<p><strong>ಬೆಂಗಳೂರು:</strong> ಪರಿಶಿಷ್ಟರ ಪಿ.ಟಿ.ಸಿ.ಎಲ್ ಕಾಯ್ದೆಗೆ ರಾಜ್ಯ ಸರ್ಕಾರ ತಂದಿರುವ ತಿದ್ದುಪಡಿಯನ್ನು ಮಾನ್ಯ ಮಾಡದ ಕಂದಾಯ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಶುಕ್ರವಾರ ಪ್ರತಿಭಟನೆ ನಡೆಸಿತು.</p>.<p>ಹೈಕೋರ್ಟ್ನಲ್ಲಿ ಪಿ.ಟಿ.ಸಿ.ಎಲ್ ಪ್ರಕರಣಗಳು ವಜಾಗೊಳ್ಳುತ್ತಿವೆ. ಹಾಗಾಗಿ ರಾಜ್ಯ ಸರ್ಕಾರ ಪರಿಣತ ವಕೀಲರನ್ನು ನೇಮಿಸಿ, ಈ ಪ್ರಕರಣಗಳಲ್ಲಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಬೇಕು ಎಂದು ಪ್ರತಿಭಟನಕಾರರು ಆಗ್ರಹಿಸಿದರು.</p>.<p>ಪರಿಶಿಷ್ಟ ಜಾತಿ ಮತ್ತು ಪಂಗಡದವರು ಹಾಗೂ ಭೂ ಹೀನ ತಳ ಸಮುದಾಯದವರು ಉಳುಮೆ ಮಾಡುತ್ತಿರುವ ಬಗರ್ ಹುಕುಂ ಸಾಗುವಳಿ ಕಾಲಮಿತಿಯೊಳಗೆ ಇತ್ಯರ್ಥಗೊಳಿಸಬೇಕು. ವಿನಾಕಾರಣ ವಜಾಗೊಳಿಸಿರುವ ಬಗರ್ ಹುಕುಂ ಸಾಗುವಳಿಯ ಅರ್ಜಿಗಳನ್ನು ಮರುಪರಿಶೀಲಿಸಬೇಕು ಎಂದರು.</p>.<p>ಬೆಂಗಳೂರು ನಗರ ಜಿಲ್ಲೆ, ಪೂರ್ವ ತಾಲ್ಲೂಕಿನ ಕಾಡುಗೋಡಿ ಪ್ಲಾಂಟೇಷನ್ನಲ್ಲಿ ಪರಿಶಿಷ್ಟ ಜಾತಿಯವರಿಗೆ ಭೂಮಿ ಮಂಜೂರಾಗಿದೆ. ಆದರೆ, ಅರಣ್ಯ ಅಧಿಕಾರಿಗಳು ರೈತರನ್ನು ಒಕ್ಕಲೆಬ್ಬಿಸುತ್ತಿದ್ದಾರೆ. ಇದನ್ನು ತಡೆಯಬೇಕು. ಅಧಿಕಾರಿಗಳ ವಿರುದ್ಧ ಎಸ್ಸಿ, ಎಸ್ಟಿ ದೌರ್ಜನ್ಯ ನಿಯಂತ್ರಣ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಿದರು.</p>.<p>ಎಸ್ಸಿಎಸ್ಪಿ, ಟಿಎಸ್ಪಿ ನಿರ್ವಹಣೆಗೆ ಪ್ರತ್ಯೇಕ ನಿರ್ದೇಶನಾಲಯ ಅಥವಾ ಏಕ ಗವಾಕ್ಷಿ ಯೋಜನೆ ವ್ಯವಸ್ಥೆ ಜಾರಿಗೊಳಿಸಬೇಕು ಎಂದು ಮನವಿ ಮಾಡಿದರು. </p>.<p>ಪ್ರತಿಭಟನೆಯಲ್ಲಿ ಸಮಿತಿ ಸಂಘಟನಾ ಸಂಚಾಲಕ ಕಾರಳ್ಳಿ ಶ್ರೀನಿವಾಸ್, ಸದಸ್ಯರಾದ ಜಿಗಳ ಶ್ರೀರಾಮ್, ನಿರ್ಮಲಾ, ಸಂಪಂಗಿರಾಮ್, ಪ್ರೊ. ಬಿ.ಕೃಷ್ಣಪ್ಪ ಟ್ರಸ್ಟ್ ಮುಖ್ಯಸ್ಥೆ ಇಂದಿರಾ ಕೃಷ್ಣಪ್ಪ ಪಾಲ್ಗೊಂಡಿದ್ದರು.</p>.<div><blockquote>ಪರಿಶಿಷ್ಟರ ಮೇಲಿನ ದೌರ್ಜನ್ಯ ಪ್ರಕರಣ ನಿರ್ವಹಣೆಗೆ ಸರ್ಕಾರ ಸ್ಥಾಪಿಸಿರುವ ಡಿಸಿಆರ್ಇ ಪೊಲೀಸ್ ಠಾಣೆಗಳಿಗೆ ಅಗತ್ಯವಿರುವ ಸಿಬ್ಬಂದಿ ಮತ್ತು ಮೂಲಸೌಕರ್ಯ ಒದಗಿಸಬೇಕು.</blockquote><span class="attribution">ಮಾವಳ್ಳಿ ಶಂಕರ್, ದಸಂಸ ಪ್ರಧಾನ ಸಂಚಾಲಕ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಪರಿಶಿಷ್ಟರ ಪಿ.ಟಿ.ಸಿ.ಎಲ್ ಕಾಯ್ದೆಗೆ ರಾಜ್ಯ ಸರ್ಕಾರ ತಂದಿರುವ ತಿದ್ದುಪಡಿಯನ್ನು ಮಾನ್ಯ ಮಾಡದ ಕಂದಾಯ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಶುಕ್ರವಾರ ಪ್ರತಿಭಟನೆ ನಡೆಸಿತು.</p>.<p>ಹೈಕೋರ್ಟ್ನಲ್ಲಿ ಪಿ.ಟಿ.ಸಿ.ಎಲ್ ಪ್ರಕರಣಗಳು ವಜಾಗೊಳ್ಳುತ್ತಿವೆ. ಹಾಗಾಗಿ ರಾಜ್ಯ ಸರ್ಕಾರ ಪರಿಣತ ವಕೀಲರನ್ನು ನೇಮಿಸಿ, ಈ ಪ್ರಕರಣಗಳಲ್ಲಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಬೇಕು ಎಂದು ಪ್ರತಿಭಟನಕಾರರು ಆಗ್ರಹಿಸಿದರು.</p>.<p>ಪರಿಶಿಷ್ಟ ಜಾತಿ ಮತ್ತು ಪಂಗಡದವರು ಹಾಗೂ ಭೂ ಹೀನ ತಳ ಸಮುದಾಯದವರು ಉಳುಮೆ ಮಾಡುತ್ತಿರುವ ಬಗರ್ ಹುಕುಂ ಸಾಗುವಳಿ ಕಾಲಮಿತಿಯೊಳಗೆ ಇತ್ಯರ್ಥಗೊಳಿಸಬೇಕು. ವಿನಾಕಾರಣ ವಜಾಗೊಳಿಸಿರುವ ಬಗರ್ ಹುಕುಂ ಸಾಗುವಳಿಯ ಅರ್ಜಿಗಳನ್ನು ಮರುಪರಿಶೀಲಿಸಬೇಕು ಎಂದರು.</p>.<p>ಬೆಂಗಳೂರು ನಗರ ಜಿಲ್ಲೆ, ಪೂರ್ವ ತಾಲ್ಲೂಕಿನ ಕಾಡುಗೋಡಿ ಪ್ಲಾಂಟೇಷನ್ನಲ್ಲಿ ಪರಿಶಿಷ್ಟ ಜಾತಿಯವರಿಗೆ ಭೂಮಿ ಮಂಜೂರಾಗಿದೆ. ಆದರೆ, ಅರಣ್ಯ ಅಧಿಕಾರಿಗಳು ರೈತರನ್ನು ಒಕ್ಕಲೆಬ್ಬಿಸುತ್ತಿದ್ದಾರೆ. ಇದನ್ನು ತಡೆಯಬೇಕು. ಅಧಿಕಾರಿಗಳ ವಿರುದ್ಧ ಎಸ್ಸಿ, ಎಸ್ಟಿ ದೌರ್ಜನ್ಯ ನಿಯಂತ್ರಣ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಿದರು.</p>.<p>ಎಸ್ಸಿಎಸ್ಪಿ, ಟಿಎಸ್ಪಿ ನಿರ್ವಹಣೆಗೆ ಪ್ರತ್ಯೇಕ ನಿರ್ದೇಶನಾಲಯ ಅಥವಾ ಏಕ ಗವಾಕ್ಷಿ ಯೋಜನೆ ವ್ಯವಸ್ಥೆ ಜಾರಿಗೊಳಿಸಬೇಕು ಎಂದು ಮನವಿ ಮಾಡಿದರು. </p>.<p>ಪ್ರತಿಭಟನೆಯಲ್ಲಿ ಸಮಿತಿ ಸಂಘಟನಾ ಸಂಚಾಲಕ ಕಾರಳ್ಳಿ ಶ್ರೀನಿವಾಸ್, ಸದಸ್ಯರಾದ ಜಿಗಳ ಶ್ರೀರಾಮ್, ನಿರ್ಮಲಾ, ಸಂಪಂಗಿರಾಮ್, ಪ್ರೊ. ಬಿ.ಕೃಷ್ಣಪ್ಪ ಟ್ರಸ್ಟ್ ಮುಖ್ಯಸ್ಥೆ ಇಂದಿರಾ ಕೃಷ್ಣಪ್ಪ ಪಾಲ್ಗೊಂಡಿದ್ದರು.</p>.<div><blockquote>ಪರಿಶಿಷ್ಟರ ಮೇಲಿನ ದೌರ್ಜನ್ಯ ಪ್ರಕರಣ ನಿರ್ವಹಣೆಗೆ ಸರ್ಕಾರ ಸ್ಥಾಪಿಸಿರುವ ಡಿಸಿಆರ್ಇ ಪೊಲೀಸ್ ಠಾಣೆಗಳಿಗೆ ಅಗತ್ಯವಿರುವ ಸಿಬ್ಬಂದಿ ಮತ್ತು ಮೂಲಸೌಕರ್ಯ ಒದಗಿಸಬೇಕು.</blockquote><span class="attribution">ಮಾವಳ್ಳಿ ಶಂಕರ್, ದಸಂಸ ಪ್ರಧಾನ ಸಂಚಾಲಕ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>