‘ದಾಸರಹಳ್ಳಿ ಕ್ಷೇತ್ರದಲ್ಲಿ ಹಿಂದೆ ಇದ್ದ ದೌರ್ಜನ್ಯದ ವಾತಾವರಣ ಈಗ ಇಲ್ಲ. ಸರ್ಕಾರಿ ಶಾಲೆ ಮತ್ತು ಆಸ್ಪತ್ರೆಗಳನ್ನು ನಂ.1 ಸ್ಥಾನಕ್ಕೆ ಕೊಂಡೊಯ್ಯುವ ಗುರಿ ಹೊಂದಿದ್ದೇನೆ. ಶಿಕ್ಷಣ ಕ್ಷೇತ್ರದಲ್ಲಿನ ಗಣನೀಯ ಸಾಧನೆ ಮಾಡಿದ ಶಿಕ್ಷಕರನ್ನು ಗುರುತಿಸಿ ಸನ್ಮಾನಿಸುವುದು ಅತ್ಯಂತ ಶ್ರೇಷ್ಟವಾದ ಕೆಲಸ’ ಎಂದರು. ವಿಧಾನ ಪರಿಷತ್ತಿನ ಮಾಜಿ ಸದಸ್ಯ ಕೆ.ಟಿ.ಶ್ರೀಕಂಠೇಗೌಡ, ಪೂರ್ಣಪ್ರಜ್ಞ ಶಾಲೆಯ ಕಾರ್ಯದರ್ಶಿ ರಾಜಾರಾಮ್, ಶಿಕ್ಷಕರ ಸಮ್ಮಿಲನ ವೇದಿಕೆ ಅಧ್ಯಕ್ಷ ಆರ್.ಜಿ. ಗೋವಿಂದಪ್ಪ, ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಅಂದನಪ್ಪ, ಮುನಿಸ್ವಾಮಣ್ಣ ಭಾಗವಹಿಸಿದ್ದರು.