ಅವೈಜ್ಞಾನಿಕ ಸಂಪ್ರದಾಯಗಳನ್ನು ಅವರು ಬಲವಾಗಿ ವಿರೋಧಿಸುತ್ತಿದ್ದರು. ವೇದಗಳ ಕುರಿತಾದ ರಾಷ್ಟ್ರೀಯ ಹಾಗೂ ಅಂತರ ರಾಷ್ಟ್ರೀಯ ಸಮ್ಮೇಳನಗಳಲ್ಲಿ ಪ್ರಬಂಧ ಗಳನ್ನು ಮಂಡಿಸಿದ್ದ ಅವರು, ವೇದ ಮಂತ್ರಗಳ ಅರ್ಥ ವಿವರಣೆ ಸಹಿತವಾಗಿ ಬ್ರಾಹ್ಮಣೇತರರು, ಮಹಿಳೆಯರುಹಾಗೂ ಬಾಲಕಿಯರಿಗೂ ಉಪನಯನ ಸಂಸ್ಕಾರ ಮಾಡಿಸಿದ್ದರು. ಇವರ ಅಂತ್ಯಸಂಸ್ಕಾರ ನಗರದ ಚಾಮರಾಜಪೇಟೆಯಲ್ಲಿ ಸೋಮವಾರ ಸಂಜೆ ನಡೆಯಿತು.