‘ಗ್ರಾಮ ಸೇವಕರಾಗಿ ಸೇವೆ ನಿರ್ವಹಿಸುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದತೋಟಿ, ತಳವಾರ, ನೀರಗಂಟಿ ಮುಂತಾದ ಜಾತಿಯ ಸುಮಾರು 12 ಸಾವಿರ ನೌಕರರನ್ನು ಕಾಯಂಗೊಳಿಸಿ, ಸರ್ಕಾರ ಆದೇಶ ಹೊರಡಿಸಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನಾಂಗದ ಅಭಿವೃದ್ಧಿಗಾಗಿ ಮೀಸಲಿಟ್ಟಿರುವ ಹಣ ದುರ್ಬಳಕೆಯಾಗುತ್ತಿದೆ. ಸರ್ಕಾರ ಪ್ರಸ್ತುತ ಹಣಕಾಸು ವರ್ಷದಲ್ಲಿ ಹಂಚಿಕೆ ಮಾಡಿದ್ದ ಹಣದಲ್ಲಿ ಶೇ 34 ರಷ್ಟು ಅನುದಾನ ಮಾತ್ರ ವಿನಿಯೋಗವಾಗಿದೆ. ಆದ್ದರಿಂದ ಅನುದಾನದ ದುರ್ಬಳಕೆಯನ್ನು ತಡೆಯಬೇಕು’ ಎಂದು ಆಗ್ರಹಿಸಿದರು.