ಕೋರಮಂಗಲದಲ್ಲಿರುವ ವಸತಿಗೃಹದಲ್ಲಿ ನೆಲೆಸಿದ್ದ ಮುದ್ರೆ ಅವರು, ಟ್ಯಾಂಕ್ನಲ್ಲಿ ನೀರು ಇದೆಯೇ ಎಂದು ಪರಿಶೀಲಿಸಲು ಬುಧವಾರ ಬೆಳಿಗ್ಗೆ 6.20ರ ಸುಮಾರಿಗೆ ಟೇರೆಸ್ಗೆ ತೆರಳಿದ್ದರು. ಈ ವೇಳೆ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ.
‘ಮುದ್ರೆ ಅವರು ದಿನಾ ಬೆಳಿಗ್ಗೆ ಟ್ಯಾಂಕ್ನಲ್ಲಿ ನೀರಿದೆಯೇ ಎಂದು ಪರಿಶೀಲಿಸುತ್ತಿದ್ದರು. ಬುಧವಾರ ಬೆಳಿಗ್ಗೆ ಕೂಡಾ ಹೋಗಿದ್ದರು. ಆ ಸಂದರ್ಭದಲ್ಲಿ ಈ ಘಟನೆ ನಡೆದಿದೆ’ ಎಂದು ಪೊಲೀಸರು ತಿಳಿಸಿದರು. ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.