<p><strong>ಬೆಂಗಳೂರು</strong>: ಗ್ರಾಹಕರೊಬ್ಬರ ಜೊತೆ ಟೆಸ್ಟ್ ಡ್ರೈವ್ನಲ್ಲಿದ್ದ ವೇಳೆ ಕಾರು ಮಳಿಗೆಯ ಸೇಲ್ಸ್ ಕನ್ಸಲ್ಟೆಂಟ್ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ.</p>.<p>ಕಲ್ಯಾಣಿ ಮೋಟಾರ್ಸ್ ಕಾರು ಶೋರೂಂ ಉದ್ಯೋಗಿ ರಾಂಪುರ ನಿವಾಸಿ ಸುಬ್ರಮಣಿ (51) ಮೃತಪಟ್ಟವರು.</p>.<p>ಮಂಗಳವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಕಾಡುಗೋಡಿ ರೈಲು ನಿಲ್ದಾಣದ ಮುಂಭಾಗದಲ್ಲಿ ಗ್ರಾಹಕರೊಬ್ಬರ ಜೊತೆ ಕಾರು ಚಾಲನೆ ಮಾಡಿಕೊಂಡು ಹೋಗುತ್ತಿದ್ದ ವೇಳೆ ಸುಬ್ರಮಣಿ ಅವರಿಗೆ ಲಘು ಹೃದಯಾಘಾತ ಉಂಟಾಗಿತ್ತು. ತಕ್ಷಣ ಅವರನ್ನು ಸಮೀಪದ ಆ್ಯಕ್ಸಿಸ್ ಆಸ್ಪತ್ರೆಗೆ ಕರೆದೊಯ್ದರೂ ಪ್ರಯೋಜನವಾಗಲಿಲ್ಲ.</p>.<p>ಮೃತದೇಹವನ್ನು ವೈದೇಹಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದ್ದು, ಬುಧವಾರ ಮರಣೋತ್ತರ ಪರೀಕ್ಷೆಯ ಬಳಿಕ ಸಂಬಂಧಿಕರಿಗೆ ಹಸ್ತಾಂತರಿಸಲಾಗುವುದು ಎಂದು ಕಾಡುಗೋಡಿ ಠಾಣೆಯ ಪೊಲೀಸರು ತಿಳಿಸಿದರು. ಸುಬ್ರಮಣಿ ಅವರ ಮಗ ಶಶಾಂಕ್ ನೀಡಿದ ದೂರಿನ ಮೇಲೆ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಗ್ರಾಹಕರೊಬ್ಬರ ಜೊತೆ ಟೆಸ್ಟ್ ಡ್ರೈವ್ನಲ್ಲಿದ್ದ ವೇಳೆ ಕಾರು ಮಳಿಗೆಯ ಸೇಲ್ಸ್ ಕನ್ಸಲ್ಟೆಂಟ್ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ.</p>.<p>ಕಲ್ಯಾಣಿ ಮೋಟಾರ್ಸ್ ಕಾರು ಶೋರೂಂ ಉದ್ಯೋಗಿ ರಾಂಪುರ ನಿವಾಸಿ ಸುಬ್ರಮಣಿ (51) ಮೃತಪಟ್ಟವರು.</p>.<p>ಮಂಗಳವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಕಾಡುಗೋಡಿ ರೈಲು ನಿಲ್ದಾಣದ ಮುಂಭಾಗದಲ್ಲಿ ಗ್ರಾಹಕರೊಬ್ಬರ ಜೊತೆ ಕಾರು ಚಾಲನೆ ಮಾಡಿಕೊಂಡು ಹೋಗುತ್ತಿದ್ದ ವೇಳೆ ಸುಬ್ರಮಣಿ ಅವರಿಗೆ ಲಘು ಹೃದಯಾಘಾತ ಉಂಟಾಗಿತ್ತು. ತಕ್ಷಣ ಅವರನ್ನು ಸಮೀಪದ ಆ್ಯಕ್ಸಿಸ್ ಆಸ್ಪತ್ರೆಗೆ ಕರೆದೊಯ್ದರೂ ಪ್ರಯೋಜನವಾಗಲಿಲ್ಲ.</p>.<p>ಮೃತದೇಹವನ್ನು ವೈದೇಹಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದ್ದು, ಬುಧವಾರ ಮರಣೋತ್ತರ ಪರೀಕ್ಷೆಯ ಬಳಿಕ ಸಂಬಂಧಿಕರಿಗೆ ಹಸ್ತಾಂತರಿಸಲಾಗುವುದು ಎಂದು ಕಾಡುಗೋಡಿ ಠಾಣೆಯ ಪೊಲೀಸರು ತಿಳಿಸಿದರು. ಸುಬ್ರಮಣಿ ಅವರ ಮಗ ಶಶಾಂಕ್ ನೀಡಿದ ದೂರಿನ ಮೇಲೆ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>