ದಯಾನಂದ್ ಸಾಗರ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಮತ್ತು ಕುಲಪತಿ ಡಾ. ಹೇಮಚಂದ್ರ ಸಾಗರ್, ‘ಅತ್ಯುನ್ನತ ಕೌಶಲ್ಯ ಹೊಂದಿರುವ ಪರಿಣಿತರ ಸಮ್ಮುಖದಲ್ಲಿ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇದು ಭವಿಷ್ಯದ ಚಿಕಿತ್ಸೆಗಳಿಗೆ ಮುನ್ನುಡಿಯಾಗಲಿದ್ದು, ಗುಣಮಟ್ಟದ ವೈದ್ಯಕೀಯ ಸೇವೆ ಒದಗಿಸಲು ಕೂಡ ಸಹಕಾರಿ ಆಗುತ್ತದೆ’ ಎಂದು ತಿಳಿಸಿದರು.