‘ಚುಂಚನಕಟ್ಟೆ ಎಸ್ಬಿಐ ಲೇಔಟ್ ನಿವಾಸಿ ಮಹೇಶ್ ಕುಮಾರ್ (44), ಪತ್ನಿ ಜ್ಯೋತಿ (29) ಹಾಗೂ ಮಗ ನಂದೀಶ್ ಗೌಡ (9) ಅವರ ಮೃತದೇಹ ಪತ್ತೆಯಾಗಿದೆ. ಮಗನನ್ನು ಕೊಂದು ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವುದು ಮೇಲ್ನೋಟಕ್ಕೆ ಗೊತ್ತಾಗುತ್ತಿದೆ. ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.