ನಗರದಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು, ‘ರಾಜ್ಯದ ನಾನಾ ಭಾಗಗಳ ರೈತರು ರೊಟ್ಟಿ ಬುತ್ತಿ ಕಟ್ಟಿಕೊಂಡು ಬೆಂಗಳೂರು ಹಾಗೂ ಬೆಳಗಾವಿ ಅಧಿವೇಶನದ ವೇಳೆ ಹೋರಾಟ ನಡೆಸಿದ್ದರು. ಆಗ ಹಿಂದಕ್ಕೆ ಪಡೆಯುವ ಭರವಸೆ ನೀಡಿ ರೈತರನ್ನು ರಾಜ್ಯ ಸರ್ಕಾರವು ವಾಪಸ್ ಕಳುಹಿಸಿತ್ತು. ಆದರೆ, ಇದುವರೆಗೂ ತೀರ್ಮಾನ ಕೈಗೊಂಡಿಲ್ಲ. ಮುಂದಿನ ಬಜೆಟ್ ಅಧಿವೇಶನ
ದಲ್ಲಿ ತೀರ್ಮಾನ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.