ಸ್ಥಳೀಯ ವರ್ತಕರೊಂದಿಗೆ ಚರ್ಚೆ:ಅವೆನ್ಯೂ ರಸ್ತೆಯ ದೊಡ್ಡಪೇಟೆ ವೃತ್ತದ ಸುಂದರೀಕರಣ, ಅಗ್ನಿಶಾಮಕ ಘಟಕಗಳ ಸ್ಥಾಪನೆ, ರಸ್ತೆಯ ಇಕ್ಕೆಲಗಳಲ್ಲಿ ವಾಹನ ನಿಲುಗಡೆ ವ್ಯವಸ್ಥೆ ಮಾಡುವಂತೆ ಹಾಗೂ ಪಾದಚಾರಿ ಮಾರ್ಗದ ಅಭಿವೃದ್ಧಿಗೆ ತ್ವರಿತವಾಗಿ ಕ್ರಮ ಕೈಗೊಳ್ಲುವಂತೆ ಸ್ಥಳೀಯ ವರ್ತಕರು ಒತ್ತಾಯಿಸಿದರು. ಇದಕ್ಕೆ ಸ್ಪಂದಿಸಿದ ರಾಕೇಶ್ ಸಿಂಗ್, ಈ ಕುರಿತು ಕೂಡಲೇ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸ್ಮಾರ್ಟ್ ಸಿಟಿ ಅಧಿಕಾರಿಗಳಿಗೆ ಸೂಚಿಸಿದರು.
ಪರಿಶೀಲನೆ ವೇಳೆ ಬೆಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ನ ಮುಖ್ಯ ಎಂಜಿನಿಯರ್ ವಿನಾಯಕ ಸೂಗೂರ್, ಬಿಬಿಎಂಪಿಯ ಸೂಪರಿಂಟೆಂಡಿಂಗ್ ಎಂಜಿನಿಯರ್ ಬಸವರಾಜ್ ಕಬಾಡೆ ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.