ಶನಿವಾರ, ಮಾರ್ಚ್ 25, 2023
22 °C

ನಿಧನ ವಾರ್ತೆ: ಡಾ. ಜಿ. ತಿಮ್ಮಯ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಖ್ಯಾತ ಆರ್ಥಿಕ ತಜ್ಞ ಡಾ.ಜಿ.ತಿಮ್ಮಯ್ಯ (84) ಅವರು ನಗರದಲ್ಲಿ ಶನಿವಾರ ನಿಧನರಾದರು.

ತಿಮ್ಮಯ್ಯ ಅವರು ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ ಸಂಸ್ಥೆಯ (ಐಎಸ್‌ಇಸಿ) ಅಧ್ಯಕ್ಷ ಮತ್ತು ನಿರ್ದೇಶ ಕರಾಗಿ ಕಾರ್ಯನಿರ್ವಹಿಸಿದ್ದರು. ಜತೆಗೆ, ಕರ್ನಾಟಕ ಹಣಕಾಸು ಆಯೋಗದ ಅಧ್ಯಕ್ಷ ಮತ್ತು ರಾಜ್ಯ ಯೋಜನಾ ಮಂಡಳಿ ಮತ್ತು ರಾಷ್ಟ್ರೀಯ ಯೋಜನಾ ಆಯೋಗದ ಸದಸ್ಯರಾಗಿದ್ದರು.

ಬಾಂಬೆ, ಮೈಸೂರು ಮತ್ತು ಬೆಂಗ ಳೂರು ವಿಶ್ವವಿದ್ಯಾಲಯಗಳಲ್ಲಿ ಬೋಧನೆ ಮಾಡಿದ್ದ ಅವರು, 1987ರಿಂದ 1994ರವರೆಗೆ ಕರ್ನಾಟಕ ಸರ್ಕಾರದ ಆರ್ಥಿಕ ಸಲಹೆಗಾರರಾಗಿದ್ದರು.

ಬಾಂಬೆ ವಿಶ್ವವಿದ್ಯಾಲಯದಿಂದ ಪಿಎಚ್‌.ಡಿ ಪದವಿ ಪಡೆದಿದ್ದ ಡಾ.ಜಿ. ತಿಮ್ಮಯ್ಯ ಅವರು, 16 ಪುಸ್ತಕ ಗಳು ಮತ್ತು ಹಲವಾರು ಸಂಶೋ ಧನಾ ಪ್ರಬಂಧಗಳನ್ನು ಪ್ರಕಟಿಸಿದ್ದರು. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯವು 2012ರಲ್ಲಿ ಇವರಿಗೆ ಗೌರವ ಡಾಕ್ಟರೇಟ್‌ ನೀಡಿತ್ತು.

ತಿಮ್ಮಯ್ಯ ಅವರಿಗೆ ‍ಪತ್ನಿ ಮತ್ತು ಇಬ್ಬರು ಪುತ್ರರು ಇದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.