ರಾಮಚಂದ್ರ ಅವರು ಪೊಲೀಸ್ ಅಧಿಕಾರಿಯಾಗಿ ಸೇವೆ ಸಲ್ಲಿಸಿ, ನಿವೃತ್ತಿ ಹೊಂದಿದ್ದರು. ಸಾಮಾಜಿಕ ಸಂದೇಶ ಸಾರುವ ನಾಟಕಗಳಲ್ಲಿ ಅವರು ಹೆಚ್ಚಾಗಿ ಅಭಿನಯಿಸಿದ್ದರು. ಕಲಾವಿದರ ಬಳಗ ಟ್ರಸ್ಟ್ನ ಸಂಸ್ಥಾಪನಾ ಅಧ್ಯಕ್ಷರಾಗಿದ್ದ ಅವರು, ಯುವ ಕಲಾವಿದರನ್ನು ಪ್ರೋತ್ಸಾಹಿಸುತ್ತಿದ್ದರು. ನಾಟಕ ಅಕಾಡೆಮಿ ಪ್ರಶಸ್ತಿ, ಕೆಂಪೇಗೌಡ ಪ್ರಶಸ್ತಿ ಸೇರಿದಂತೆ ವಿವಿಧ ಖಾಸಗಿ ಸಂಘ–ಸಂಸ್ಥೆಗಳ ಪ್ರಶಸ್ತಿಗಳು ಅವರಿಗೆ ಸಂದಿವೆ.