‘ಜಮೀರ್ ಅಹಮದ್, ರಿಜ್ವಾನ್ ಅರ್ಷದ್ ಮತ್ತು ಇನ್ನೂ ಇಬ್ಬರು ಪಾಲಿಕೆ ಮಾಜಿ ಸದಸ್ಯರ ಜತೆ ತುಷಾರ್ ಗಿರಿನಾಥ್ ಅವರು ವಾರದ ಹಿಂದೆ ಗೋಪ್ಯ ಸಭೆ ನಡೆಸಿದ್ದಾರೆ. ಇದರ ಚಿತ್ರಗಳು ನನ್ನ ಬಳಿ ಇವೆ. ಸಭೆಯ ಬಳಿಕ ಜಮೀರ್ ಆಗಲಿ, ತುಷಾರ್ ಗಿರಿನಾಥ್ ಆಗಲಿ ಮಾಹಿತಿ ನೀಡಿಲ್ಲ. ಇದನ್ನು ಗಮನಿಸಿದರೆ ನಡೆಯಬಾರದ ಡೀಲ್ ನಡೆದಿದೆ ಎಂಬುದು ಸ್ಪಷ್ಟ’ ಎಂದು ಅವರು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದರು.