊಂಡು ವಿಧಾನಸೌಧ ಪ್ರವೇಶಿಸಬೇಕು’ ಎಂದು ಪ್ರತಿಪಾದಿಸಿದರು.</p>.<p>ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್, ಬಹುಜನ ಸಮಾಜ ಪಾರ್ಟಿ ರಾಜ್ಯ ಸಂಯೋಜಕ ಮಾರಸಂದ್ರ ಮುನಿಯಪ್ಪ ಮಾತನಾಡಿದರು. ಮುಖಂಡರಾದ ಎಂ. ಗೋಪಿನಾಥ್, ಆರ್. ಮೋಹನ್ ರಾಜ್, ಆರ್.ಎಂ.ಎನ್. ರಮೇಶ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>