ಆಗ ಯುವತಿಯರು, ‘ತಾವು ಹರಿಯಾಣದವರು. ಸ್ನೇಹಿತೆ ಜತೆ ಊಟಕ್ಕೆ ಬಂದಿದ್ದೇವೆ. ಮನೆಗೆ ತೆರಳಲು ಕ್ಯಾಬ್ಗಾಗಿ ಕಾಯುತ್ತಿದ್ದೇವೆ’ ಎಂದಿದ್ದಾರೆ. ಆಗ ಚೇತನ್ ಸಿಂಗ್, ತುರ್ತು ಸಂದರ್ಭದಲ್ಲಿ ‘ನಮ್ಮ 100’ ಸಂಖ್ಯೆಗೆ ಕರೆ ಮಾಡಿ ಪೊಲೀಸರಿಗೆ ಮಾಹಿತಿ ನೀಡುವಂತೆ ಸೂಚಿಸಿದ್ದಾರೆ. ಅಲ್ಲದೆ ಸ್ಮಾರ್ಟ್ ಫೋನ್ಗಳಲ್ಲಿ ‘ಸುರಕ್ಷಾ ಆ್ಯಪ್’ ಡೌನ್ಲೋಡ್ ಮಾಡಿಕೊಂಡು, ಅದನ್ನು ಬಳಸುವಂತೆ ಸಲಹೆ ನೀಡಿದ್ದಾರೆ.