<p><strong>ಬೆಂಗಳೂರು:</strong> ದಯಾನಂದ ಸಾಗರ್ ಶಿಕ್ಷಣ ಸಂಸ್ಥೆಯಲ್ಲಿ ಸಂಶೋಧನೆ ಮತ್ತು ಸಮುದಾಯ ಕೇಂದ್ರಿತ ನಾವೀನ್ಯತೆಗಳನ್ನು ಉತ್ತೇಜಿಸಲು ಶ್ರೇಷ್ಠತಾ ಕೇಂದ್ರ ಸ್ಥಾಪನೆ ಮಾಡಲಾಗುವುದು ಎಂದು ನೈಸ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಅಶೋಕ್ ಖೇಣಿ ಹೇಳಿದರು.</p>.<p>ದಯಾನಂದ ಸಾಗರ್ ಶಿಕ್ಷಣ ಸಂಸ್ಥೆಯ ಘಟಿಕೋತ್ಸವದಲ್ಲಿ ಪದವಿ ಹಾಗೂ ಸ್ನಾತಕೋತ್ತರ ಪದವಿಯ 4,527 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿ ಅವರು ಮಾತನಾಡಿದರು.</p>.<p>‘ನಾವೀನ್ಯತೆಗೆ ಬದ್ಧತೆ ಹೊಂದಿರುವ ಈ ಸಂಸ್ಥೆಯಲ್ಲಿ ಶ್ರೇಷ್ಠತಾ ಕೇಂದ್ರವನ್ನು ಸ್ಥಾಪಿಸಲಾಗುವುದು. ಸಮಾಜಕ್ಕೆ ಸೇವೆ ಸಲ್ಲಿಸುವಲ್ಲಿ ಸಂಸ್ಥೆಯ ಪಾತ್ರವನ್ನು ಮತ್ತಷ್ಟು ಬಲಪಡಿಸುತ್ತದೆ. ಜಾಗತಿಕವಾಗಿ ಉದ್ಯೋಗಾವಕಾಶಗಳು ಹೆಚ್ಚಿದಂತೆ ಸ್ಪರ್ಧೆಯೂ ಹೆಚ್ಚಿದೆ. ಉದ್ಯೋಗಾವಕಾಶ ಬಳಸಿಕೊಂಡು ಯುವ ಜನರು ದೇಶದ ಆರ್ಥಿಕ ಬೆಳವಣಿಗೆಗೆ ಕೊಡುಗೆ ನೀಡಬೇಕು’ ಎಂದು ಕರೆ ನೀಡಿದರು.</p>.<p>‘ನಗರದಲ್ಲಿ ಹೆಚ್ಚುತ್ತಿರುವ ಜನಸಂಖ್ಯೆಗೆ ಅನುಗುಣವಾಗಿ ಸುಗಮ ಹಾಗೂ ಅಡೆತಡೆಯಿಲ್ಲದ ವಾಹನ ಸಂಚಾರಕ್ಕಾಗಿ ನಮ್ಮ ಸಂಸ್ಥೆಯು ನೈಸ್ ರಸ್ತೆಯನ್ನು ಅಭಿವೃದ್ಧಿಪಡಿಸಿದೆ. ಸಂಸ್ಥೆಯು ಈವರೆಗೂ 43 ಪ್ರಮುಖ ಯೋಜನೆಗಳನ್ನು ಪೂರ್ಣಗೊಳಿಸಿದೆ. ರಸ್ತೆಗಳಲ್ಲಿ ಗುಂಡಿ ಇಲ್ಲದಂತೆ ನಿರ್ವಹಣೆ ಮಾಡಲಾಗುತ್ತಿದೆ’ ಎಂದರು.</p>.<p>ದಯಾನಂದ ಸಾಗರ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ.ಡಿ.ಹೇಮಚಂದ್ರ ಸಾಗರ್, ಉಪಾಧ್ಯಕ್ಷ ಡಾ.ಡಿ.ಪ್ರೇಮಚಂದ್ರ ಸಾಗರ್, ಜಿಯುವಿಐ ಸಂಸ್ಥೆಯ ಸಹ ಸಂಸ್ಥಾಪಕ ಎಸ್.ಪಿ.ಬಾಲಮುರುಗನ್, ಇಂಡೋ–ಜಪಾನ್ ವಾಣಿಜ್ಯ ಮತ್ತು ಕೈಗಾರಿಕಾ ಮಂಡಳಿಯ ಕಾರ್ಯಕಾರಿ ಸಮಿತಿ ಸದಸ್ಯ ಎಸ್.ಎನ್.ಶಮಂತ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ದಯಾನಂದ ಸಾಗರ್ ಶಿಕ್ಷಣ ಸಂಸ್ಥೆಯಲ್ಲಿ ಸಂಶೋಧನೆ ಮತ್ತು ಸಮುದಾಯ ಕೇಂದ್ರಿತ ನಾವೀನ್ಯತೆಗಳನ್ನು ಉತ್ತೇಜಿಸಲು ಶ್ರೇಷ್ಠತಾ ಕೇಂದ್ರ ಸ್ಥಾಪನೆ ಮಾಡಲಾಗುವುದು ಎಂದು ನೈಸ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಅಶೋಕ್ ಖೇಣಿ ಹೇಳಿದರು.</p>.<p>ದಯಾನಂದ ಸಾಗರ್ ಶಿಕ್ಷಣ ಸಂಸ್ಥೆಯ ಘಟಿಕೋತ್ಸವದಲ್ಲಿ ಪದವಿ ಹಾಗೂ ಸ್ನಾತಕೋತ್ತರ ಪದವಿಯ 4,527 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿ ಅವರು ಮಾತನಾಡಿದರು.</p>.<p>‘ನಾವೀನ್ಯತೆಗೆ ಬದ್ಧತೆ ಹೊಂದಿರುವ ಈ ಸಂಸ್ಥೆಯಲ್ಲಿ ಶ್ರೇಷ್ಠತಾ ಕೇಂದ್ರವನ್ನು ಸ್ಥಾಪಿಸಲಾಗುವುದು. ಸಮಾಜಕ್ಕೆ ಸೇವೆ ಸಲ್ಲಿಸುವಲ್ಲಿ ಸಂಸ್ಥೆಯ ಪಾತ್ರವನ್ನು ಮತ್ತಷ್ಟು ಬಲಪಡಿಸುತ್ತದೆ. ಜಾಗತಿಕವಾಗಿ ಉದ್ಯೋಗಾವಕಾಶಗಳು ಹೆಚ್ಚಿದಂತೆ ಸ್ಪರ್ಧೆಯೂ ಹೆಚ್ಚಿದೆ. ಉದ್ಯೋಗಾವಕಾಶ ಬಳಸಿಕೊಂಡು ಯುವ ಜನರು ದೇಶದ ಆರ್ಥಿಕ ಬೆಳವಣಿಗೆಗೆ ಕೊಡುಗೆ ನೀಡಬೇಕು’ ಎಂದು ಕರೆ ನೀಡಿದರು.</p>.<p>‘ನಗರದಲ್ಲಿ ಹೆಚ್ಚುತ್ತಿರುವ ಜನಸಂಖ್ಯೆಗೆ ಅನುಗುಣವಾಗಿ ಸುಗಮ ಹಾಗೂ ಅಡೆತಡೆಯಿಲ್ಲದ ವಾಹನ ಸಂಚಾರಕ್ಕಾಗಿ ನಮ್ಮ ಸಂಸ್ಥೆಯು ನೈಸ್ ರಸ್ತೆಯನ್ನು ಅಭಿವೃದ್ಧಿಪಡಿಸಿದೆ. ಸಂಸ್ಥೆಯು ಈವರೆಗೂ 43 ಪ್ರಮುಖ ಯೋಜನೆಗಳನ್ನು ಪೂರ್ಣಗೊಳಿಸಿದೆ. ರಸ್ತೆಗಳಲ್ಲಿ ಗುಂಡಿ ಇಲ್ಲದಂತೆ ನಿರ್ವಹಣೆ ಮಾಡಲಾಗುತ್ತಿದೆ’ ಎಂದರು.</p>.<p>ದಯಾನಂದ ಸಾಗರ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ.ಡಿ.ಹೇಮಚಂದ್ರ ಸಾಗರ್, ಉಪಾಧ್ಯಕ್ಷ ಡಾ.ಡಿ.ಪ್ರೇಮಚಂದ್ರ ಸಾಗರ್, ಜಿಯುವಿಐ ಸಂಸ್ಥೆಯ ಸಹ ಸಂಸ್ಥಾಪಕ ಎಸ್.ಪಿ.ಬಾಲಮುರುಗನ್, ಇಂಡೋ–ಜಪಾನ್ ವಾಣಿಜ್ಯ ಮತ್ತು ಕೈಗಾರಿಕಾ ಮಂಡಳಿಯ ಕಾರ್ಯಕಾರಿ ಸಮಿತಿ ಸದಸ್ಯ ಎಸ್.ಎನ್.ಶಮಂತ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>