<p><strong>ಬೆಂಗಳೂರು:</strong> ‘ಕವಿ ಡಾ.ಸಿದ್ದಲಿಂಗಯ್ಯ ಹೆಸರಿನಲ್ಲಿ ಸ್ಮಾರಕ ನಿರ್ಮಿಸಬೇಕು’ ಎಂದು ದಲಿತ ಸಂಘಟನೆಗಳ ಒಕ್ಕೂಟವು ಸರ್ಕಾರಕ್ಕೆ ಆಗ್ರಹಿಸಿದೆ.</p>.<p>‘ಸಿದ್ದಲಿಂಗಯ್ಯ ಅವರ ಹುಟ್ಟೂರುಮಂಚನಬೆಲೆಯಲ್ಲಿ ಕನಿಷ್ಠ ಎರಡು ಎಕರೆ ಪ್ರದೇಶದಲ್ಲಿ ಅವರ ಬೃಹತ್ ಸ್ಮಾರಕ ನಿರ್ಮಾಣ ಮಾಡಬೇಕು. ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಆವರಣದಲ್ಲಿ ‘ಸಿದ್ದಲಿಂಗಯ್ಯ ಅಧ್ಯಯನ ಪೀಠ’ ಸ್ಥಾಪಿಸಬೇಕು’ ಎಂದು ಒಕ್ಕೂಟದ ಅಧ್ಯಕ್ಷ ಎಂ.ವೆಂಕಟಸ್ವಾಮಿ ಒತ್ತಾಯಿಸಿದ್ದಾರೆ.</p>.<p>‘ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದಸಿದ್ದಲಿಂಗಯ್ಯ ಅವರ ಬರಹ ಹಾಗೂ ಭಾಷಣಗಳನ್ನು ಒಳಗೊಂಡ ಸಮಗ್ರ ಸಂಪುಟದ ಪುಸ್ತಕ ಪ್ರಕಟಿಸಬೇಕು. ಬೆಂಗಳೂರಿನ ಪ್ರಮುಖ ರಸ್ತೆಯೊಂದಕ್ಕೆ ಹಾಗೂ ಶ್ರೀರಾಮಪುರದ ಆರ್.ಜಿ.ಕಾಲೊನಿ ವೃತ್ತಕ್ಕೆಸಿದ್ದಲಿಂಗಯ್ಯ ಹೆಸರಿಡುವಂತೆ ಪಾಲಿಕೆಗೆ ಸೂಚಿಸಬೇಕು’.</p>.<p>‘ಅವರಿಗೆ ಮರಣೋತ್ತರವಾಗಿ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡಿ ಗೌರವಿಸಬೇಕು ಹಾಗೂ ‘ಪದ್ಮಶ್ರೀ’ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕು’ ಎಂದೂ ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಕವಿ ಡಾ.ಸಿದ್ದಲಿಂಗಯ್ಯ ಹೆಸರಿನಲ್ಲಿ ಸ್ಮಾರಕ ನಿರ್ಮಿಸಬೇಕು’ ಎಂದು ದಲಿತ ಸಂಘಟನೆಗಳ ಒಕ್ಕೂಟವು ಸರ್ಕಾರಕ್ಕೆ ಆಗ್ರಹಿಸಿದೆ.</p>.<p>‘ಸಿದ್ದಲಿಂಗಯ್ಯ ಅವರ ಹುಟ್ಟೂರುಮಂಚನಬೆಲೆಯಲ್ಲಿ ಕನಿಷ್ಠ ಎರಡು ಎಕರೆ ಪ್ರದೇಶದಲ್ಲಿ ಅವರ ಬೃಹತ್ ಸ್ಮಾರಕ ನಿರ್ಮಾಣ ಮಾಡಬೇಕು. ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಆವರಣದಲ್ಲಿ ‘ಸಿದ್ದಲಿಂಗಯ್ಯ ಅಧ್ಯಯನ ಪೀಠ’ ಸ್ಥಾಪಿಸಬೇಕು’ ಎಂದು ಒಕ್ಕೂಟದ ಅಧ್ಯಕ್ಷ ಎಂ.ವೆಂಕಟಸ್ವಾಮಿ ಒತ್ತಾಯಿಸಿದ್ದಾರೆ.</p>.<p>‘ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದಸಿದ್ದಲಿಂಗಯ್ಯ ಅವರ ಬರಹ ಹಾಗೂ ಭಾಷಣಗಳನ್ನು ಒಳಗೊಂಡ ಸಮಗ್ರ ಸಂಪುಟದ ಪುಸ್ತಕ ಪ್ರಕಟಿಸಬೇಕು. ಬೆಂಗಳೂರಿನ ಪ್ರಮುಖ ರಸ್ತೆಯೊಂದಕ್ಕೆ ಹಾಗೂ ಶ್ರೀರಾಮಪುರದ ಆರ್.ಜಿ.ಕಾಲೊನಿ ವೃತ್ತಕ್ಕೆಸಿದ್ದಲಿಂಗಯ್ಯ ಹೆಸರಿಡುವಂತೆ ಪಾಲಿಕೆಗೆ ಸೂಚಿಸಬೇಕು’.</p>.<p>‘ಅವರಿಗೆ ಮರಣೋತ್ತರವಾಗಿ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡಿ ಗೌರವಿಸಬೇಕು ಹಾಗೂ ‘ಪದ್ಮಶ್ರೀ’ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕು’ ಎಂದೂ ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>