<p><strong>ಬೆಂಗಳೂರು:</strong> ರಾಜರಾಜೇಶ್ವರಿನಗರದ ಐಡಿಯಲ್ ಹೋಮ್ ಲೇಔಟ್ನಲ್ಲಿ ಶನಿವಾರ ತಡರಾತ್ರಿ ಆಯೋಜಿಸಿದ್ದ ನಟ ದರ್ಶನ್ ಹುಟ್ಟುಹಬ್ಬ ಕಾರ್ಯಕ್ರಮದ ವೇಳೆ ಕಾನ್ಸ್ಟೆಬಲ್ ಡಿ.ಆರ್.ದೇವರಾಜ್ ಎಂಬುವವರ ಮೇಲೆ ಹಲ್ಲೆ ಮಾಡಲಾಗಿದ್ದು, ತೀವ್ರವಾಗಿ ಗಾಯಗೊಂಡಿರುವ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.</p>.<p>‘ತಮ್ಮ ಮೇಲೆ ನಡೆದಿರುವ ಹಲ್ಲೆ ಸಂಬಂಧ ಜ್ಞಾನಭಾರತಿ ಠಾಣೆಯ ಕಾನ್ಸ್ಟೆಬಲ್ ದೇವರಾಜ್ ದೂರು ನೀಡಿದ್ದಾರೆ. ದರ್ಶನ್ ಹುಟ್ಟುಹಬ್ಬ ಕಾರ್ಯಕ್ರಮ ಆಯೋಜಿಸಿದ್ದ ವ್ಯವಸ್ಥಾಪಕರು ಹಾಗೂ ಅಪರಿಚಿತ ಅಭಿಮಾನಿಗಳ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸರು ಹೇಳಿದರು.</p>.<p>‘ಐಡಿಯಲ್ ಹೋಮ್ ಲೇಔಟ್ನಲ್ಲಿರುವ ದರ್ಶನ್ ಮನೆ ಎದುರು ಕಾರ್ಯಕ್ರಮ ಆಯೋಜಿಸಲಾಗಿತ್ತು. ಅಲ್ಲಿಯ ಭದ್ರತೆಗಾಗಿ ದೇವರಾಜ್ ಅವರನ್ನು ನಿಯೋಜಿಸಲಾಗಿತ್ತು. ಕಾರ್ಯಕ್ರಮ ಸ್ಥಳದಲ್ಲಿ ಅಭಿಮಾನಿಗಳು ಸರದಿಯಲ್ಲಿ ಹೋಗಲು ಆಯೋಜಕರು ಸೂಕ್ತ ವ್ಯವಸ್ಥೆ ಮಾಡಿರಲಿಲ್ಲ. ಹೀಗಾಗಿ, ನೂಕುನುಗ್ಗಲು ಉಂಟಾಗಿತ್ತು’</p>.<p>‘ನೂಕುನುಗ್ಗಲು ನಿಯಂತ್ರಿಸುವ ಕೆಲಸದಲ್ಲಿ ದೇವರಾಜ್ ನಿರತರಾಗಿದ್ದರು. ಅದೇ ಸಂದರ್ಭದಲ್ಲಿ ಅವರ ಮೂಗಿಗೆ ಯಾರೋ ಪಂಚ್ ಮಾಡಿದ್ದರು. ಕಣ್ಣಿಗೂ ತೀವ್ರ ಹಾನಿ ಆಗಿ ರಕ್ತ ಸೋರುತ್ತಿತ್ತು. ಸಹೋದ್ಯೋಗಿಗಳೇ ಅವರನ್ನು ಆಸ್ಪತ್ರೆಗೆ ಕರೆದೊಯ್ದರು’ ಎಂದು ಪೊಲೀಸರು ಹೇಳಿದರು.</p>.<p>‘ಹುಟ್ಟುಹಬ್ಬ ಆಯೋಜಿಸಿದ್ದ ವ್ಯವಸ್ಥಾಪಕರು ಹಾಗೂ ಕೆಲ ಅಭಿಮಾನಿಗಳೇ ಈ ಹಲ್ಲೆಗೆ ಕಾರಣ. ಅವರೆಲ್ಲರ ವಿರುದ್ಧ, ಅಪರಾಧ ಸಂಚು (ಐಪಿಸಿ 34) ಹಾಗೂಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ (ಐಪಿಸಿ 353) ಆರೋಪದಡಿ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸರು ಮಾಹಿತಿ ನೀಡಿದರು.</p>.<p>ಹುಟ್ಟುಹಬ್ಬ ಆಚರಣೆಯಿಂದ ಸ್ಥಳೀಯ ನಿವಾಸಿಗಳಿಗೂ ಕಿರಿಕಿರಿ ಆಗಿದೆ. ಈ ಸಂಬಂಧವೂ ಠಾಣೆಯಲ್ಲಿ ಎನ್ಸಿಆರ್ (ಗಂಭೀರವಲ್ಲದ ಪ್ರಕರಣ) ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ರಾಜರಾಜೇಶ್ವರಿನಗರದ ಐಡಿಯಲ್ ಹೋಮ್ ಲೇಔಟ್ನಲ್ಲಿ ಶನಿವಾರ ತಡರಾತ್ರಿ ಆಯೋಜಿಸಿದ್ದ ನಟ ದರ್ಶನ್ ಹುಟ್ಟುಹಬ್ಬ ಕಾರ್ಯಕ್ರಮದ ವೇಳೆ ಕಾನ್ಸ್ಟೆಬಲ್ ಡಿ.ಆರ್.ದೇವರಾಜ್ ಎಂಬುವವರ ಮೇಲೆ ಹಲ್ಲೆ ಮಾಡಲಾಗಿದ್ದು, ತೀವ್ರವಾಗಿ ಗಾಯಗೊಂಡಿರುವ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.</p>.<p>‘ತಮ್ಮ ಮೇಲೆ ನಡೆದಿರುವ ಹಲ್ಲೆ ಸಂಬಂಧ ಜ್ಞಾನಭಾರತಿ ಠಾಣೆಯ ಕಾನ್ಸ್ಟೆಬಲ್ ದೇವರಾಜ್ ದೂರು ನೀಡಿದ್ದಾರೆ. ದರ್ಶನ್ ಹುಟ್ಟುಹಬ್ಬ ಕಾರ್ಯಕ್ರಮ ಆಯೋಜಿಸಿದ್ದ ವ್ಯವಸ್ಥಾಪಕರು ಹಾಗೂ ಅಪರಿಚಿತ ಅಭಿಮಾನಿಗಳ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸರು ಹೇಳಿದರು.</p>.<p>‘ಐಡಿಯಲ್ ಹೋಮ್ ಲೇಔಟ್ನಲ್ಲಿರುವ ದರ್ಶನ್ ಮನೆ ಎದುರು ಕಾರ್ಯಕ್ರಮ ಆಯೋಜಿಸಲಾಗಿತ್ತು. ಅಲ್ಲಿಯ ಭದ್ರತೆಗಾಗಿ ದೇವರಾಜ್ ಅವರನ್ನು ನಿಯೋಜಿಸಲಾಗಿತ್ತು. ಕಾರ್ಯಕ್ರಮ ಸ್ಥಳದಲ್ಲಿ ಅಭಿಮಾನಿಗಳು ಸರದಿಯಲ್ಲಿ ಹೋಗಲು ಆಯೋಜಕರು ಸೂಕ್ತ ವ್ಯವಸ್ಥೆ ಮಾಡಿರಲಿಲ್ಲ. ಹೀಗಾಗಿ, ನೂಕುನುಗ್ಗಲು ಉಂಟಾಗಿತ್ತು’</p>.<p>‘ನೂಕುನುಗ್ಗಲು ನಿಯಂತ್ರಿಸುವ ಕೆಲಸದಲ್ಲಿ ದೇವರಾಜ್ ನಿರತರಾಗಿದ್ದರು. ಅದೇ ಸಂದರ್ಭದಲ್ಲಿ ಅವರ ಮೂಗಿಗೆ ಯಾರೋ ಪಂಚ್ ಮಾಡಿದ್ದರು. ಕಣ್ಣಿಗೂ ತೀವ್ರ ಹಾನಿ ಆಗಿ ರಕ್ತ ಸೋರುತ್ತಿತ್ತು. ಸಹೋದ್ಯೋಗಿಗಳೇ ಅವರನ್ನು ಆಸ್ಪತ್ರೆಗೆ ಕರೆದೊಯ್ದರು’ ಎಂದು ಪೊಲೀಸರು ಹೇಳಿದರು.</p>.<p>‘ಹುಟ್ಟುಹಬ್ಬ ಆಯೋಜಿಸಿದ್ದ ವ್ಯವಸ್ಥಾಪಕರು ಹಾಗೂ ಕೆಲ ಅಭಿಮಾನಿಗಳೇ ಈ ಹಲ್ಲೆಗೆ ಕಾರಣ. ಅವರೆಲ್ಲರ ವಿರುದ್ಧ, ಅಪರಾಧ ಸಂಚು (ಐಪಿಸಿ 34) ಹಾಗೂಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ (ಐಪಿಸಿ 353) ಆರೋಪದಡಿ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸರು ಮಾಹಿತಿ ನೀಡಿದರು.</p>.<p>ಹುಟ್ಟುಹಬ್ಬ ಆಚರಣೆಯಿಂದ ಸ್ಥಳೀಯ ನಿವಾಸಿಗಳಿಗೂ ಕಿರಿಕಿರಿ ಆಗಿದೆ. ಈ ಸಂಬಂಧವೂ ಠಾಣೆಯಲ್ಲಿ ಎನ್ಸಿಆರ್ (ಗಂಭೀರವಲ್ಲದ ಪ್ರಕರಣ) ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>