<p><strong>ಬೆಂಗಳೂರು</strong>: ‘ರಾಜ್ಯ ರಾಜಕಾರಣದಲ್ಲಿ ಈವರೆಗೂ ದಲಿತರು ಮುಖ್ಯಮಂತ್ರಿ ಗಾದಿಗೆ ಏರಿಲ್ಲ. ಹೀಗಾಗಿ ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ದಲಿತರನ್ನೇ ಮುಖ್ಯಮಂತ್ರಿ ಅಭ್ಯರ್ಥಿಗಳನ್ನಾಗಿ ಘೋಷಿಸಬೇಕು’ ಎಂದು ದಲಿತ ಸಂಘರ್ಷ ಸಮಿತಿ ಒತ್ತಾಯಿಸಿದೆ.</p>.<p>‘ಇದುವರೆಗೆ ಲಿಂಗಾಯತರು, ಒಕ್ಕಲಿಗರು, ಬ್ರಾಹ್ಮಣರು, ಅರಸು, ರಜಪೂತ ಹಾಗೂ ಹಿಂದುಳಿದ ವರ್ಗಗಳ ನಾಯಕರೇ ಈ ರಾಜ್ಯದ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದ್ದಾರೆ. ಶೇ 23.5 ರಷ್ಟು ಜನಸಂಖ್ಯೆ ಹೊಂದಿರುವ ದಲಿತರಿಗೆ ಈ ವಿಚಾರದಲ್ಲಿ ಅನ್ಯಾಯವಾಗಿದೆ. ಶೇ 12ರಷ್ಟು ಜನಸಂಖ್ಯೆ ಇರುವ ಮುಸ್ಲಿಂ ಸಮುದಾಯವೂ ಅವಕಾಶ ವಂಚಿತವಾಗಿದೆ’ ಎಂದು ಸಮಿತಿಯ ರಾಜ್ಯ ಸಂಚಾಲಕ ಹೆಣ್ಣೂರು ಶ್ರೀನಿವಾಸ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>‘ಬಾಬಾ ಸಾಹೇಬ್ ಅಂಬೇಡ್ಕರ್ ಅವರು ದಲಿತರಿಗೆ ಶೈಕ್ಷಣಿಕ, ಔದ್ಯೋಗಿಕ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಮೀಸಲಾತಿ ಒದಗಿಸಿಕೊಟ್ಟಿದ್ದಾರೆ. ಈ ಸಮುದಾಯದಿಂದ 54 ಮಂದಿ ಶಾಸಕರಾಗಿದ್ದಾರೆ. 7 ಮಂದಿ ಸಂಸತ್ ಪ್ರವೇಶಿಸಿದ್ದಾರೆ. ಐಎಎಸ್, ಐಪಿಎಸ್ ಹಾಗೂ ಮುಖ್ಯ ಎಂಜಿನಿಯರ್ಗಳೂ ಸಾಕಷ್ಟು ಮಂದಿ ಇದ್ದಾರೆ. ನಮ್ಮಲ್ಲೇ ಹಲವು ಸಂಘಟನೆಗಳು ಹುಟ್ಟಿಕೊಂಡಿವೆ. ಹೀಗಿದ್ದರೂ ನಮ್ಮವರನ್ನು ಮುಖ್ಯಮಂತ್ರಿ ಗಾದಿಯಲ್ಲಿ ನೋಡಲು ಆಗಿಲ್ಲ. ಇನ್ನಾದರೂ ಈ ವಿಚಾರದಲ್ಲಿ ನಾವೆಲ್ಲಾ ಒಗ್ಗಟ್ಟಾಗಿ ಹೋರಾಡಬೇಕು’ ಎಂದು ಹೇಳಿದರು.</p>.<p>‘ಮುಂದಿನ ಚುನಾವಣೆಯಲ್ಲಿ ದಲಿತರನ್ನು ಮುಖ್ಯಮಂತ್ರಿಯನ್ನಾಗಿ ಮಾಡುವ ಪಕ್ಷಕ್ಕೆ ಬೆಂಬಲ ನೀಡುವುದಾಗಿ ಸಮುದಾಯದ ಎಲ್ಲರೂ ಪಣ ತೊಡಬೇಕು’ ಎಂದು ಮನವಿ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ರಾಜ್ಯ ರಾಜಕಾರಣದಲ್ಲಿ ಈವರೆಗೂ ದಲಿತರು ಮುಖ್ಯಮಂತ್ರಿ ಗಾದಿಗೆ ಏರಿಲ್ಲ. ಹೀಗಾಗಿ ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ದಲಿತರನ್ನೇ ಮುಖ್ಯಮಂತ್ರಿ ಅಭ್ಯರ್ಥಿಗಳನ್ನಾಗಿ ಘೋಷಿಸಬೇಕು’ ಎಂದು ದಲಿತ ಸಂಘರ್ಷ ಸಮಿತಿ ಒತ್ತಾಯಿಸಿದೆ.</p>.<p>‘ಇದುವರೆಗೆ ಲಿಂಗಾಯತರು, ಒಕ್ಕಲಿಗರು, ಬ್ರಾಹ್ಮಣರು, ಅರಸು, ರಜಪೂತ ಹಾಗೂ ಹಿಂದುಳಿದ ವರ್ಗಗಳ ನಾಯಕರೇ ಈ ರಾಜ್ಯದ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದ್ದಾರೆ. ಶೇ 23.5 ರಷ್ಟು ಜನಸಂಖ್ಯೆ ಹೊಂದಿರುವ ದಲಿತರಿಗೆ ಈ ವಿಚಾರದಲ್ಲಿ ಅನ್ಯಾಯವಾಗಿದೆ. ಶೇ 12ರಷ್ಟು ಜನಸಂಖ್ಯೆ ಇರುವ ಮುಸ್ಲಿಂ ಸಮುದಾಯವೂ ಅವಕಾಶ ವಂಚಿತವಾಗಿದೆ’ ಎಂದು ಸಮಿತಿಯ ರಾಜ್ಯ ಸಂಚಾಲಕ ಹೆಣ್ಣೂರು ಶ್ರೀನಿವಾಸ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>‘ಬಾಬಾ ಸಾಹೇಬ್ ಅಂಬೇಡ್ಕರ್ ಅವರು ದಲಿತರಿಗೆ ಶೈಕ್ಷಣಿಕ, ಔದ್ಯೋಗಿಕ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಮೀಸಲಾತಿ ಒದಗಿಸಿಕೊಟ್ಟಿದ್ದಾರೆ. ಈ ಸಮುದಾಯದಿಂದ 54 ಮಂದಿ ಶಾಸಕರಾಗಿದ್ದಾರೆ. 7 ಮಂದಿ ಸಂಸತ್ ಪ್ರವೇಶಿಸಿದ್ದಾರೆ. ಐಎಎಸ್, ಐಪಿಎಸ್ ಹಾಗೂ ಮುಖ್ಯ ಎಂಜಿನಿಯರ್ಗಳೂ ಸಾಕಷ್ಟು ಮಂದಿ ಇದ್ದಾರೆ. ನಮ್ಮಲ್ಲೇ ಹಲವು ಸಂಘಟನೆಗಳು ಹುಟ್ಟಿಕೊಂಡಿವೆ. ಹೀಗಿದ್ದರೂ ನಮ್ಮವರನ್ನು ಮುಖ್ಯಮಂತ್ರಿ ಗಾದಿಯಲ್ಲಿ ನೋಡಲು ಆಗಿಲ್ಲ. ಇನ್ನಾದರೂ ಈ ವಿಚಾರದಲ್ಲಿ ನಾವೆಲ್ಲಾ ಒಗ್ಗಟ್ಟಾಗಿ ಹೋರಾಡಬೇಕು’ ಎಂದು ಹೇಳಿದರು.</p>.<p>‘ಮುಂದಿನ ಚುನಾವಣೆಯಲ್ಲಿ ದಲಿತರನ್ನು ಮುಖ್ಯಮಂತ್ರಿಯನ್ನಾಗಿ ಮಾಡುವ ಪಕ್ಷಕ್ಕೆ ಬೆಂಬಲ ನೀಡುವುದಾಗಿ ಸಮುದಾಯದ ಎಲ್ಲರೂ ಪಣ ತೊಡಬೇಕು’ ಎಂದು ಮನವಿ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>