<p><strong>ಬೆಂಗಳೂರು:</strong> ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ನಗರ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಖುದ್ದು ಭೇಟಿ ನೀಡಿ ರೇಣುಕಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್ ಅವರಿಗೆ ನೀಡಿರುವ ಸೌಲಭ್ಯಗಳನ್ನು ಪರಿಶೀಲಿಸಿ ವರದಿ ಸಲ್ಲಿಸಬೇಕು ಎಂದು 57ನೇ ಸಿಸಿಎಚ್ ನ್ಯಾಯಾಲಯವು ಆದೇಶಿಸಿದೆ.</p>.<p>ದರ್ಶನ್ಗೆ ಜೈಲು ಅಧಿಕಾರಿಗಳು ಕನಿಷ್ಠ ಮೂಲಸೌಲಭ್ಯ ಸಹ ಕಲ್ಪಿಸಿಲ್ಲ ಎಂಬ ಆರೋಪಕ್ಕೆ ಸಂಬಂಧಪಟ್ಟ ಅರ್ಜಿಯನ್ನು ನ್ಯಾಯಾಲಯವು ಅಂಗೀಕರಿಸಿದ್ದು, ಈ ಬಗ್ಗೆ ಖುದ್ದು ಪರಿಶೀಲನೆ ನಡೆಸಿ ಅಕ್ಟೋಬರ್ 18ರ ಒಳಗೆ ವರದಿ ನೀಡುವಂತೆ ಆದೇಶಿಸಿದೆ.</p>.<p>ಕಾರಾಗೃಹದಲ್ಲಿರುವ ದರ್ಶನ್ಗೆ ಮೂಲಸೌಲಭ್ಯ ಕಲ್ಪಿಸುವಂತೆ ಜೈಲು ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ವಕೀಲರು ನ್ಯಾಯಾಲಯಕ್ಕೆ ಮೂರನೇ ಬಾರಿ ಅರ್ಜಿ ಸಲ್ಲಿಸಿದ್ದರು. ನ್ಯಾಯಾಲಯದ ಆದೇಶವಿದ್ದರೂ ಜೈಲು ಅಧಿಕಾರಿಗಳು ಕನಿಷ್ಠ ಸೌಕರ್ಯ ಕಲ್ಪಿಸಿಲ್ಲ ಎಂದು ದರ್ಶನ್ ಪರ ವಕೀಲರು ಅರ್ಜಿಯಲ್ಲಿ ಆರೋಪಿಸಿದ್ದಾರೆ.</p>.<p>ದರ್ಶನ್ ಅವರನ್ನು ಇನ್ನೂ ಕ್ವಾರಂಟೈನ್ ಸೆಲ್ನಲ್ಲೇ ಇರಿಸಲಾಗಿದೆ. ಅಧಿಕಾರಿಗಳು ಬಿಸಿಲು ಬೀಳದ ಜಾಗದಲ್ಲಿ ವಾಕಿಂಗ್ಗೆ ಅವಕಾಶ ಕಲ್ಪಿಸಿದ್ದಾರೆ. ಇದರಿಂದ ದರ್ಶನ್ ಅವರಿಗೆ ಆರೋಗ್ಯ ಸಮಸ್ಯೆಯಾಗಿದೆ. ಈ ಹಿಂದೆ ನ್ಯಾಯಾಲಯ ನೀಡಿದ್ದ ಆದೇಶವನ್ನೂ ಅಧಿಕಾರಿಗಳು ಪಾಲಿಸುತ್ತಿಲ್ಲ. ಹೀಗಾಗಿ, ನ್ಯಾಯಾಧೀಶರೇ ಖುದ್ದು ಜೈಲಿಗೆ ಭೇಟಿ ಕೊಟ್ಟು ಪರಿಶೀಲನೆ ಮಾಡಿ ಸತ್ಯಾಸತ್ಯತೆ ತಿಳಿಯಬೇಕು ಎಂದು ದರ್ಶನ್ ಪರ ವಕೀಲರು ಅರ್ಜಿಯಲ್ಲಿ ಕೋರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ನಗರ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಖುದ್ದು ಭೇಟಿ ನೀಡಿ ರೇಣುಕಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್ ಅವರಿಗೆ ನೀಡಿರುವ ಸೌಲಭ್ಯಗಳನ್ನು ಪರಿಶೀಲಿಸಿ ವರದಿ ಸಲ್ಲಿಸಬೇಕು ಎಂದು 57ನೇ ಸಿಸಿಎಚ್ ನ್ಯಾಯಾಲಯವು ಆದೇಶಿಸಿದೆ.</p>.<p>ದರ್ಶನ್ಗೆ ಜೈಲು ಅಧಿಕಾರಿಗಳು ಕನಿಷ್ಠ ಮೂಲಸೌಲಭ್ಯ ಸಹ ಕಲ್ಪಿಸಿಲ್ಲ ಎಂಬ ಆರೋಪಕ್ಕೆ ಸಂಬಂಧಪಟ್ಟ ಅರ್ಜಿಯನ್ನು ನ್ಯಾಯಾಲಯವು ಅಂಗೀಕರಿಸಿದ್ದು, ಈ ಬಗ್ಗೆ ಖುದ್ದು ಪರಿಶೀಲನೆ ನಡೆಸಿ ಅಕ್ಟೋಬರ್ 18ರ ಒಳಗೆ ವರದಿ ನೀಡುವಂತೆ ಆದೇಶಿಸಿದೆ.</p>.<p>ಕಾರಾಗೃಹದಲ್ಲಿರುವ ದರ್ಶನ್ಗೆ ಮೂಲಸೌಲಭ್ಯ ಕಲ್ಪಿಸುವಂತೆ ಜೈಲು ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ವಕೀಲರು ನ್ಯಾಯಾಲಯಕ್ಕೆ ಮೂರನೇ ಬಾರಿ ಅರ್ಜಿ ಸಲ್ಲಿಸಿದ್ದರು. ನ್ಯಾಯಾಲಯದ ಆದೇಶವಿದ್ದರೂ ಜೈಲು ಅಧಿಕಾರಿಗಳು ಕನಿಷ್ಠ ಸೌಕರ್ಯ ಕಲ್ಪಿಸಿಲ್ಲ ಎಂದು ದರ್ಶನ್ ಪರ ವಕೀಲರು ಅರ್ಜಿಯಲ್ಲಿ ಆರೋಪಿಸಿದ್ದಾರೆ.</p>.<p>ದರ್ಶನ್ ಅವರನ್ನು ಇನ್ನೂ ಕ್ವಾರಂಟೈನ್ ಸೆಲ್ನಲ್ಲೇ ಇರಿಸಲಾಗಿದೆ. ಅಧಿಕಾರಿಗಳು ಬಿಸಿಲು ಬೀಳದ ಜಾಗದಲ್ಲಿ ವಾಕಿಂಗ್ಗೆ ಅವಕಾಶ ಕಲ್ಪಿಸಿದ್ದಾರೆ. ಇದರಿಂದ ದರ್ಶನ್ ಅವರಿಗೆ ಆರೋಗ್ಯ ಸಮಸ್ಯೆಯಾಗಿದೆ. ಈ ಹಿಂದೆ ನ್ಯಾಯಾಲಯ ನೀಡಿದ್ದ ಆದೇಶವನ್ನೂ ಅಧಿಕಾರಿಗಳು ಪಾಲಿಸುತ್ತಿಲ್ಲ. ಹೀಗಾಗಿ, ನ್ಯಾಯಾಧೀಶರೇ ಖುದ್ದು ಜೈಲಿಗೆ ಭೇಟಿ ಕೊಟ್ಟು ಪರಿಶೀಲನೆ ಮಾಡಿ ಸತ್ಯಾಸತ್ಯತೆ ತಿಳಿಯಬೇಕು ಎಂದು ದರ್ಶನ್ ಪರ ವಕೀಲರು ಅರ್ಜಿಯಲ್ಲಿ ಕೋರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>