<p><strong>ಕೆ.ಆರ್.ಪುರ:</strong> ವಿಜಯದಶಮಿ ಪ್ರಯುಕ್ತ ಕಾಡುಗೋಡಿ, ವೈಟ್ಫೀಲ್ಡ್ ಸುತ್ತಮುತ್ತಲಿನ ವಿವಿಧ ಗ್ರಾಮಗಳ 50ಕ್ಕೂ ಹೆಚ್ಚು ಗ್ರಾಮ ದೇವತೆಗಳ ಪಲ್ಲಕ್ಕಿಗಳೊಂದಿಗೆ ಅಂಬೇಡ್ಕರ್ ನಗರ ಗುಟ್ಟದ ದಸರಾ ಮೈದಾನದಲ್ಲಿ ನಾಡಹಬ್ಬ ಆಚರಿಸಲಾಯಿತು.</p>.<p>ನವರಾತ್ರಿ ಉತ್ಸವಕ್ಕಾಗಿ ಗ್ರಾಮಗಳ ದೇವಾಲಯಗಳಲ್ಲಿ ಒಂಬತ್ತು ದಿನಗಳು ವಿಶೇಷ ಪೂಜೆ ಸಲ್ಲಿಸಿ ನಂತರ ಕಾಡುಗೋಡಿ ಸುತ್ತಮುತ್ತಲಿನ ಚನ್ನಸಂದ್ರ, ಎಕೆಜಿ ಕಾಲೊನಿ, ನಾಗೊಂಡನಹಳ್ಳಿ, ಇಮ್ಮಡಿಹಳ್ಳಿ, ನಲ್ಲೂರಹಳ್ಳಿ, ರಾಮಗೊಂಡನಹಳ್ಳಿ, ಪಟ್ಟಂದೂರು ಅಗ್ರಹಾರ, ದಿನ್ನೂರು, ಬೆಳ್ಳತ್ತೂರು ಗ್ರಾಮದೇವತೆಗಳನ್ನು ಮೆರವಣಿಗೆ ಮಾಡಲಾಯಿತು.</p>.<p>ಆಂಜನೇಯ ಸ್ವಾಮಿ, ಬಸವೇಶ್ವರ ಸ್ವಾಮಿ, ಶನಿ ಮಹಾತ್ಮ, ಮುನೇಶ್ವರ, ಮಾರಮ್ಮ, ಸಪಲಮ್ಮ, ಯಲ್ಲಮ್ಮ ಗಂಗಮ್ಮ ದೊಡ್ಡಮ್ಮ ಸಹಿತ ವಿವಿಧ ಗ್ರಾಮದೇವತೆಗಳನ್ನು ಪಲ್ಲಕ್ಕಿಗಳಲ್ಲಿ ಕೂರಿಸಿ ಊರುಗಳಲ್ಲಿ ಮೆರವಣಿಗೆ ಮಾಡಲಾಯಿತು.</p>.<p>ಡೊಳ್ಳು ಕುಣಿತ, ಕಂಸಾಳೆ ನೃತ್ಯ ತಮಟೆ ವಾದ್ಯ ಮತ್ತು ವೀರಗಾಸೆ ಸೇರಿದಂತೆ ವಿವಿಧ ಕಲಾ ತಂಡಗಳು ಭಾಗವಹಿಸಿದ್ದರು. </p>.<p>ಶಾಸಕಿ ಮಂಜುಳಾ ಲಿಂಬಾವಳಿ, ಮಾಜಿ ಶಾಸಕ ಅರವಿಂದ ಲಿಂಬಾವಳಿ, ಮುಖಂಡರಾದ ಶ್ರೀಧರ್ ರೆಡ್ಡಿ, ಹೂಡಿ ಪಿಳ್ಳಪ್ಪ ಗುಟ್ಟ ಮಾರಪ್ಪ, ಮನೋಹರ ರೆಡ್ಡಿ, ಮಹೇಂದ್ರ ಮೋದಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆ.ಆರ್.ಪುರ:</strong> ವಿಜಯದಶಮಿ ಪ್ರಯುಕ್ತ ಕಾಡುಗೋಡಿ, ವೈಟ್ಫೀಲ್ಡ್ ಸುತ್ತಮುತ್ತಲಿನ ವಿವಿಧ ಗ್ರಾಮಗಳ 50ಕ್ಕೂ ಹೆಚ್ಚು ಗ್ರಾಮ ದೇವತೆಗಳ ಪಲ್ಲಕ್ಕಿಗಳೊಂದಿಗೆ ಅಂಬೇಡ್ಕರ್ ನಗರ ಗುಟ್ಟದ ದಸರಾ ಮೈದಾನದಲ್ಲಿ ನಾಡಹಬ್ಬ ಆಚರಿಸಲಾಯಿತು.</p>.<p>ನವರಾತ್ರಿ ಉತ್ಸವಕ್ಕಾಗಿ ಗ್ರಾಮಗಳ ದೇವಾಲಯಗಳಲ್ಲಿ ಒಂಬತ್ತು ದಿನಗಳು ವಿಶೇಷ ಪೂಜೆ ಸಲ್ಲಿಸಿ ನಂತರ ಕಾಡುಗೋಡಿ ಸುತ್ತಮುತ್ತಲಿನ ಚನ್ನಸಂದ್ರ, ಎಕೆಜಿ ಕಾಲೊನಿ, ನಾಗೊಂಡನಹಳ್ಳಿ, ಇಮ್ಮಡಿಹಳ್ಳಿ, ನಲ್ಲೂರಹಳ್ಳಿ, ರಾಮಗೊಂಡನಹಳ್ಳಿ, ಪಟ್ಟಂದೂರು ಅಗ್ರಹಾರ, ದಿನ್ನೂರು, ಬೆಳ್ಳತ್ತೂರು ಗ್ರಾಮದೇವತೆಗಳನ್ನು ಮೆರವಣಿಗೆ ಮಾಡಲಾಯಿತು.</p>.<p>ಆಂಜನೇಯ ಸ್ವಾಮಿ, ಬಸವೇಶ್ವರ ಸ್ವಾಮಿ, ಶನಿ ಮಹಾತ್ಮ, ಮುನೇಶ್ವರ, ಮಾರಮ್ಮ, ಸಪಲಮ್ಮ, ಯಲ್ಲಮ್ಮ ಗಂಗಮ್ಮ ದೊಡ್ಡಮ್ಮ ಸಹಿತ ವಿವಿಧ ಗ್ರಾಮದೇವತೆಗಳನ್ನು ಪಲ್ಲಕ್ಕಿಗಳಲ್ಲಿ ಕೂರಿಸಿ ಊರುಗಳಲ್ಲಿ ಮೆರವಣಿಗೆ ಮಾಡಲಾಯಿತು.</p>.<p>ಡೊಳ್ಳು ಕುಣಿತ, ಕಂಸಾಳೆ ನೃತ್ಯ ತಮಟೆ ವಾದ್ಯ ಮತ್ತು ವೀರಗಾಸೆ ಸೇರಿದಂತೆ ವಿವಿಧ ಕಲಾ ತಂಡಗಳು ಭಾಗವಹಿಸಿದ್ದರು. </p>.<p>ಶಾಸಕಿ ಮಂಜುಳಾ ಲಿಂಬಾವಳಿ, ಮಾಜಿ ಶಾಸಕ ಅರವಿಂದ ಲಿಂಬಾವಳಿ, ಮುಖಂಡರಾದ ಶ್ರೀಧರ್ ರೆಡ್ಡಿ, ಹೂಡಿ ಪಿಳ್ಳಪ್ಪ ಗುಟ್ಟ ಮಾರಪ್ಪ, ಮನೋಹರ ರೆಡ್ಡಿ, ಮಹೇಂದ್ರ ಮೋದಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>