ರಾಮೋಹಳ್ಳಿ ರೈತ ಸೇವಾ ಸಹಕಾರ ಬ್ಯಾಂಕ್ ಅಧ್ಯಕ್ಷ ವಿ.ವೇಣುಗೋಪಾಲ್, ’ರಾಮೋಹಳ್ಳಿ, ಹಳೆ ಬೈರೋಹಳ್ಳಿ ಮುಖ್ಯರಸ್ತೆಯಲ್ಲಿ ಕೆರೆ ಇದ್ದು ಕೆಲವರು ದ್ವಿಚಕ್ರವಾಹನದಲ್ಲಿ ಪ್ಲಾಸ್ಟಿಕ್ ಚೀಲ, ಕವರ್ನಲ್ಲಿ ಕಸವನ್ನು ಕಟ್ಟಿ ಕೆರೆಗೆ ಎಸೆದು ಹೋಗುತ್ತಾರೆ. ಹಲವು ಬಾರಿ ಮನವಿ ಮಾಡಿದರೂ ಕಸ ಹಾಕುವುದನ್ನು ಮಾತ್ರ ಬಿಟ್ಟಿಲ್ಲ‘ ಎಂದರು.