‘ಕಂದಾಯ ದಾಖಲೆಗಳನ್ನು ಮನೆ ಬಾಗಿಲಿಗೆ ತಲುಪಿಸುವ ಯೋಜನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶನಿವಾರ ಚಾಲನೆ ನೀಡಲಿದ್ದಾರೆ. ಬೆಂಗಳೂರು ಜಿಲ್ಲೆಯ 5 ತಾಲ್ಲೂಕುಗಳಲ್ಲಿ ಯೋಜನೆ ಜಾರಿ ಮಾಡಲಾಗುತ್ತಿದೆ. 97,209 ಪಹಣಿ, 11,513 ಅಟ್ಲಾಸ್, 31,232 ಜಾತಿ ಮತ್ತು ಆದಾಯ ದೃಢೀಕರಣ ಪತ್ರಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸಲು ತೀರ್ಮಾನ ಕೈಗೊಳ್ಳಲಾಗಿದೆ. ಬೆಂಗಳೂರು ನಗರ ಜಿಲ್ಲೆಯಲ್ಲಿ 52,285 ರೈತ ಕುಟುಂಬಗಳಿಗೆ ಇದರಿಂದ ಅನುಕೂಲ ಆಗಲಿದೆ’ ಎಂದು ವಿವರಿಸಿದರು.