<p><strong>ಬೆಂಗಳೂರು:</strong> ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಎರಡನೇ ಆರೋಪಿ, ನಟ ದರ್ಶನ್ ಅವರಿಗೆ ಕಾರಾಗೃಹದ ಬ್ಯಾರಕ್ನ ಎದುರು ನಡೆದಾಡಲು ಜೈಲಧಿಕಾರಿಗಳು ಅವಕಾಶ ಕಲ್ಪಿಸಿದ್ದಾರೆ ಎಂದು ಗೊತ್ತಾಗಿದೆ.</p>.<p>ದರ್ಶನ್ ಅವರಿಗೆ ಬೆಳಿಗ್ಗೆ ಮತ್ತು ಸಂಜೆ 40 ನಿಮಿಷ ನಡೆದಾಡಲು ಅವಕಾಶ ಕಲ್ಪಿಸಲಾಗಿದೆ ಎಂದು ಮೂಲಗಳು ಹೇಳಿವೆ.</p>.<p>ನ್ಯಾಯಾಲಯದ ಸೂಚನೆಯಂತೆ ನಡೆದಾಡಲು ಅವಕಾಶ ಮಾಡಿಕೊಡಲಾಗಿದೆ. ದರ್ಶನ್ ನಡೆದಾಡುವಾಗ ಜೈಲಿನ ಇತರೆ ವಿಚಾರಣಾಧೀನ ಕೈದಿಗಳು ಆ ಸ್ಥಳಕ್ಕೆ ಬರುವಂತಿಲ್ಲ. ದರ್ಶನ್ ಅವರು ಬ್ಯಾರಕ್ ಒಳಗೆ ಹೋದ ಮೇಲಷ್ಟೇ ಇತರೆ ಕೈದಿಗಳು ಆ ಸ್ಥಳದಲ್ಲಿ ನಡೆದಾಡಬಹುದಾಗಿದೆ ಎಂದು ಅಧಿಕಾರಿಗಳು ಸೂಚಿಸಿದ್ದಾರೆ.</p>.<p>ದರ್ಶನ್ ಅವರನ್ನು ಜೈಲಿನಲ್ಲಿ ಇರಿಸಲಾಗಿರುವ ಬ್ಯಾರಕ್ ಎದುರು ನಡೆಯುವ ಚಟುವಟಿಕೆಗಳನ್ನು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗುವಂತೆ ವ್ಯವಸ್ಥೆ ಮಾಡಲಾಗಿದೆ. ಜತೆಗೆ, ಅವರ ಬ್ಯಾರಕ್ನ ಬಳಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿ ಕಡ್ಡಾಯವಾಗಿ ಬಾಡಿ ವೋರ್ನ್ ಕ್ಯಾಮೆರಾ ಧರಿಸುವಂತೆ ಸೂಚಿಸಲಾಗಿದೆ ಎಂದು ಮೂಲಗಳು ಹೇಳಿವೆ.</p>.<p>‘ಸೂರ್ಯನ ಬೆಳಕು ಮೈಮೇಲೆ ಬಿದ್ದು ತಿಂಗಳು ಕಳೆದಿದೆ. ಕೈಯಲ್ಲಿ ಫಂಗಸ್ (ಚರ್ಮ ರೋಗ) ಕಾಣಿಸಿಕೊಂಡಿದೆ ಎಂದು ವಿಚಾರಣೆ ವೇಳೆ ದರ್ಶನ್ ಅವರು ನ್ಯಾಯಾಧೀಶರ ಎದುರು ಅಳಲು ತೋಡಿಕೊಂಡಿದ್ದರು. ಕಾರಾಗೃಹದ ವೈದ್ಯರಿಂದ ದರ್ಶನ್ ಅವರಿಗೆ ಚಿಕಿತ್ಸೆ ಕೊಡಿಸಲಾಗಿದೆ’ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಎರಡನೇ ಆರೋಪಿ, ನಟ ದರ್ಶನ್ ಅವರಿಗೆ ಕಾರಾಗೃಹದ ಬ್ಯಾರಕ್ನ ಎದುರು ನಡೆದಾಡಲು ಜೈಲಧಿಕಾರಿಗಳು ಅವಕಾಶ ಕಲ್ಪಿಸಿದ್ದಾರೆ ಎಂದು ಗೊತ್ತಾಗಿದೆ.</p>.<p>ದರ್ಶನ್ ಅವರಿಗೆ ಬೆಳಿಗ್ಗೆ ಮತ್ತು ಸಂಜೆ 40 ನಿಮಿಷ ನಡೆದಾಡಲು ಅವಕಾಶ ಕಲ್ಪಿಸಲಾಗಿದೆ ಎಂದು ಮೂಲಗಳು ಹೇಳಿವೆ.</p>.<p>ನ್ಯಾಯಾಲಯದ ಸೂಚನೆಯಂತೆ ನಡೆದಾಡಲು ಅವಕಾಶ ಮಾಡಿಕೊಡಲಾಗಿದೆ. ದರ್ಶನ್ ನಡೆದಾಡುವಾಗ ಜೈಲಿನ ಇತರೆ ವಿಚಾರಣಾಧೀನ ಕೈದಿಗಳು ಆ ಸ್ಥಳಕ್ಕೆ ಬರುವಂತಿಲ್ಲ. ದರ್ಶನ್ ಅವರು ಬ್ಯಾರಕ್ ಒಳಗೆ ಹೋದ ಮೇಲಷ್ಟೇ ಇತರೆ ಕೈದಿಗಳು ಆ ಸ್ಥಳದಲ್ಲಿ ನಡೆದಾಡಬಹುದಾಗಿದೆ ಎಂದು ಅಧಿಕಾರಿಗಳು ಸೂಚಿಸಿದ್ದಾರೆ.</p>.<p>ದರ್ಶನ್ ಅವರನ್ನು ಜೈಲಿನಲ್ಲಿ ಇರಿಸಲಾಗಿರುವ ಬ್ಯಾರಕ್ ಎದುರು ನಡೆಯುವ ಚಟುವಟಿಕೆಗಳನ್ನು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗುವಂತೆ ವ್ಯವಸ್ಥೆ ಮಾಡಲಾಗಿದೆ. ಜತೆಗೆ, ಅವರ ಬ್ಯಾರಕ್ನ ಬಳಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿ ಕಡ್ಡಾಯವಾಗಿ ಬಾಡಿ ವೋರ್ನ್ ಕ್ಯಾಮೆರಾ ಧರಿಸುವಂತೆ ಸೂಚಿಸಲಾಗಿದೆ ಎಂದು ಮೂಲಗಳು ಹೇಳಿವೆ.</p>.<p>‘ಸೂರ್ಯನ ಬೆಳಕು ಮೈಮೇಲೆ ಬಿದ್ದು ತಿಂಗಳು ಕಳೆದಿದೆ. ಕೈಯಲ್ಲಿ ಫಂಗಸ್ (ಚರ್ಮ ರೋಗ) ಕಾಣಿಸಿಕೊಂಡಿದೆ ಎಂದು ವಿಚಾರಣೆ ವೇಳೆ ದರ್ಶನ್ ಅವರು ನ್ಯಾಯಾಧೀಶರ ಎದುರು ಅಳಲು ತೋಡಿಕೊಂಡಿದ್ದರು. ಕಾರಾಗೃಹದ ವೈದ್ಯರಿಂದ ದರ್ಶನ್ ಅವರಿಗೆ ಚಿಕಿತ್ಸೆ ಕೊಡಿಸಲಾಗಿದೆ’ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>