<p><strong>ಬೆಂಗಳೂರು:</strong> ಪೊಲೀಸ್ ವಶದಲ್ಲಿದ್ದ ಆಫ್ರಿಕಾ ಪ್ರಜೆಯೊಬ್ಬರು ಮೃತಪಟ್ಟ ಘಟನೆ ಖಂಡಿಸಿ ಜೆ.ಸಿ.ನಗರ ಠಾಣೆ ಎದುರು ಕೆಲ ಆಫ್ರಿಕಾ ಪ್ರಜೆಗಳು ಸೋಮವಾರ ಸಂಜೆ ಪ್ರತಿಭಟನೆ ನಡೆಸಿದರು. ಇದೇ ವೇಳೆಯೇ ಪೊಲೀಸರ ಮೇಲೆ ಹಲ್ಲೆ ಮಾಡಲು ಯತ್ನಿಸಿದರು. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿ ಪ್ರಹಾರ ಮಾಡಿದರು.</p>.<p>ಜೆ.ಸಿ.ನಗರ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಆಫ್ರಿಕಾ ಪ್ರಜೆಯನ್ನು ವಶಕ್ಕೆ ಪಡೆದಿದ್ದರು. ಅವರ ಬಳಿ 5 ಗ್ರಾಂ ಎಂಡಿಎಂಎ ಪತ್ತೆಯಾಗಿತ್ತು ಎನ್ನಲಾಗಿದೆ.</p>.<p>ಆರೋಪಿಯನ್ನು ಠಾಣೆಗೆ ಕರೆತಂದು ಪೊಲೀಸರು ವಿಚಾರಣೆ ನಡೆಸುತ್ತಿದ್ದರು. ಅದೇ ವೇಳೆಯೇ ಆಫ್ರಿಕಾ ಪ್ರಜೆಗೆ ಎದೆನೋವು ಕಾಣಿಸಿಕೊಂಡಿತ್ತು. ಪೊಲೀಸರು ಅವರನ್ನು ಚಿರಾಯು ಆಸ್ಪತ್ರೆಗೆ ಕರೆದೊಯ್ದರು. ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ ಎಂದು ಗೊತ್ತಾಗಿದೆ. ಈ ಸಾವಿನ ಬಗ್ಗೆ ಸಿಐಡಿ ಪೊಲೀಸರು, ತನಿಖೆ ಆರಂಭಿಸಿದ್ದಾರೆ.</p>.<p><strong>ಠಾಣೆ ಎದುರು ಗುಂಪು: </strong>‘ಪೊಲೀಸರ ಕಿರುಕುಳದಿಂದ ಆಫ್ರಿಕಾ ಪ್ರಜೆ ಮೃತಪಟ್ಟಿದ್ದಾರೆ ಎಂದು ಆರೋಪಿಸಿದ್ದ ಕೆಲವರು ಠಾಣೆ ಎದುರು ಗುಂಪು ಸೇರಿ ಪ್ರತಿಭಟನೆ ನಡೆಸಿದರು. ಸ್ಥಳಕ್ಕೆ ಬಂದ ಉತ್ತರ ವಿಭಾಗದ ಡಿಸಿಪಿ ಧರ್ಮೇಂದ್ರಕುಮಾರ್ ಮೀನಾ, ಪ್ರತಿಭಟನಾಕಾರರ ಮನವೋಲಿಸಲು ಯತ್ನಿಸಿದ್ದರು.</p>.<p>ಅದಕ್ಕೆ ಒಪ್ಪದ ಪ್ರತಿಭಟನಾಕಾರರು, ಪೊಲೀಸರ ಮೇಲೆಯೇ ಹಲ್ಲೆ ಮಾಡಲು ಮುಂದಾದರು. ಅದೇ ಸಂದರ್ಭದಲ್ಲೇ ಪೊಲೀಸರು, ಲಾಠಿ ಪ್ರಹಾರ ಮಾಡಿದರು. ಸದ್ಯ 25ಕ್ಕೂ ಹೆಚ್ಚು ಮಂದಿಯನ್ನು ವಶಕ್ಕೆ ಪಡೆಯಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಪೊಲೀಸ್ ವಶದಲ್ಲಿದ್ದ ಆಫ್ರಿಕಾ ಪ್ರಜೆಯೊಬ್ಬರು ಮೃತಪಟ್ಟ ಘಟನೆ ಖಂಡಿಸಿ ಜೆ.ಸಿ.ನಗರ ಠಾಣೆ ಎದುರು ಕೆಲ ಆಫ್ರಿಕಾ ಪ್ರಜೆಗಳು ಸೋಮವಾರ ಸಂಜೆ ಪ್ರತಿಭಟನೆ ನಡೆಸಿದರು. ಇದೇ ವೇಳೆಯೇ ಪೊಲೀಸರ ಮೇಲೆ ಹಲ್ಲೆ ಮಾಡಲು ಯತ್ನಿಸಿದರು. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿ ಪ್ರಹಾರ ಮಾಡಿದರು.</p>.<p>ಜೆ.ಸಿ.ನಗರ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಆಫ್ರಿಕಾ ಪ್ರಜೆಯನ್ನು ವಶಕ್ಕೆ ಪಡೆದಿದ್ದರು. ಅವರ ಬಳಿ 5 ಗ್ರಾಂ ಎಂಡಿಎಂಎ ಪತ್ತೆಯಾಗಿತ್ತು ಎನ್ನಲಾಗಿದೆ.</p>.<p>ಆರೋಪಿಯನ್ನು ಠಾಣೆಗೆ ಕರೆತಂದು ಪೊಲೀಸರು ವಿಚಾರಣೆ ನಡೆಸುತ್ತಿದ್ದರು. ಅದೇ ವೇಳೆಯೇ ಆಫ್ರಿಕಾ ಪ್ರಜೆಗೆ ಎದೆನೋವು ಕಾಣಿಸಿಕೊಂಡಿತ್ತು. ಪೊಲೀಸರು ಅವರನ್ನು ಚಿರಾಯು ಆಸ್ಪತ್ರೆಗೆ ಕರೆದೊಯ್ದರು. ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ ಎಂದು ಗೊತ್ತಾಗಿದೆ. ಈ ಸಾವಿನ ಬಗ್ಗೆ ಸಿಐಡಿ ಪೊಲೀಸರು, ತನಿಖೆ ಆರಂಭಿಸಿದ್ದಾರೆ.</p>.<p><strong>ಠಾಣೆ ಎದುರು ಗುಂಪು: </strong>‘ಪೊಲೀಸರ ಕಿರುಕುಳದಿಂದ ಆಫ್ರಿಕಾ ಪ್ರಜೆ ಮೃತಪಟ್ಟಿದ್ದಾರೆ ಎಂದು ಆರೋಪಿಸಿದ್ದ ಕೆಲವರು ಠಾಣೆ ಎದುರು ಗುಂಪು ಸೇರಿ ಪ್ರತಿಭಟನೆ ನಡೆಸಿದರು. ಸ್ಥಳಕ್ಕೆ ಬಂದ ಉತ್ತರ ವಿಭಾಗದ ಡಿಸಿಪಿ ಧರ್ಮೇಂದ್ರಕುಮಾರ್ ಮೀನಾ, ಪ್ರತಿಭಟನಾಕಾರರ ಮನವೋಲಿಸಲು ಯತ್ನಿಸಿದ್ದರು.</p>.<p>ಅದಕ್ಕೆ ಒಪ್ಪದ ಪ್ರತಿಭಟನಾಕಾರರು, ಪೊಲೀಸರ ಮೇಲೆಯೇ ಹಲ್ಲೆ ಮಾಡಲು ಮುಂದಾದರು. ಅದೇ ಸಂದರ್ಭದಲ್ಲೇ ಪೊಲೀಸರು, ಲಾಠಿ ಪ್ರಹಾರ ಮಾಡಿದರು. ಸದ್ಯ 25ಕ್ಕೂ ಹೆಚ್ಚು ಮಂದಿಯನ್ನು ವಶಕ್ಕೆ ಪಡೆಯಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>