‘ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂದರ್ಭದಲ್ಲಿ ಸಂವಿಧಾನದ ಆಶಯಗಳು ಮತ್ತು ಪ್ರಜಾಸತ್ತಾತ್ಮಕ ಮೌಲ್ಯಗಳು ಕುಸಿಯುತ್ತಿವೆ. ಸಾಮಾಜಿಕ ನ್ಯಾಯವೆಂಬುದು ಕನಸಿನ ಮಾತಾಗಿದೆ. ನಿರುದ್ಯೋಗ ಯುವ ಜನಾಂಗವನ್ನು ಹತಾಶೆಗೆ ದೂಡಿದೆ. ದೇಶದಲ್ಲಿ ಕೋಮು ರಾಜಕೀಯ ವಿಜೃಂಭಿಸುತ್ತಿದೆ. ಸಮ ಸಮಾಜದ ಕನಸು ಬಿತ್ತಿದ್ದ ಬುದ್ಧ, ಬಸವ, ಅಂಬೇಡ್ಕರ್ ಮರೆಯಾಗಿ ಕೋಮ ವಿಷದ ಗೋಡ್ಸೆ, ಸಾವರ್ಕರ್ ಮುನ್ನೆಲೆಗೆ ಬರುತ್ತಿದ್ದಾರೆ’ ಎಂದರು.