<p><strong>ಬೆಂಗಳೂರು: </strong>ವೈದ್ಯಕೀಯ, ಎಂಜಿನಿಯರಿಂಗ್ ಕೋರ್ಸ್ಗಳು ಮಾತ್ರವಲ್ಲದೆ, ಬಿ.ಇಡಿ, ಕಾನೂನು ಸೇರಿದಂತೆ ವಿವಿಧ ಕೋರ್ಸ್ಗಳಲ್ಲಿ ಓದುತ್ತಿರುವ ಬಡ ವಿದ್ಯಾರ್ಥಿಗಳಿಗೆ ಡ್ಯಾನಿಷ್ ಎಜುಕೇಷನಲ್ ಟ್ರಸ್ಟ್ ₹50.25 ಲಕ್ಷ ವಿದ್ಯಾರ್ಥಿ ವೇತನ ವಿತರಿಸಿತು.</p>.<p>ಪ್ರಸ್ತುತ ಶೈಕ್ಷಣಿಕ ಸಾಲಿನಲ್ಲಿ ವಿವಿಧ ಕೋರ್ಸ್ಗಳಲ್ಲಿ ಓದುತ್ತಿರುವ 195 ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಟ್ರಸ್ಟ್ ಸಂಸ್ಥಾಪಕಿ ಹುಸ್ನಾ ಝೀಯಾವುಲ್ಲಾ ಶರೀಫ್ ಭಾನುವಾರ ವಿತರಿಸಿದರು.</p>.<p>‘ಪ್ರಸ್ತುತ ಸಾಲಿನಲ್ಲಿ ಎಂಬಿಬಿಎಸ್ ಓದುತ್ತಿರುವ 45 ವಿದ್ಯಾರ್ಥಿಗಳಿಗೆ ತಲಾ ₹31 ಸಾವಿರ, ಎಂಜಿನಿಯರಿಂಗ್ನ 62 ವಿದ್ಯಾರ್ಥಿಗಳಿಗೆ ತಲಾ ₹ 25 ಸಾವಿರ, ಪದವಿ ವ್ಯಾಸಂಗದ 11 ವಿದ್ಯಾರ್ಥಿಗಳಿಗೆ ತಲಾ ₹30 ಸಾವಿರ, ಬಿ.ಇಡಿ ಓದುತ್ತಿರುವ 43 ವಿದ್ಯಾರ್ಥಿಗಳಿಗೆ ₹15 ಸಾವಿರ, ವಿದೇಶದಲ್ಲಿ ಕಾನೂನು ವ್ಯಾಸಂಗ ಮಾಡುತ್ತಿರುವ ಒಬ್ಬ ವಿದ್ಯಾರ್ಥಿಗೆ ₹1 ಲಕ್ಷ ನೀಡಲಾಯಿತು’ ಎಂದು ಹುಸ್ನಾ ಹೇಳಿದರು.</p>.<p>‘ಮುಂದಿನ ಶೈಕ್ಷಣಿಕ ಸಾಲಿನಲ್ಲಿ ಮತ್ತಷ್ಟು ಅರ್ಹ ವಿದ್ಯಾರ್ಥಿಗಳಿಗೆ ಹಣಕಾಸು ನೆರವು ನೀಡಲು ಉದ್ದೇಶಿಸಲಾಗಿದೆ. ಜತೆಗೆ ಈ ಬಾರಿ ಕೋವಿಡ್ ಕಾರಣದಿಂದಾಗಿ ಚೆಕ್ಗಳನ್ನು ವಿತರಣೆ ಮಾಡದೆ, ಎಲ್ಲ ವಿದ್ಯಾರ್ಥಿಗಳ ಬ್ಯಾಂಕಿನ ಖಾತೆಗೆ ಹಣ ಜಮೆ ಮಾಡಲಾಗಿದೆ’ ಎಂದರು.</p>.<p>ಉರ್ದು ಕವಿ ಝೀಯಾವುಲ್ಲಾ ಶರೀಫ್, ‘ದೇಶದ ಭವಿಷ್ಯ ಶಿಕ್ಷಣದ ಮೇಲೆ ನಿಂತಿದೆ. ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುವುದು ಪಾಲಕರ ಆದ್ಯ ಕರ್ತವ್ಯ. ಸರ್ಕಾರದ ಎಲ್ಲ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಂಡು ತಮ್ಮ ಮಕ್ಕಳನ್ನು ವಿದ್ಯಾವಂತರನ್ನಾಗಿ ರೂಪಿಸಬೇಕು’ ಎಂದು ಸಲಹೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ವೈದ್ಯಕೀಯ, ಎಂಜಿನಿಯರಿಂಗ್ ಕೋರ್ಸ್ಗಳು ಮಾತ್ರವಲ್ಲದೆ, ಬಿ.ಇಡಿ, ಕಾನೂನು ಸೇರಿದಂತೆ ವಿವಿಧ ಕೋರ್ಸ್ಗಳಲ್ಲಿ ಓದುತ್ತಿರುವ ಬಡ ವಿದ್ಯಾರ್ಥಿಗಳಿಗೆ ಡ್ಯಾನಿಷ್ ಎಜುಕೇಷನಲ್ ಟ್ರಸ್ಟ್ ₹50.25 ಲಕ್ಷ ವಿದ್ಯಾರ್ಥಿ ವೇತನ ವಿತರಿಸಿತು.</p>.<p>ಪ್ರಸ್ತುತ ಶೈಕ್ಷಣಿಕ ಸಾಲಿನಲ್ಲಿ ವಿವಿಧ ಕೋರ್ಸ್ಗಳಲ್ಲಿ ಓದುತ್ತಿರುವ 195 ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಟ್ರಸ್ಟ್ ಸಂಸ್ಥಾಪಕಿ ಹುಸ್ನಾ ಝೀಯಾವುಲ್ಲಾ ಶರೀಫ್ ಭಾನುವಾರ ವಿತರಿಸಿದರು.</p>.<p>‘ಪ್ರಸ್ತುತ ಸಾಲಿನಲ್ಲಿ ಎಂಬಿಬಿಎಸ್ ಓದುತ್ತಿರುವ 45 ವಿದ್ಯಾರ್ಥಿಗಳಿಗೆ ತಲಾ ₹31 ಸಾವಿರ, ಎಂಜಿನಿಯರಿಂಗ್ನ 62 ವಿದ್ಯಾರ್ಥಿಗಳಿಗೆ ತಲಾ ₹ 25 ಸಾವಿರ, ಪದವಿ ವ್ಯಾಸಂಗದ 11 ವಿದ್ಯಾರ್ಥಿಗಳಿಗೆ ತಲಾ ₹30 ಸಾವಿರ, ಬಿ.ಇಡಿ ಓದುತ್ತಿರುವ 43 ವಿದ್ಯಾರ್ಥಿಗಳಿಗೆ ₹15 ಸಾವಿರ, ವಿದೇಶದಲ್ಲಿ ಕಾನೂನು ವ್ಯಾಸಂಗ ಮಾಡುತ್ತಿರುವ ಒಬ್ಬ ವಿದ್ಯಾರ್ಥಿಗೆ ₹1 ಲಕ್ಷ ನೀಡಲಾಯಿತು’ ಎಂದು ಹುಸ್ನಾ ಹೇಳಿದರು.</p>.<p>‘ಮುಂದಿನ ಶೈಕ್ಷಣಿಕ ಸಾಲಿನಲ್ಲಿ ಮತ್ತಷ್ಟು ಅರ್ಹ ವಿದ್ಯಾರ್ಥಿಗಳಿಗೆ ಹಣಕಾಸು ನೆರವು ನೀಡಲು ಉದ್ದೇಶಿಸಲಾಗಿದೆ. ಜತೆಗೆ ಈ ಬಾರಿ ಕೋವಿಡ್ ಕಾರಣದಿಂದಾಗಿ ಚೆಕ್ಗಳನ್ನು ವಿತರಣೆ ಮಾಡದೆ, ಎಲ್ಲ ವಿದ್ಯಾರ್ಥಿಗಳ ಬ್ಯಾಂಕಿನ ಖಾತೆಗೆ ಹಣ ಜಮೆ ಮಾಡಲಾಗಿದೆ’ ಎಂದರು.</p>.<p>ಉರ್ದು ಕವಿ ಝೀಯಾವುಲ್ಲಾ ಶರೀಫ್, ‘ದೇಶದ ಭವಿಷ್ಯ ಶಿಕ್ಷಣದ ಮೇಲೆ ನಿಂತಿದೆ. ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುವುದು ಪಾಲಕರ ಆದ್ಯ ಕರ್ತವ್ಯ. ಸರ್ಕಾರದ ಎಲ್ಲ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಂಡು ತಮ್ಮ ಮಕ್ಕಳನ್ನು ವಿದ್ಯಾವಂತರನ್ನಾಗಿ ರೂಪಿಸಬೇಕು’ ಎಂದು ಸಲಹೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>