<p><strong>ಪೀಣ್ಯ ದಾಸರಹಳ್ಳಿ:</strong> ದಾಸರಹಳ್ಳಿ ಸಾಮೂಹಿಕ ಗಣೇಶೋತ್ಸವ ಸಮಿತಿ ವತಿಯಿಂದ ಹತ್ತನೇ ವರ್ಷದ ಗಣೇಶೋತ್ಸವದಲ್ಲಿ 18 ಅಡಿ ಎತ್ತರದ ಗಣೇಶ ಮೂರ್ತಿಯ ಪ್ರಸಾದವಾದ 15 ಕೆ.ಜಿ. ಲಡ್ಡು ಜೊತೆಗೆ ಕಾಲು ಕೆ.ಜಿ. ಬೆಳ್ಳಿ ಗಣೇಶ ವಿಗ್ರಹವನ್ನು ಉದ್ಯಮಿ ಶ್ರೀಕಾಂತ್ ಅವರು ಹರಾಜಿನಲ್ಲಿ 5.50 ಲಕ್ಷಕ್ಕೆ ಖರೀದಿಸಿದರು.</p>.<p>ಮೆರವಣಿಯಲ್ಲಿ 51 ಗಣೇಶ ಮೂರ್ತಿಗಳು ಇದ್ದವು. ಕಲಾತಂಡಗಳಾದ ನಾಸಿಕ್ ಡೋಲ್, ಚೆಂಡೆ ವಾದ್ಯ, ಬ್ಯಾಂಡ್, ಡೊಳ್ಳು ಕುಣಿತ, ಗೊಂಬೆ ಕುಣಿತ ಹಾಗೂ ಕೇರಳದಿಂದ ಬಂದ ಕಲಾತಂಡಗಳು ಮೆರವಣಿಗೆಗೆ ಮೆರುಗು ನೀಡಿದವು. ಭಕ್ತರು ಕುಣಿದು ಸಂಭ್ರಮಿಸಿದರು. </p>.<p>ಎಂಇಐ ಆಟದ ಮೈದಾನದಿಂದ ಮೆರವಣಿಗೆ ಪ್ರಾರಂಭವಾಗಿ ಬಾಗಲಗುಂಟೆ ಮಾರಮ್ಮನ ದೇವಸ್ಥಾನ, ಹೆಸರಘಟ್ಟ ಮುಖ್ಯ ರಸ್ತೆ, ಮಲ್ಲಸಂದ್ರದ ಪೈಪ್ ಲೈನ್, ಸೆಲೆಕ್ಷನ್ ಕಾರ್ನರ್ ಮೂಲಕ ಸಾಗಿ ದಾಸರಹಳ್ಳಿ ರಾಷ್ಟ್ರೀಯ ಹೆದ್ದಾರಿ ಮೂಲಕ ಚೊಕ್ಕಸಂದ್ರದ ಕೆರೆ ಹತ್ತಿರ ವಿಸರ್ಜಿಸಲಾಯಿತು.</p>.<p>ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ, ಶಾಸಕ ಎಸ್. ಮುನಿರಾಜು, ಉದ್ಯಮಿ ಶ್ರೀಕಾಂತ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪೀಣ್ಯ ದಾಸರಹಳ್ಳಿ:</strong> ದಾಸರಹಳ್ಳಿ ಸಾಮೂಹಿಕ ಗಣೇಶೋತ್ಸವ ಸಮಿತಿ ವತಿಯಿಂದ ಹತ್ತನೇ ವರ್ಷದ ಗಣೇಶೋತ್ಸವದಲ್ಲಿ 18 ಅಡಿ ಎತ್ತರದ ಗಣೇಶ ಮೂರ್ತಿಯ ಪ್ರಸಾದವಾದ 15 ಕೆ.ಜಿ. ಲಡ್ಡು ಜೊತೆಗೆ ಕಾಲು ಕೆ.ಜಿ. ಬೆಳ್ಳಿ ಗಣೇಶ ವಿಗ್ರಹವನ್ನು ಉದ್ಯಮಿ ಶ್ರೀಕಾಂತ್ ಅವರು ಹರಾಜಿನಲ್ಲಿ 5.50 ಲಕ್ಷಕ್ಕೆ ಖರೀದಿಸಿದರು.</p>.<p>ಮೆರವಣಿಯಲ್ಲಿ 51 ಗಣೇಶ ಮೂರ್ತಿಗಳು ಇದ್ದವು. ಕಲಾತಂಡಗಳಾದ ನಾಸಿಕ್ ಡೋಲ್, ಚೆಂಡೆ ವಾದ್ಯ, ಬ್ಯಾಂಡ್, ಡೊಳ್ಳು ಕುಣಿತ, ಗೊಂಬೆ ಕುಣಿತ ಹಾಗೂ ಕೇರಳದಿಂದ ಬಂದ ಕಲಾತಂಡಗಳು ಮೆರವಣಿಗೆಗೆ ಮೆರುಗು ನೀಡಿದವು. ಭಕ್ತರು ಕುಣಿದು ಸಂಭ್ರಮಿಸಿದರು. </p>.<p>ಎಂಇಐ ಆಟದ ಮೈದಾನದಿಂದ ಮೆರವಣಿಗೆ ಪ್ರಾರಂಭವಾಗಿ ಬಾಗಲಗುಂಟೆ ಮಾರಮ್ಮನ ದೇವಸ್ಥಾನ, ಹೆಸರಘಟ್ಟ ಮುಖ್ಯ ರಸ್ತೆ, ಮಲ್ಲಸಂದ್ರದ ಪೈಪ್ ಲೈನ್, ಸೆಲೆಕ್ಷನ್ ಕಾರ್ನರ್ ಮೂಲಕ ಸಾಗಿ ದಾಸರಹಳ್ಳಿ ರಾಷ್ಟ್ರೀಯ ಹೆದ್ದಾರಿ ಮೂಲಕ ಚೊಕ್ಕಸಂದ್ರದ ಕೆರೆ ಹತ್ತಿರ ವಿಸರ್ಜಿಸಲಾಯಿತು.</p>.<p>ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ, ಶಾಸಕ ಎಸ್. ಮುನಿರಾಜು, ಉದ್ಯಮಿ ಶ್ರೀಕಾಂತ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>