<p><strong>ಬೆಂಗಳೂರು:</strong> ‘ಜೋಳಿಗೆ ಹಿಡಿದು ದುಶ್ಚಟವನ್ನು ಇದರಲ್ಲಿ ಹಾಕಿ ಎಂದು ಹೇಳಿದ ಮಹಂತ ಶಿವಯೋಗಿ ಸ್ವಾಮೀಜಿ ಅವರ ಜನ್ಮದಿನದ ಪ್ರಯುಕ್ತ ನಡೆಯುತ್ತಿರುವ ಒಂದು ದಿನದ ‘ವ್ಯಸನಮುಕ್ತ’ ಆಚರಣೆ, ಆಗಸ್ಟ್ ತಿಂಗಳು ಪೂರ್ತಿ ನಡೆಯುವ ಮೂಲಕ ‘ಮಾಸಾಚರಣೆ’ ಆಗಬೇಕು’ ಎಂದು ಮನೋವಿಜ್ಞಾನಿ ಎ. ಶ್ರೀಧರ್ ಅಭಿಪ್ರಾಯಪಟ್ಟರು.</p>.<p>ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಸೇರಿದಂತೆ ವಿವಿಧ ಸಂಸ್ಥೆಗಳ ಸಹಯೋಗದಲ್ಲಿ ಚಿತ್ತರಗಿ ಇಳಕಲ್ ವಿಜಯಮಹಾಂತೇಶ್ವರ ಸಂಸ್ಥಾನ ಮಠದ ಮಹಾಂತ ಶಿವಯೋಗಿಗಳ ಜಯಂತಿ ಪ್ರಯುಕ್ತ ಶುಕ್ರವಾರ ಆಯೋಜಿಸಿದ್ದ ‘ವ್ಯಸನಮುಕ್ತ ದಿನಾಚರಣೆ’ಯಲ್ಲಿ ಅವರು ಉಪನ್ಯಾಸ ನೀಡಿದರು.</p>.<p>‘ಅಮೆರಿಕ, ಯೂರೋಪ್ನಲ್ಲಿ ಕ್ರಿಸ್ಮಸ್ ನಂತರ ಜನವರಿ ತಿಂಗಳನ್ನು ‘ಡ್ರೈ ಜನವರಿ’ ಎಂದು ಆಚರಿಸುತ್ತಾರೆ. ಆ ತಿಂಗಳು ಪೂರ್ತಿ ಮದ್ಯ ಸೇವಿಸುವುದಿಲ್ಲವೆಂದು ಪ್ರತಿಜ್ಞೆ ಮಾಡುತ್ತಾರೆ. 30–35 ದಿನಗಳು ಮದ್ಯದಿಂದ ದೂರವಿದ್ದರೆ, ವ್ಯಸನಮುಕ್ತರಾಗಲು ಸಾಧ್ಯವಿದೆ. ಕಾನೂನು, ನೀತಿ–ನಿಯಮಗಳಿಗಿಂತ ಇಂಥ ಸ್ವಯಂ ನಿಯಂತ್ರಣದಿಂದಲೇ ವ್ಯಸನಮುಕ್ತರಾಗಲು ಸಾಧ್ಯವಿದೆ’ ಎಂದು ಅಭಿಪ್ರಾಯಪಟ್ಟರು.</p>.<p>ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ್ ಮಾತನಾಡಿ, ‘ಮಹಾಂತ ಶಿವಯೋಗಿಗಳ ಜಯಂತಿಯನ್ನು ಸರ್ಕಾರ ‘ವ್ಯಸನಮುಕ್ತ’ ದಿನವನ್ನಾಗಿ ಆಚರಿಸುತ್ತಿದೆ. ಈ ಕಾರ್ಯಕ್ರಮ ಜಿಲ್ಲೆ, ತಾಲ್ಲೂಕು ಮಟ್ಟದಲ್ಲಿ ದೊಡ್ಡ ಪ್ರಮಾಣದಲ್ಲಿ ನಡೆಯುವಂತಾಗಬೇಕು’ ಎಂದು ಸಲಹೆ ನೀಡಿದರು.</p>.<p>ಚಿತ್ತರಗಿ ಇಳಕಲ್ ವಿಜಯಮಹಾಂತೇಶ್ವರ ಸಂಸ್ಥಾನದ ಗುರುಮಹಾಂತ ಸ್ವಾಮೀಜಿ ಮಾತನಾಡಿ, ‘ವ್ಯಸನಕ್ಕೆ ದಾಸರಾಗಿರುವವರಿಗೆ ಮಹಾಂತ ಶಿವಯೋಗಿಗಳ ರೀತಿಯಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಯೂ ಅರಿವು ಮೂಡಿಸಬೇಕು’ ಎಂದು ಸಲಹೆ ನೀಡಿದರು.</p>.<p>ಕಾರ್ಯಕ್ರಮದಲ್ಲಿ ಕರ್ನಾಟಕ ಮಾಧ್ಯಮ ಅಕಾಡೆಮಿಯ ಅಧ್ಯಕ್ಷೆ ಆಯೇಷಾ ಖಾನುಂ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿಯ ಕಾರ್ಯದರ್ಶಿ ಎನ್.ಎಸ್.ಮಹೇಶ್, ಗಾಂಧಿ ಸ್ಮಾರಕ ನಿಧಿಯ ಕೋಶಾಧಿಕಾರಿ ಎಚ್.ಬಿ.ದಿನೇಶ್, ಗಾಂಧಿ ಭವನದ ಕಾರ್ಯದರ್ಶಿ ಎಂ.ಸಿ.ನರೇಶ್, ಸದಸ್ಯೆ ಅಬಿದಾ ಬೇಗಂ ಉಪಸ್ಥಿತರಿದ್ದರು.</p>.<p>ಕಾರ್ಯಕ್ರಮಕ್ಕೂ ಮುನ್ನ ವಿದ್ಯಾರ್ಥಿಗಳು ಮತ್ತು ಕಾರ್ಯಕ್ರಮದ ಅತಿಥಿಗಳು ಮೌರ್ಯ ವೃತ್ತದಿಂದ ಗಾಂಧಿ ಭವನದವರೆಗೆ ಜಾಗೃತಿ ಜಾಥಾ ನಡೆಸಿದರು. ಕಾರ್ಯಕ್ರಮದ ಕೊನೆಯಲ್ಲಿ ಮಾದಕವಸ್ತು ವಿರೋಧಿ ಪ್ರತಿಜ್ಞಾವಿಧಿಯನ್ನು ಬೋಧಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಜೋಳಿಗೆ ಹಿಡಿದು ದುಶ್ಚಟವನ್ನು ಇದರಲ್ಲಿ ಹಾಕಿ ಎಂದು ಹೇಳಿದ ಮಹಂತ ಶಿವಯೋಗಿ ಸ್ವಾಮೀಜಿ ಅವರ ಜನ್ಮದಿನದ ಪ್ರಯುಕ್ತ ನಡೆಯುತ್ತಿರುವ ಒಂದು ದಿನದ ‘ವ್ಯಸನಮುಕ್ತ’ ಆಚರಣೆ, ಆಗಸ್ಟ್ ತಿಂಗಳು ಪೂರ್ತಿ ನಡೆಯುವ ಮೂಲಕ ‘ಮಾಸಾಚರಣೆ’ ಆಗಬೇಕು’ ಎಂದು ಮನೋವಿಜ್ಞಾನಿ ಎ. ಶ್ರೀಧರ್ ಅಭಿಪ್ರಾಯಪಟ್ಟರು.</p>.<p>ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಸೇರಿದಂತೆ ವಿವಿಧ ಸಂಸ್ಥೆಗಳ ಸಹಯೋಗದಲ್ಲಿ ಚಿತ್ತರಗಿ ಇಳಕಲ್ ವಿಜಯಮಹಾಂತೇಶ್ವರ ಸಂಸ್ಥಾನ ಮಠದ ಮಹಾಂತ ಶಿವಯೋಗಿಗಳ ಜಯಂತಿ ಪ್ರಯುಕ್ತ ಶುಕ್ರವಾರ ಆಯೋಜಿಸಿದ್ದ ‘ವ್ಯಸನಮುಕ್ತ ದಿನಾಚರಣೆ’ಯಲ್ಲಿ ಅವರು ಉಪನ್ಯಾಸ ನೀಡಿದರು.</p>.<p>‘ಅಮೆರಿಕ, ಯೂರೋಪ್ನಲ್ಲಿ ಕ್ರಿಸ್ಮಸ್ ನಂತರ ಜನವರಿ ತಿಂಗಳನ್ನು ‘ಡ್ರೈ ಜನವರಿ’ ಎಂದು ಆಚರಿಸುತ್ತಾರೆ. ಆ ತಿಂಗಳು ಪೂರ್ತಿ ಮದ್ಯ ಸೇವಿಸುವುದಿಲ್ಲವೆಂದು ಪ್ರತಿಜ್ಞೆ ಮಾಡುತ್ತಾರೆ. 30–35 ದಿನಗಳು ಮದ್ಯದಿಂದ ದೂರವಿದ್ದರೆ, ವ್ಯಸನಮುಕ್ತರಾಗಲು ಸಾಧ್ಯವಿದೆ. ಕಾನೂನು, ನೀತಿ–ನಿಯಮಗಳಿಗಿಂತ ಇಂಥ ಸ್ವಯಂ ನಿಯಂತ್ರಣದಿಂದಲೇ ವ್ಯಸನಮುಕ್ತರಾಗಲು ಸಾಧ್ಯವಿದೆ’ ಎಂದು ಅಭಿಪ್ರಾಯಪಟ್ಟರು.</p>.<p>ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ್ ಮಾತನಾಡಿ, ‘ಮಹಾಂತ ಶಿವಯೋಗಿಗಳ ಜಯಂತಿಯನ್ನು ಸರ್ಕಾರ ‘ವ್ಯಸನಮುಕ್ತ’ ದಿನವನ್ನಾಗಿ ಆಚರಿಸುತ್ತಿದೆ. ಈ ಕಾರ್ಯಕ್ರಮ ಜಿಲ್ಲೆ, ತಾಲ್ಲೂಕು ಮಟ್ಟದಲ್ಲಿ ದೊಡ್ಡ ಪ್ರಮಾಣದಲ್ಲಿ ನಡೆಯುವಂತಾಗಬೇಕು’ ಎಂದು ಸಲಹೆ ನೀಡಿದರು.</p>.<p>ಚಿತ್ತರಗಿ ಇಳಕಲ್ ವಿಜಯಮಹಾಂತೇಶ್ವರ ಸಂಸ್ಥಾನದ ಗುರುಮಹಾಂತ ಸ್ವಾಮೀಜಿ ಮಾತನಾಡಿ, ‘ವ್ಯಸನಕ್ಕೆ ದಾಸರಾಗಿರುವವರಿಗೆ ಮಹಾಂತ ಶಿವಯೋಗಿಗಳ ರೀತಿಯಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಯೂ ಅರಿವು ಮೂಡಿಸಬೇಕು’ ಎಂದು ಸಲಹೆ ನೀಡಿದರು.</p>.<p>ಕಾರ್ಯಕ್ರಮದಲ್ಲಿ ಕರ್ನಾಟಕ ಮಾಧ್ಯಮ ಅಕಾಡೆಮಿಯ ಅಧ್ಯಕ್ಷೆ ಆಯೇಷಾ ಖಾನುಂ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿಯ ಕಾರ್ಯದರ್ಶಿ ಎನ್.ಎಸ್.ಮಹೇಶ್, ಗಾಂಧಿ ಸ್ಮಾರಕ ನಿಧಿಯ ಕೋಶಾಧಿಕಾರಿ ಎಚ್.ಬಿ.ದಿನೇಶ್, ಗಾಂಧಿ ಭವನದ ಕಾರ್ಯದರ್ಶಿ ಎಂ.ಸಿ.ನರೇಶ್, ಸದಸ್ಯೆ ಅಬಿದಾ ಬೇಗಂ ಉಪಸ್ಥಿತರಿದ್ದರು.</p>.<p>ಕಾರ್ಯಕ್ರಮಕ್ಕೂ ಮುನ್ನ ವಿದ್ಯಾರ್ಥಿಗಳು ಮತ್ತು ಕಾರ್ಯಕ್ರಮದ ಅತಿಥಿಗಳು ಮೌರ್ಯ ವೃತ್ತದಿಂದ ಗಾಂಧಿ ಭವನದವರೆಗೆ ಜಾಗೃತಿ ಜಾಥಾ ನಡೆಸಿದರು. ಕಾರ್ಯಕ್ರಮದ ಕೊನೆಯಲ್ಲಿ ಮಾದಕವಸ್ತು ವಿರೋಧಿ ಪ್ರತಿಜ್ಞಾವಿಧಿಯನ್ನು ಬೋಧಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>