‘ಇದುವರೆಗೆ ಲಿಂಗಾಯತರು, ಒಕ್ಕಲಿಗರು, ಬ್ರಾಹ್ಮಣರು, ಅರಸು, ರಜಪೂತ ಹಾಗೂ ಹಿಂದುಳಿದ ವರ್ಗಗಳ ನಾಯಕರೇ ಈ ರಾಜ್ಯದ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದ್ದಾರೆ. ಶೇ 23.5 ರಷ್ಟು ಜನಸಂಖ್ಯೆ ಹೊಂದಿರುವ ದಲಿತರಿಗೆ ಈ ವಿಚಾರದಲ್ಲಿ ಅನ್ಯಾಯವಾಗಿದೆ. ಶೇ 12ರಷ್ಟು ಜನಸಂಖ್ಯೆ ಇರುವ ಮುಸ್ಲಿಂ ಸಮುದಾಯವೂ ಅವಕಾಶ ವಂಚಿತವಾಗಿದೆ’ ಎಂದು ಸಮಿತಿಯ ರಾಜ್ಯ ಸಂಚಾಲಕ ಹೆಣ್ಣೂರು ಶ್ರೀನಿವಾಸ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.