ಈ ಸಂಬಂಧ ಇನ್ಸ್ಪೆಕ್ಟರ್ ಹಾಗೂ ಎಸಿಪಿ ಶಿಫಾರಸಿನ ಮೇರೆಗೆ ಠಾಣೆಯ ನಾಲ್ವರು ಕಾನ್ಸ್ಟೆಬಲ್ಗಳನ್ನು ಪೂರ್ವ ವಿಭಾಗದ ಡಿಸಿಪಿ ಅಮಾನತು ಪಡಿಸಿದ್ದರು. ಈ ವಿಚಾರ ತಿಳಿದ ಒಬ್ಬ ಕಾನ್ಸ್ಟೆಬಲ್, ಪಿಐ ಮತ್ತು ಎಸಿಪಿಗೆ ಕರೆ ಮಾಡಿ ಚಾಕುವಿನಿಂದ ಇರಿದು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದರು. ಅದರಿಂದ ವಿಚಲಿತಗೊಂಡ ಪಿಐ ಮತ್ತು ಎಸಿಪಿ ಶಿಫಾರಸು ಪತ್ರ ವಾಪಸ್ ಪಡೆದುಕೊಂಡಿದ್ದರು. ಅಲ್ಲದೇ, ಕಾನ್ಸ್ಟೆಬಲ್ನನ್ನು 1 ತಿಂಗಳ ಕಡ್ಡಾಯ ರಜೆ ಮೇಲೆ ಕಳುಹಿಸಲಾಗಿತ್ತು. ಇದೇ ಪ್ರಕರಣದ ತನಿಖೆಯನ್ನು ಸಿಸಿಬಿ ವರ್ಗಾವಣೆ ಮಾಡಲಾಗಿದೆ.